Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಅಬ್ದುಲ್ ಕಲಾಂ ಭಾರತದ ಹೆಮ್ಮೆಯ ವಿಜ್ಞಾನಿ ಮಿಸೈಲ್ ಮೆನ್ : ದತ್ತಾ ವಾಸ್ಟರ್

ಅಥಣಿ : ಭಾರತದ ಹೆಮ್ಮೆಯ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ನಮ್ಮ ದೇಶ ಮತ್ತು ಪ್ರಪಂಚದ ಕಂಡ ಮಹಾನ್ ವಿಜ್ಞಾನಿ "ಮಿಸೈಲ್ ಮೆನ್" ಎಂದೇ ಖ್ಯಾತಿ ಪಡೆದಿದ್ದರು ಎಂದು ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್ ಹೇಳಿದರು.

 ಅವರು ಅಥಣಿ ಪಟ್ಟಣದ ಡಾ. ಎಪಿಜೆ ಅಬ್ದುಲ್ ಕಲಾಂ ವೃತ್ತದಲ್ಲಿ ಅಥಣಿ ತಾಲೂಕಾ ಮೈನಾರಿಟಿ ಸೋಷಿಯಲ್ ಆಂಡ್ ವೆಲ್ಫೇರ್ ಕಮಿಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಲಾಂ ಅವರ 94ನೇ ಜಯಂತಿ ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಸರಳತೆ, ಪ್ರಾಮಾಣಿಕತೆ, ಮೇರು ವ್ಯಕ್ತಿತ್ವದ ದೇಶಪ್ರೇಮಿ ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಎನಿಸಿಕೊಂಡಿದ್ದ ಕಲಾಂ ಅವರು ನಮ್ಮ ದೇಶದ ವಿಜ್ಞಾನಿಗಳಾಗಿ, ರಾಷ್ಟ್ರಪತಿಗಳಾಗಿ ಅನೇಕ ವೈಜ್ಞಾನಿಕ ಕೊಡುಗೆಗಳನ್ನು ನೀಡಿದ್ದಾರೆ. ಅವರು ತೋರಿದ ಮಾರ್ಗದಲ್ಲಿ ನಾವು ನೀವೆಲ್ಲರೂ ಸೇವೆಯನ್ನು ಮಾಡುವ ಮೂಲಕ ಅಪ್ಪಟ ದೇಶ ಪ್ರೇಮಿಗಳಾಗಬೇಕು. ಅವರ ಬದುಕಿನ ಮೌಲ್ಯಗಳು, ಸರಳ ಸಜ್ಜನಿಕಿಯ ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಬೇಕು ಎಂದು ಅವರು ತಮ್ಮ ಇಡೀ ಜೀವನವನ್ನು ಭಾರತ ದೇಶದ ಏಳಿಗೆಗೆ ಮುಡಿಪಾಗಿಟ್ಟರು. ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯನ್ನು ವಿಶೇಷ ರೀತಿಯಲ್ಲಿ ಆಚರಿಸಬೇಕು ಎಂದು ಅಭಿಪ್ರಾಯಪಟ್ಟರು

ಆನಂತರ ಅಥಣಿ ತಾಲೂಕಾ ಮೈನಾರಿಟಿ ಸೋಷಿಯಲ್ ಆಂಡ್ ವೆಲ್ಫೇರ್ ಕಮಿಟಿ ತಾಲೂಕಾ ಅಧ್ಯಕ್ಷ ಅಯಾಜ್ ಮಾಸ್ಟರ್ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಡಾ. ಅಬ್ದುಲ್ ಕಲಾಂ ಅವರು ಬಡತನದಲ್ಲಿ ಜೀವನ ನಡೆಸಿ, ತಮ್ಮ ಜ್ಞಾನ

ಕೌಶಲ್ಯದಿಂದ ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಉನ್ನತ ಕೊಡುಗೆ ನೀಡಿದ್ದಾರೆ ಎಂದು ಅವರು ತಮ್ಮ ಜೀವನದಲ್ಲಿ ವೈಯಕ್ತಿಕ ಗಳಿಕೆಯ ಬಗ್ಗೆ ಯೋಚಿಸದೆ, ನಾನು ದೇಶಕ್ಕಾಗಿ ಏನು ಮಾಡಬೇಕು ಎಂಬ ಒಂದೇ ವಿಚಾರವನ್ನು ಇಟ್ಟುಕೊಂಡು, ಕೊನೆಗೆ ದೇಶಕ್ಕೆ ಕ್ಷಿಪಣಿಗಳನ್ನು ನೀಡುವಲ್ಲಿ ಯಶಸ್ವಿಯಾದರು. ಅವರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪುರಸಭೆಯವರು ವೃತ್ತದ ನಾಮಕರಣಕ್ಕೆ ಸಹಕಾರ ನೀಡಬೇಕು. ಮುಂದಿನ ದಿನಮಾನಗಳಲ್ಲಿ ಸ್ಥಾಳಾವಕಾಶ ಸಿಕ್ಕರೆ ಉದ್ಯಾನವನ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದರು.

ಪುರಸಭೆ ಸದಸ್ಯ ರಾವಸಾಬ ಐಹೊಳೆ ಮಾತನಾಡಿ, ಎ.ಪಿ.ಜೆ. ಅಬ್ದುಲ ಕಲಾಂ ಅವರು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಅವರು ಜಾತ್ಯತೀತ ಹಾಗೂ ಪಕ್ಷಾತೀತ ನಾಯಕರಾಗಿದ್ದರು. ದೇಶದ ಎಲ್ಲಾ ರಾಷ್ಟ್ರಪತಿಗಳಲ್ಲಿ ಡಾ. ಅಬ್ದುಲ್ ಕಲಾಂ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ರಕ್ಷಣಾ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಪುರಸಭೆ ಸದಸ್ಯ ಮಲ್ಲಿಕಾರ್ಜುನ ಬುಟಾಳಿ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಸೈಯ್ಯದಅಮೀನ ಗದ್ಯಾಳ. ರಿಯಾಜ್ ಸನದಿ. ಪ್ರಮೋದ ಬಿಳ್ಳೂರ. ಕನ್ನಡಪರ ಹೋರಾಟಗಾರರಾದ ಅಣ್ಣಾಸಾಬ ತೆಲಸಂಗ. ಶಬ್ಬೀರ್ ಸಾತಬಚ್ಚೆ. ನ್ಯಾಯವಾದಿ ಮಿತೇಶ ಪಟ್ಟಣ. ಮುಖಂಡರಾದ ಅಸ್ಲಮ್ ನಾಲಬಂದ. ಆಬೀದ ಮಾಸ್ಟರ್. ಸೈಯ್ಯದ್ ಗಡ್ಡೇಕರ. ಬಾಬು ಖೇಮಲಾಪುರ. ಇಸ್ರತ್ ಗದ್ಯಾಳ. ಸಲೀಮ್ ಅರಟಾಳ. ಮಹಾಂತೇಶ ಬಾಡಗಿ. ಬೀರಪ್ಪ ಯಕಂಚ್ಚಿ.  ಸೋಹೆಲ್ ಕಾಜಿ. ಗುಲಾಬ ನಾಲಬಂದ. ಡಾ. ಸಾದೀಕ್ ಗಲಗಲಿ. ಶೌಕತ್ ಮುಕ್ಕೇರಿ. ಸೋಹೆಲ್ ಕಿರಣಗಿ. ಶಿರಾಜ ಸನದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು ಶಿಕ್ಷಕ

ಅಜಹರ ಮುಲ್ಲಾ ನಿರೂಪಿಸಿ. ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ