Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

’ಮೊಬೈಲ್ ಬಿಡಿ ಪುಸ್ತಕ ಹಿಡಿ’ ಅಭಿಯಾನವನ್ನು  ಪರಿಪಾಲಿಸಿ -ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮೀಜಿ 

ಬಬಲೇಶ್ವರ : ’ಮೊಬೈಲ್ ಬಿಡಿ ಪುಸ್ತಕ ಹಿಡಿ’ ಎಂಬ ವಿವೇಚನಾಪೂರ್ಣ ಚಿಂತನೆಯನ್ನು  ಮಕ್ಕಳ ಮನದಲ್ಲಿ ಮೂಡಿಸಿದಾಗ ಅವರ ಭವಿತವ್ಯದ ಬಾಗಿಲು ತೆರೆದಂತೆ. ಓದುವಲ್ಲಿನ ಆಸಕ್ತಿ ಬದುಕನ್ನು ಬರೆದು ಬಾಳನ್ನು ಬೆಳಗಿಸಬಲ್ಲದು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಬಬಲೇಶ್ವರದ ಜಾನಕಿ ಶ್ರೀರಾಮ ವಿದ್ಯಾ ಮಂದಿರದ ೩೫ ನೇ ವಾರ್ಷಿಕೋತ್ಸವ ಹಾಗೂ ೭ ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಾನಿಧ್ಯವಹಿಸಿ ಅವರು ಆಶೀರ್ವಚನ ನೀಡಿದರು.

ಮಕ್ಕಳು ಮೊದಲು ಗುರುವಿನ ಗುಲಾಮನಾಗಬೇಕು. ಇಷ್ಟಪಟ್ಟು ಓದಿದಾಗ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಿಕೊಳ್ಳಲು ಸಾಧ್ಯ. ಸತತ ಓದು ವಿದ್ಯಾರ್ಥಿಗಳ ಗುರಿಗೆ ಸಾಧನೆಯ ಮೆಟ್ಟಿಲಾಗಬಹುದು ಎಂದರು.

ಗಲಗಲಿಯ ನಂದಿ ಶುಗರ್ಸ್ ಪ್ಯಾಕ್ಟರಿಯ ನಿರ್ದೇಶಕ ರಮೇಶ ಬಡ್ರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಮನಸು ಬಿಳಿಹಾಳೆ ಇದ್ದ ಹಾಗೆ. ಪ್ರೀತಿಯೆಂಬ ಲೆಕ್ಕಣಿಕೆಯಿಂದ ಬದುಕಿನ ಮುನ್ನುಡಿ ಬರೆಯಬೇಕು. ಆಗ ಅವರ ಕನಸು ನಾಳೆಯ ನನಸಾಗಿ ಜೀವನದ ಅಭ್ಯುದಯಕ್ಕೆ ನಾಂದಿಯಾಗಬಲ್ಲದು. ಪಾಲಕರು ಮಕ್ಕಳು ಶಾಲೆಗೆ ಹೋಗಿದ್ದಾರೆ ಎಂದು ಸುಮ್ಮನೆ ಕೂರದೆ ಅವರ ಬಗ್ಗೆ ಕಾಳಜಿ ವಹಿಸಬೇಕೆಂದರು.

ಆದರ್ಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ತಮಗೊಂಡ ಅಧ್ಯಕ್ಷತೆ ವಹಿಸಿದ್ದರು. ಶಿರಬೂರ ಪಿ.ಕೆ.ಪಿ.ಎಸ್.ಅಧ್ಯಕ್ಷ ರಾಮನಗೌಡ ಪಾಟೀಲ ಆರೋಗ್ಯ ಅಧಿಕಾರಿ ಡಾ.ಅಪ್ಪಾಸಾಹೇಬ ಇನಾಮದಾರ, ಡಾ. ಪವನ ಬಳ್ಳೂರ, ಕೆ.ಎಂ.ಎಫ್.ನಿರ್ದೇಶಕ ಸಿದರಾಯ ಜಂಗಮಶೆಟ್ಟಿ, ಅಮಸಿದ್ದ ಕಣಬೂರ ಅತಿಥಿಯಾಗಿದ್ದರು. ಈ ವೇಳೆ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಹಾಗೂ ಹತ್ತಲವು ಸ್ಪರ್ಧೆಗಳಲ್ಲಿ ಭಾಗವಹಿಸಿ, ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ಸಾಮಾನ್ಯ ಜ್ಞಾನ ಮತ್ತು ಆಟೋಟಗಳಲ್ಲಿ ವಿಜೇತರಾದ ಮಕ್ಕಳಿಗೆ  ಬಹುಮಾನ ವಿತರಿಸಲಾಯಿತು. ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಜಿಪಂ ಮಾಜಿ ಸದಸ್ಯ ಮಲ್ಲು ಕನ್ನೂರ ಸ್ವಾಗತಿಸಿದರು. ಶಿಕ್ಷಕ ಬಿ.ಎ. ಬಡಚಿ ನಿರೂಪಿಸಿದರು. ಮುಖ್ಯಶಿಕ್ಷಕ ಎಸ್.ಎಂ.ಕೋಟ್ಯಾಳ ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ