Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಬಡವರು, ದೀನದಲಿತರ ಕಣ್ಣೀರು ಒರೆಸಿದ ಶ್ರೇಷ್ಠ ವ್ಯಕ್ತಿ ಡಾ.ಬಾಬು ಜಗಜೀವನರಾಂ"

ಯರಗಟ್ಟಿ: ‘ಅಧಿಕಾರ ಮತ್ತು ಐಶ್ವರ್ಯದಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ, ತ್ಯಾಗದಿಂದ ಸಂಪಾದಿಸಬಹುದು ಎನ್ನುವ ಸಂದೇಶ ಸಾರಿದ ಹೆಗ್ಗಳಿಕೆ ಡಾ.ಬಾಬು ಜಗಜೀವನರಾಂ ಅವರಿಗೆ ಸಲ್ಲುತ್ತದೆ’ ಎಂದು ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಹೇಳಿದರು.

ತಾಲೂಕಾ ಆಡಳಿತ ಪಟ್ಟಣ ಪಂಚಾಯತ, ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ರವಿವಾರ ಜನತಾ ಕಾಲೋನಿಯ ಬಾಬು ಜಗಜೀವನರಾಮ ಭವನದಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ ೧೧೯ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದ ಜನರು ಅಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಿ ನೆರವಾದರು’ ಎಂದು ತಿಳಿಸಿದರು.

‘ಇಂತಹ ಮಹಾನ್ ನಾಯಕರ ಕೊಡುಗೆ, ತತ್ವಾದರ್ಶಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬಸವೇಶ್ವರ ಪ್ರೌಢ ಶಾಲೆಯ ಶಿಕ್ಷಕ ಡಾ. ಕುಮಾರ ದಾಸರ ಮಾತನಾಡಿ, ‘ಬಾಬು ಜಗಜೀವನರಾಂ ಅವರು ದೇಶ ಕಂಡ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ದಕ್ಷ ಆಡಳಿತಗಾರರಾಗಿದ್ದರು. ಹಸಿರು ಕ್ರಾಂತಿಯ ಹರಿಕಾರರಾಗಿ ಜನಸಾಮಾನ್ಯರು ಎಂದಿಗೂ ಮರೆಯದ ವ್ಯಕ್ತಿತ್ವವನ್ನು ಹೊಂದಿದ್ದರು. ಬಡವರು, ದೀನದಲಿತರ ಕಣ್ಣೀರು ಒರೆಸಿದ ಶ್ರೇಷ್ಠ ವ್ಯಕ್ತಿತ್ವದವರಾಗಿದ್ದರು’ ಎಂದು ಹೇಳಿದರು.

ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಶು ವೈದ್ಯಾಧಿಕಾರಿ ಎಂ ವ್ಹಿ ಪಾಟೀಲ, ಪಿಎಸ್‌ಐ ಎಲ್ ಬಿ ಮಾಳಿ, ಪ. ಪಂ. ಸದಸ್ಯ ಸಲಿಂಬೇಗ ಜಮಾದಾರ, ಭಾಸ್ಕರ ಹಿರೇಮೆತ್ರಿ, ಸಂತೋ? ಚನ್ನಮೆತ್ರಿ, ಲಕ್ಕಪ್ಪ ಹುಣಶೀಕಟ್ಟಿ, ಲಕ್ಕಪ್ಪ ಜಗದಾರ, ಸುರೇಶ ಭಜಂತ್ರಿ, ರಫೀಕ ಡಿಕೆ, ಪುಂಡಲೀಕ ತಳವಾರ, ಮಹಾಂತೇಶ ಚನ್ನಮೇತ್ರಿ, ಅರುಣ ನೀಲಪ್ಪನ್ನವರ, ಯಲ್ಲಪ್ಪ ಪಟ್ಟಪನ್ನವರ, ಲಂಕೇಶ ಮೇತ್ರಿ, ಸುರೇಶ ತಮ್ಮಣ್ಣವರ, ಹನಮಂತ ನರೇರ, ಯಲ್ಲಪ್ಪ ಹೊಸಮನಿ, ಬೀಮಶೆಪ್ಪ ಮುಡೆನ್ನವರ ಸೇರಿದಂತೆ ಸಮಾಜದ ಹಿರಿಯರು ಹಾಗೂ ತಾಲೂಕಾ ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಇದ್ದರು.
೦೫ಯರಗಟ್ಟಿ ೦೧
ಪೋಟೋ ಶೇಷಿಕೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ