Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

’ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನವನ್ನು  ಪರಿಪಾಲಿಸಿ -ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮೀಜಿ 

ಬಬಲೇಶ್ವರ : ’ಮೊಬೈಲ್ ಬಿಡಿ ಪುಸ್ತಕ ಹಿಡಿ’ ಎಂಬ ವಿವೇಚನಾಪೂರ್ಣ ಚಿಂತನೆಯನ್ನು  ಮಕ್ಕಳ ಮನದಲ್ಲಿ ಮೂಡಿಸಿದಾಗ ಅವರ ಭವಿತವ್ಯದ ಬಾಗಿಲು ತೆರೆದಂತೆ. ಓದುವಲ್ಲಿನ ಆಸಕ್ತಿ ಬದುಕನ್ನು ಬರೆದು ಬಾಳನ್ನು ಬೆಳಗಿಸಬಲ್ಲದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಬಬಲೇಶ್ವರದ ಜಾನಕಿ ಶ್ರೀರಾಮ ವಿದ್ಯಾ ಮಂದಿರದ ೩೫ ನೇ ವಾರ್ಷಿಕೋತ್ಸವ ಹಾಗೂ ೭ ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

ಮಕ್ಕಳು ಮೊದಲು ಗುರುವಿನ ಗುಲಾಮನಾಗಬೇಕು. ಇಷ್ಟಪಟ್ಟು ಓದಿದಾಗ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಿಕೊಳ್ಳಲು ಸಾಧ್ಯ. ಸತತ ಓದು ವಿದ್ಯಾರ್ಥಿಗಳ ಗುರಿಗೆ ಸಾಧನೆಯ ಮೆಟ್ಟಿಲಾಗಬಹುದು ಎಂದರು.

ಗಲಗಲಿಯ ನಂದಿ ಶುಗರ್ಸ್ ಪ್ಯಾಕ್ಟರಿಯ ನಿರ್ದೇಶಕ ರಮೇಶ ಬಡ್ರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸು ಬಿಳಿಹಾಳೆ ಇದ್ದ ಹಾಗೆ. ಪ್ರೀತಿಯೆಂಬ ಲೆಕ್ಕಣಿಕೆಯಿಂದ ಬದುಕಿನ ಮುನ್ನುಡಿ ಬರೆಯಬೇಕು. ಆಗ ಅವರ ಕನಸು ನಾಳೆಯ ನನಸಾಗಿ ಜೀವನದ ಅಭ್ಯುದಯಕ್ಕೆ ನಾಂದಿಯಾಗಬಲ್ಲದು. ಪಾಲಕರು ಮಕ್ಕಳು ಶಾಲೆಗೆ ಹೋಗಿದ್ದಾರೆ ಎಂದು ಸುಮ್ಮನೆ ಕೂರದೆ ಅವರ ಬಗ್ಗೆ ಕಾಳಜಿ ವಹಿಸಬೇಕೆಂದರು.

ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ತಮಗೊಂಡ ಅಧ್ಯಕ್ಷತೆ ವಹಿಸಿದ್ದರು. ಶಿರಬೂರ ಪಿ.ಕೆ.ಪಿ.ಎಸ್.ಅಧ್ಯಕ್ಷ ರಾಮನಗೌಡ ಪಾಟೀಲ ಆರೋಗ್ಯ ಅಧಿಕಾರಿ ಡಾ.ಅಪ್ಪಾಸಾಹೇಬ ಇನಾಮದಾರ, ಡಾ. ಪವನ ಬಳ್ಳೂರ, ಕೆ.ಎಂ.ಎಫ್.ನಿರ್ದೇಶಕ ಸಿದರಾಯ ಜಂಗಮಶೆಟ್ಟಿ, ಅಮಸಿದ್ದ ಕಣಬೂರ ಅತಿಥಿಯಾಗಿದ್ದರು. ಈ ವೇಳೆ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಹಾಗೂ ಹತ್ತಲವು ಸ್ಪರ್ಧೆಗಳಲ್ಲಿ ಭಾಗವಹಿಸಿ, ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ಸಾಮಾನ್ಯ ಜ್ಞಾನ ಮತ್ತು ಆಟೋಟಗಳಲ್ಲಿ ವಿಜೇತರಾದ ಮಕ್ಕಳಿಗೆ  ಬಹುಮಾನ ವಿತರಿಸಲಾಯಿತು. ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಿಪಂ ಮಾಜಿ ಸದಸ್ಯ ಮಲ್ಲು ಕನ್ನೂರ ಸ್ವಾಗತಿಸಿದರು. ಶಿಕ್ಷಕ ಬಿ.ಎ. ಬಡಚಿ ನಿರೂಪಿಸಿದರು. ಮುಖ್ಯಶಿಕ್ಷಕ ಎಸ್.ಎಂ.ಕೋಟ್ಯಾಳ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ