Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಕಲಾವಿದ ದ್ವಾರಕೀಶ್ ನಿಧನಕ್ಕೆ ಡಾ. ಪ್ರಭಾಕರ್ ಕೋರೆ ಕಂಬನಿ

ಬೆಳಗಾವಿ,ಏ.16: ನಾಡು ಕಂಡ ಅಪರೂಪದ ಶ್ರೇಷ್ಠ ಕಲಾವಿದ, ನಿರ್ಮಾಪಕ, ನಿರ್ದೇಶಕ ದ್ವಾರ್ಕೀಶ್ ದಿನಕ್ಕೆ ಕೆಎಲ್‌ಇ ಸಂಸ್ಥೆಯ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯವರು ತೀವ್ರ ದುಃಖವನ್ನು ವ್ಯಕ್ತಪಡಿಸಿದ್ದಾರೆ.

ಕನ್ನಡ ಚಲನಚಿತ್ರರಂಗದಲ್ಲಿ ನಟ ದ್ವಾರಕೀಶ್ ಅವರು ನೀಡಿರುವ ಕೊಡುಗೆ ಅನುಪಮವೆನಿಸಿದೆ. ಡಾ. ರಾಜಕುಮಾರ್ ಅವರಷ್ಟೇ ಸಮಾನವಾಗಿ ಪಾತ್ರಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಿದ ಅವರು ಕುಟುಂಬ ಹಾಗೂ ಸಮಾಜಮುಖಿಯಾದ ಚಲನಚಿತ್ರಗಳನ್ನು ಮಾಡಿದರು. ಯಾವುದೇ ಪಾತ್ರವಿದ್ದರೂ ಅದಕ್ಕೆ  ಜೀವತುಂಬ ಕೆಲಸವನ್ನು ಮಾಡಿದರು.

ಅವರ ಹಾಸ್ಯ ಪ್ರಧಾನವಾದಂತಹ ಪಾತ್ರಗಳು ಕನ್ನಡ ಕಲಾಭಿಮಾನಿಗಳಿಗೆ ಹಸಿರಾಗಿ ಉಳಿದಿದೆ. ಪ್ರಥಮ ಬಾರಿಗೆ ವಿದೇಶದಲ್ಲಿಯೂ ಕೂಡ ಚಿತ್ರಗಳನ್ನು ತೆಗೆದ ದ್ವಾರಕೀಶ್ ಅವರು ಒಂದು ಕಾಲಘಟ್ಟದಲ್ಲಿ ಕನ್ನಡ ಬೆಳ್ಳಿತೆರೆಯನ್ನು ಅಘಾತವಾಗಿ ವಿಸ್ತರಿಸಿ, ಅದರ ಘನತೆಯನ್ನು ಹೆಚ್ಚಿಸಿದರು.

ಗುರುಶಿಷ್ಯರು, ಸಿಂಗಾಪುರದಲ್ಲಿ ರಾಜಾಕುಳ್ಳ, ಆಪ್ತಮಿತ್ರ ನೂರಾರು ಮರೆಯಲಾಗದ ಅವರ ಚಿತ್ರಗಳು ಕಣ್ಣು ಮುಂದೆ ಸುಳಿದು ಹೋಗುವೆ. ದಕ್ಷಿಣ ಭಾರತ ಚಲನಚಿತ್ರ ರಂಗದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ್ದ ದ್ವಾರ್ಕೀಶ ಬದುಕಿನಲ್ಲಿ ಹಲವಾರು ಏರುಪೇರುಗಳನ್ನು  ಕಂಡರೂ ಧೃತಿಗೆಡದೆ ಕನ್ನಡ ಚಲನಚಿತ್ರ  ಕ್ಷೇತ್ರವನ್ನು ಪೋಷಿಸಿ ಬೆಳೆಸಿದರು. ಅವರ ಅಗಲಿಕೆ ಸಿನಿಮಾ ರಂಗವನ್ನು, ಸಮಸ್ತ ನಾಡಿನ ಜನತೆಯನ್ನು ಬಡವಾಗಿಸಿದೆ. ಭಗವಂತನ ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲೆಂದು ಡಾ.ಕೋರೆಯವರು ಪ್ರಾರ್ಥಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ