Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜು.6ಕ್ಕೆ ಬೆಳಗಾವಿಗೆ ಡಾ.ಭಾಗವತರ ಆಗಮನ

ಜು.10 ರಿಂದ ಆರ್‌ಎಸ್‌ಎಸ್‌ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಗೆ ದೇಶದಾದ್ಯಂತ ಪ್ರಚಾರಕರು ಭಾಗಿ

ಹಸಿರು ಕ್ರಾಂತಿ ವರದಿ ಬೆಳಗಾವಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಯು ಜು.10, 11 ಹಾಗೂ 12 ರಂದು ಬೆಳಗಾವಿಯಲ್ಲಿ ನಡೆಯಲಿದ್ದು, ಈ ಸಭೆಯ ನಿಮಿತ್ತ ಜು.6 ರಂದು ಬೆಳಗಾವಿಗೆ ಸರಸಂಘಚಾಲಕರಾದ ಡಾ.ಮೋಹನ್ ಭಾಗವತರು ಆಗಮಿಸಲಿದ್ದಾರೆ. 

ಸಭೆಯಲ್ಲಿ ದೇಶದಾದ್ಯಂತದ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ. ಸಂಘದ ಸಂಘಟನಾ ವ್ಯವಸ್ಥೆಯಂತೆ ದೇಶದ 11 ಕ್ಷೇತ್ರಗಳು ಹಾಗೂ 46 ಪ್ರಾಂತಗಳಿಂದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದರೊಂದಿಗೆ ಸಂಘಪ್ರೇರಿತ 32 ಸಂಘಟನೆಗಳ ಅಖಿಲ ಭಾರತೀಯ ಸಂಘಟನಾ ಮಂತ್ರಿಗಳು ಸಹ ಸಭೆಯಲ್ಲಿ ಉಪಸ್ಥಿತರಿರುವರು.

Advertisement

2026ರ ಮಾರ್ಚ್ ತಿಂಗಳಲ್ಲಿ ಹರಿಯಾಣದ ಸಮಾಲ್ಖಾದಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ನಂತರ, ಏಪ್ರಿಲ್, ಮೇ ಹಾಗೂ ಜೂನ್ ತಿಂಗಳುಗಳಲ್ಲಿ ದೇಶದಾದ್ಯಂತ ವಿವಿಧ ಹಂತಗಳ ಸಂಘ ಶಿಕ್ಷಣ ವರ್ಗಗಳು ಯಶಸ್ವಿಯಾಗಿ ನಡೆದವು. ಈ ಸಭೆಯಲ್ಲಿ ಶಾಖಾಮಟ್ಟದಲ್ಲಿ ವಾರ್ಷಿಕ ಕಾರ್ಯ ಯೋಜನೆಯ ಅನುಷ್ಠಾನದ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಯಲಿದೆ. 

ಸಂಘ ಶತಾಬ್ದಿ ವರ್ಷದ ಅಂಗವಾಗಿ ನಡೆದಿರುವ ಶಾಖಾ ಕಾರ್ಯದ ವಿಸ್ತರಣೆಯ ಪರಿಶೀಲನೆ ಹಾಗೂ ಮುಂದಿನ ದಿನಗಳಲ್ಲಿ ಶಾಖೆಗಳ ಸಂಖ್ಯೆಯನ್ನು ಇನ್ನಷ್ಟು ಗರಿಷ್ಠ ಮಟ್ಟಕ್ಕೆ ವಿಸ್ತರಿಸುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, 2026ರ ಸಂಘ ಶಿಕ್ಷಣ ವರ್ಗಗಳ ವಿಮರ್ಶೆ, ಶತಾಬ್ದಿ ವರ್ಷದಲ್ಲಿ ಪೂರ್ಣಗೊಂಡ ಕಾರ್ಯಕ್ರಮಗಳ ಅವಲೋಕನ, ಉಳಿದಿರುವ ಕಾರ್ಯಕ್ರಮಗಳ ಯೋಜನೆ ಹಾಗೂ ಸರಸಂಘಚಾಲಕರ 2026-27ರ ಪ್ರವಾಸ ಯೋಜನೆ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಗುವುದು. 

ಸಂಘ ಶತಾಬ್ದಿ ವರ್ಷದ (2025-26) ಉಳಿದ ಕಾರ್ಯಕ್ರಮಗಳು 2026ರ ಅಕ್ಟೋಬರ್ 20 ರಂದು ವಿಜಯದಶಮಿಯವರೆಗೆ ಮುಂದುವರಿಯಲಿವೆ. ಸಭೆಯಲ್ಲಿ ಭಾಗವಹಿಸುವ ಪ್ರಚಾರಕರು ಪ್ರಸ್ತುತ ರಾಷ್ಟ್ರೀಯ ಪರಿಸ್ಥಿತಿ ಹಾಗೂ ಜನಗಣತಿ ಸೇರಿದಂತೆ ಸಮಕಾಲಿನ ಪ್ರಮುಖ ವಿಷಯಗಳ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದು, ಅವುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

ಈ ಸಭೆಯಲ್ಲಿ ಸರಸಂಘಚಾಲಕ ಡಾ.ಮೋಹನ ಭಾಗವತ, ಸರ್ಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ, ಸಹ ಸರ್ಕಾರ್ಯವಾಹರುಗಳಾದ ಡಾ.ಕೃಷ್ಣಗೋಪಾಲ, ಸಿ.ಆರ್.ಮುಕುಂದ, ಅರುಣ ಕುಮಾರ, ರಾಮದತ್ತ, ಆಲೋಕಕುಮಾರ, ಅತುಲ ಲಿಮಯೆ, ಜೊತೆಗೆ ಅಖಿಲ ಭಾರತೀಯ ಕಾರ್ಯ ವಿಭಾಗ ಪ್ರಮುಖರು ಹಾಗೂ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖರಾದ ಸುನೀಲ ಅಂಬೇಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಉಪನ್ಯಾಸಕ ಬಂಧನಸರ್ಕಾರಿ ಜಾಗದ ಕೊರತೆಯಿಂದ ಅಭಿವೃದ್ಧಿಗೆ ಹಿನ್ನಡೆ: ಶಾಸಕ ಬಾಬಾಸಾಹೇಬ ಪಾಟೀಲವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಜಾಗೃತಿ ಜಾಥಾ: ಮತದಾರರಾಗಿ ನೋಂದಾಯಿಸಿಕೊಳ್ಳುವಂತೆ ಸಿಓ ಪ್ರಶಾಂತ ಸಿ. ಕರೆದಲಿತ ನಾಯಕರ ಅವಹೇಳನ ಸಹಿಸುವುದಿಲ್ಲ: ಉಗ್ರ ಹೋರಾಟದ ಎಚ್ಚರಿಕೆ ನೀಡಿದ ದಲಿತ ಮುಖಂಡ ಸಂಜಯ ತಳವಲ್ಕರ್!ಮುದ್ದೇಬಿಹಾಳದಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಅರ್ಥಪೂರ್ಣ ಆಚರಣೆ"ಸತ್ಯ ಸಂಶೋಧನೆಯ ಭಾಗವೇ ಪತ್ರಕರ್ತ : ಡಾ||ಆನಂದ ಮಹಾರಾಜ ಗೋಸಾವಿ,ಎಲ್ ನಿನೋ ಪರಿಣಾಮ ಎದುರಿಸಲು ರಾಜ್ಯ ಸಜ್ಜಾಗಿದೆ: ಈಶ್ವರ ಖಂಡ್ರೆ ವಚನ ಸಾಹಿತ್ಯ ಸಂರಕ್ಷಣೆಗೆ ಡಾ. ಫ.ಗು. ಹಳಕಟ್ಟಿ  ಅವರ ಕೊಡುಗೆ ಅಪಾರ: ಡಾ. ಔದ್ರಾಮಜು.೫ರಂದು ೧೬ನೇ ಶಿವಯೋಗ ಸಮಾಧಿಯ ಮುಕ್ತಾಯ ಸಮಾರಂಭ