Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಕ್ತದಾನದಿಂದ ಮನುಷ್ಯನ ಆರೋಗ್ಯ ವೃದ್ಧಿ: ಡಾ.ಅಲ್ಲಮಪ್ರಭು ಮಹಾಸ್ವಾಮಿ

ಬೆಳಗಾವಿ:  ಒಂದು ಜೀವವನ್ನು ಉಳಿಸಬೇಕಿದ್ದರೆ ವೈದ್ಯರೇ ಆಗಬೇಕೆಂದಿಲ್ಲ. ಆಪತ್ಕಾಲದಲ್ಲಿ ಸಹಾಯ ಮಾಡುವುದರಿಂದಲೂ ಇನ್ನೊಬ್ಬರ ಜೀವವನ್ನು ಉಳಿಸಲು ಸಾಧ್ಯ.   ರಕ್ತದಾನವು ಜೀವಗಳನ್ನು ಉಳಿಸುವುದಲ್ಲದೆ, ದಾನಿಗಳ ಅರೋಗ್ಯಕ್ಕೂ ಪ್ರಯೋಜನಕಾರಿಯಾಗಿದೆ ಎಂದು ನಾಗನೂರು ರುದ್ರಾಕ್ಷಿಮಠದ   ಡಾ.ಅಲ್ಲಮಪ್ರಭು ಮಹಾಸ್ವಾಮಿಗಳು ಹೇಳಿದರು.

ನಗರದ ರಾಮತೀರ್ಥನಗರದ ಸಭಾಭವನದಲ್ಲಿ  ಸುರೇಶ ಯಾದವ ಪೌಂಡೇಶನ್ ಹಾಗೂ ಕೆಎಲ್‌ಇ ಬ್ಲಡ್ ಬ್ಯಾಂಕ್ ಮತ್ತು ರೋಹನ್  ಸ್ಪೆಷಲಿಟಿ ಕ್ಲಿನಿಕ್ ಇವರ ಸಂಯುಕ್ತ ಆಶ್ರಯ ದಲ್ಲಿ ಸುರೇಶ ಯಾದವ ಅವರ 25 ನೇ ಮದುವೆಯ ವಾರ್ಷಿಕೋತ್ಸವದ ನಿಮಿತ್ತ ರಕ್ತದಾನ ಮತ್ತು ಆರೋಗ್ಯ ಶಿಬಿರ  ಉದ್ಘಾಟಿಸಿ, ದಿವ್ಯ ಸಾನಿದ್ಯ ವಹಿಸಿ  ಅವರು ಮಾತನಾಡಿದರು.

ರಕ್ತದಾನದಿಂದ ಮನುಷ್ಯನ ಆರೋಗ್ಯ ವೃದ್ಧಿಯಾಗಲಿದೆ.  ಮತ್ತು ಹೃದಯದ ಅರೋಗ್ಯ ಸುಧಾರಿಸಬಹುದು. ರಕ್ತದಾನದಿಂದ ಸಗಾರವಾಗಿ ಪರಿಚಲನೆಯನ್ನು ಸುಧಾರಿಸುತ್ತದೆ ಮತ್ತು ಮಾನಸಿಕ ತೃಪ್ತಿಯನ್ನು ನೀಡುತ್ತದೆ. ಮತ್ತೆ ಯುವಕರಂತೆ ಕಾಣಲು ಸಹಕಾರಿಯಾಗಲಿದೆ ಎಂದು ಶ್ರೀಗಳು ಹೇಳಿದರು.

ಅಧ್ಯಕ್ಷ  ಸುರೇಶ ಯಾದವ  ಅವರು ಮಾತನಾಡಿ,  ರಕ್ತದಾನ ಮಾಡುವದರಿಂದ ಕ್ಯಾಲೋರಿಗಳ್ ದಹನ, ಹೃದಯದ ಅರೋಗ್ಯ, ಕಬ್ಬಿಣದ ನಿಯಂತ್ರಣ, ಮಾಣಿಸಿಕ್ ತೃಪ್ತಿ ದೊರೆಯುತ್ತದೆ. ಪ್ರತಿ ಪಿಂಟ್ ರಕ್ತವು ಅಪಘಾತಗಳು, ಶಸ್ತ್ರಚಿಕಿತ್ಸೇಗಳು ಮತ್ತು ಇತರ ತುರ್ತು ಪರಿಸ್ಥಿತಿಗಳಲ್ಲಿ ಅಗತ್ಯ ವಿರುವ ಸಹಾಯ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು.
ಅದಲ್ಲದೆ ಕ್ಯಾನ್ಸರ್, ತೀವ್ರಗಾಯಗಳು ಮತ್ತು ಇತರ ಕಾಯಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ  ಸಹಾಯವಾಗುತ್ತದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಮಾಜಿ ಕೆಎಂಡಿಸಿ (KMDC )ಅಧ್ಯಕ್ಷರಾದ ಮುಕ್ತಾರ ಪಠಣ ಅವರು ಮಾತನಾಡಿ,  ರಕ್ತದಾನವು ಸಮುದಾಯದ ಸದಸ್ಯರ ನಡುವೆ ಒಗ್ಗಟ್ಟು ಮತ್ತು ಪರಸ್ಪರ ಸಹಕಾರದ ಸಂಕೇತವಾಗಿದೆ.

ರಕ್ತದಾನ ಮಾಡುವುದು ಬೆದರಿಸುವಂತೆ ಕಾಣಿಸಬಹುದು. ಆದರೆ ಇದು ಯಾರೊಬ್ಬರ ಜೀವವನ್ನು ಉಳಿಸಲು ಸಹಾಯ ಮಾಡುವ ಸುಲಭ ಪ್ರಕ್ರಿಯೆ.
ರಕ್ತದಾನ ಮಾಡುವುದರಿಂದ ಅಗತ್ಯವಿರುವವರಿಗೆ ಸಿಗುವ ಪ್ರಯೋಜನೆಗಳಿಗೆ ಅಂತ್ಯವಿಲ್ಲ.  ಅಮೇರಿಕನ್ ರೆಡ್ ಕ್ರಾಸ್ ಪ್ರಕಾರ. ಒಂದು ರಕ್ತದಾನದಿಂದ್ ಮೂರು ಜೀವಗಳನ್ನು ಉಳಿಸಬಹುದು ಎಂದರು.

ಸುರೇಶ ಯಾದವ ಫೌಂಡೇಶನ್ ದ ರಕ್ತದಾನ ಶಿಬಿರದಲ್ಲಿ ಸುಮಾರು 200 ಜನ ಅರೋಗ್ಯ ತಪಾಸನೆ ಮಾಡಿಸಿಕೊಂಡರು. ಸುಮಾರು 50 ಜನ ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ  ಡಾ. ರೋಹನ್ ಕಮತಗಿ, ಕೆಎಲ್‌ಇ  ಬ್ಲಡ್ ಬ್ಯಾಂಕಿನ ಡಾ.ಎಸ್‌  ಜಿರಗಿ ,  ಡಾ. ವಿಠಲ್ ಮಾನೆ, ಪೂರ್ಣಿಮಾ ಯಾದವ, ಸಂತೋಷ ಮೆರೆಕಾರ್ ,   ಮುಕ್ತಾರ್ ಪಠಾನ್ ಅವರು  ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿರಾದಾರ್, ಡಿಕ್ಸಿತ, ಪಾಟೀಲ್, ತೋರಗಲ್, ಕೊಲ್ಕರ್  ಹಾಗೂ ಇತರರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ