Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಟಕ, ಸಾಹಿತ್ಯ, ಗಮಕ ಕಲೆಯಿಂದಲೇ ಬಳ್ಳಾರಿ ಜಿಲ್ಲೆಗೆ ಕೀರ್ತಿ ತಂದ  ಡಾ.ಜೋಳದ ರಾಶಿ ದೊಡ್ಡನಗೌಡರು : ಎನ್ ಬಸವರಾಜ್






ಬಳ್ಳಾರಿ ಮೇ 13.: ಜೋಳದರಾಶಿ ದೊಡ್ಡನಗೌಡರೂ ನಾಟಕ, ಸಾಹಿತ್ಯ, ಗಮಕ ಕಲೆಗೆ ಮಾಡಿದ  ಸೇವೆ ಅಪಾರವಾದದ್ದು ಎಂದು ಎನ್ ಬಸವರಾಜ್  ಸ್ಮರಿಸಿದರು.  ಅವರು ನಗರದ ರಾಘವ ಕಲಮಂದಿರದಲ್ಲಿ  ದೊಡ್ಡನಗೌಡರ  30ನೇ ವರ್ಷದ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಬಳ್ಳಾರಿ ರಾಘವ ಕಲಾಮಂದಿರದಲ್ಲಿ, ರಾಘವ ಮೆಮೋರಿಯಲ್ ಅಸೋಸಿಯೇಷನ್, ವತಿಯಿಂದ ಹಮ್ಮಿಕೊಂಡಿದ್ದ ಡಾ.ಜೋಳದರಾಶಿ ದೊಡ್ಡನಗೌಡರ 30ನೇ ವಾರ್ಷಿಕ  ಪುಣ್ಯ ತಿಥಿ ಕಾರ್ಯಕ್ರಮವನ್ನು ಸಂಸ್ಥೆಯ ಪದಾಧಿಕಾರಿಗಳು ಮತ್ತು ಗೌಡರ ಕುಟುಂಬದವರು ಸೇರಿ ಜ್ಯೋತಿ ಬೆಳಗಿಸಿ, ಪುಷ್ಪಾಂಜಲಿ ಅರ್ಪಿಸುವ ಮೂಲಕ ಉದ್ಘಾಟಿಸಿದರು.


ಭಾಗವಹಿಸಿ ಮಾತನಾಡಿ, ತಾಯಿ ರುದ್ರಮ್ಮ ಹಾಗೂ ತಂದೆ ಪಂಪನಗೌಡರ  ಮಗನಾಗಿ  1910 ಜುಲೈ 27 ರಂದು ಜನಿಸಿದರು. ಜೋಳದರಾಶಿಯ ಅಯ್ಯಾನವರ ಶಾಲೆ ಅಥವ ಗುಡಿಬಡಿ ಯಲ್ಲಿ 4ನೇ ತರಗತಿ ವರೆಗೆ ಓದಿದರು.ಆದರೆ ಮುಂದೆ ಅವರು ನಾಟಕ, ರಂಗಭೂಮಿಯ ಸೇವೆಯಲ್ಲಿ ತೊಡಗಿಕೊಂಡರು. ಗಡಿ ಭಾಗದಲ್ಲಿದ್ದುದರಿಂದ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೇ  ಸಾಹಿತ್ಯ ರಚನೆ ಮಾಡಿದರು.


ಸುಮಾರು 40 ಪುಸ್ತಕಗಳನ್ನು ಬರೆದಿದ್ದಾರೆ ಗಮಕ ಕಲೆಗೆ ಅವರಿತ್ತ ಕೊಡುಗೆ ಅಪಾರವಾದುದು ಬಳ್ಳಾರಿ ರಾಘವ ರ ಶಿಷ್ಯರಾಗಿ ನಾಟಕ ರಂಗಕ್ಕೆ ಅಪಾರ ಸೇವೆ ಮಾಡಿದರು.1994 ರ ಮೇ 10 ರಂದು ಇಹಲೋಕ ತ್ಯಜಿಸಿದರು.


ಹೋಗಿ ಬರ್ತೀನಯ್ಯ ನಮ್ಮಊರಿಗೆ ಎಂಬ ಹಾಡನ್ನು ಇದನ್ನೇ ತೆಲುಗುನಲ್ಲಿ ಪೋಯಿ ವಸ್ತಾನಂಡಿ ಮಾ ಇಂಟಿಕಿ ಎಂಬ ಹಾಡನ್ನು ಬರೆದು  ಅದರಂತೆ ಮರಳಿ ಬಾರದಊರಿಗೆ ತೆರಳಿದರು.  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,ಹಾಗೂ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು.ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಹಾಗು ಆಂದ್ರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.   ಗೌಡರ  ಸಾದನೆಗಳನ್ನು ಸ್ಮರಿಸಿದರು.


 ಕಾರ್ಯಕ್ರಮವನ್ನು   ಎನ್ ಪ್ರಕಾಶ್ ನಿರೂಪಿಸಿದರು  ಸಹ ಕಾರ್ಯದರ್ಶಿ ಎಂ.ರಾಮಾಂಜನೇಯುಲು ವಂದಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಶ್ರೀ ಕೆ ಚನ್ನಪ್ಪ, ಅಧ್ಯಕ್ಷರಾದ ಶ್ರೀ ಕೆ ಕೊಟೆಶ್ವರ ರಾವ್,ಗೌರವ ಕಾರ್ಯದರ್ಶಿ ಶ್ರೀ ಎನ್ ಪ್ರಕಾಶ್,ಕೆ ಕೃಷ್ಣ, ಸಿ ಎ ಚೌದರಿ, ಜಿ ಪ್ರಭಾಕರ,ಕೆ ಪೊಂಪನ ಗೌಡ, ಪಿ ಶ್ರೀನಿವಾಸಲು, ವಿ ರಾಮಚಂದ್ರ ,ಶೇಷ ರೆಡ್ಡಿ, ಕಾಳಿದಾಸ,,ಕಪ್ಪಗಲ್ಲು ಪ್ರಭುದೇವ, ರಮಣಪ್ಪ ಭಜಂತ್ರಿ ಮತ್ತು ಗೌಡರ ಕುಟುಂಬದವರು,ಕಲಾವಿದರು ಭಾಗವಹಿಸಿದ್ದರು.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ