Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತ ಅಳವಡಿಸಿಕೊಳ್ಳಿ


ಬಳ್ಳಾರಿ,ಮೇ 13 ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಂಡಿಹಟ್ಟಿ ಪ್ರೌಢಶಾಲೆಯ ಆಂಗ್ಲ ಭಾಷೆಯ ಶಿಕ್ಷಕ ಹೆಚ್.ಏಸಯ್ಯ ಅವರು ಹೇಳಿದರು.
ನಗರದ ಕೋಟೆ ಪ್ರದೇಶದ ಶ್ರೀ ಮೇಧಾ ಪದವಿ ಪೂರ್ವ ವಿದ್ಯಾಲಯದಲ್ಲಿ ಮೈ ಭಾರತ್ (ಮೇರಾ ಯುವ ಭಾರತ್) ಹಾಗೂ ಚಿಗುರು ಕಲಾತಂಡ ಇಬ್ರಾಹಿಂಪುರ ಇವರ ಸಂಯುಕ್ರಾಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಜೀವನದಲ್ಲಿ ಎದುರಿಸಿದ ಕಠಿಣ ಸವಾಲುಗಳು ಮತ್ತು ದುಃಖದ ಘಟನೆಗಳನ್ನು ನಾವೆಲ್ಲರೂ ಇಂದು ಸ್ಮರಿಸಬೇಕಾಗಿದೆ ಎಂದರು.
ಇದೇ ವೇಳೆ ಭಾರತದ ಸಂವಿಧಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದಲ್ಲಿ  ಮತದಾನ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಮ್ ಕಿರಣ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಪ್ರತಿಯೊಬ್ಬ ಮಾನವನೂ ಸಮಾನವಾಗಿ ಬಾಳುವ ಹಕ್ಕನ್ನು ನೀಡಿದ್ದಾರೆ. ನಾವೆಲ್ಲರೂ ಪರಸ್ಪರ ಪ್ರೀತಿ ಮತ್ತು ಮಾನವೀಯತೆಯಿಂದ ಬದುಕಬೇಕು. ವಿದ್ಯಾರ್ಥಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
*ಕ್ರಾಂತಿ ಗೀತೆಗಳ ಗಾಯನ:*
ಜಾನಪದ ಕಲಾವಿದ ತಿಮ್ಮಲಾಪುರದ ಹನುಮಯ್ಯ ಅವರು ಅಂಬೇಡ್ಕರ್ ಅವರ ಹೋರಾಟದ ಬದುಕನ್ನು ಬಿಂಬಿಸುವ ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಇವರ ಗಾಯನವು ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ನೀಡಿತು.
ಈ ಸಂದರ್ಭದಲ್ಲಿ ಮೇರಾ ಯುವ ಭಾರತ್ ಕೇಂದ್ರದ ಅಮರೇಶ್ವರ, ಚಿಗುರು ಕಲಾತಂಡದ ಅಧ್ಯಕ್ಷ ಹುಲುಗಪ್ಪ ಎಸ್.ಎಂ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ