ಬಳ್ಳಾರಿ. ಮೇ. 05: ಡಾ. ರಾಜಕುಮಾರ್ ಚಲನಚಿತ್ರಗಳನ್ನು ನೋಡುವ ಮೂಲಕ ಅವರ ಜೀವನದ ಪಾಠವನ್ನು ಕಲಿತುಕೊಂಡಿದ್ದೇವೆ ನಾನು ಡಾ. ರಾಜಕುಮಾರ್ ಅವರ ದೊಡ್ಡ ಅಭಿಮಾನಿ, ಅವರ ಜೀವನವೇ ಒಂದು ವಿಶ್ವವಿದ್ಯಾಲಯ ಇದ್ದಂತೆ ಅವರನ್ನು ನೋಡಿ ತಿಳಿದುಕೊಂಡು ಕಲಿಯಬೇಕಾದದ್ದು ಬಹಳಷ್ಟು ಇದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ ಗಾದೆಪ್ಪ ಹೇಳಿದರು.
ಅವರು ಇಂದು ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ವತಿಯಿಂದ ಡಾ. ರಾಜಕುಮಾರ್ ರಸ್ತೆಯ ಕನ್ನಡ ಭವನದಲ್ಲಿ ಹಮ್ಮಿಕೊಂಡ ಡಾ. ರಾಜಕುಮಾರ್ ರವರ 98ನೇ ಜಯಂತಿ ಕಾರ್ಯಕ್ರಮದಲ್ಲಿ ವೀರ ಕನ್ನಡಿಗ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗಾಂಧಿನಗರ ಸರ್ಕಲ್ ಇನ್ಸ್ಪೆಕ್ಟರ್ ರವಿ ಚಂದನ್ l ನಾನು ಡಾ.ರಾಜ್ ಅಭಿಮಾನಿ ಅವರ ಜೀವನ ಚರಿತ್ರವನ್ನು ಅವರ ಚಿತ್ರಗಳ ಮುಖಾಂತರ ನೋಡಿ ಇವತ್ತು ಇಲಾಖೆಯಲ್ಲಿ ಉತ್ತಮ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ ಎಲ್ಲರೂ ಡಾ ರಾಜ್ ಅವರ ಚಲನಚಿತ್ರಗಳಲ್ಲಿನ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕರವೇ ಕಾವಲುಪಡೆಯ ರಾಜ್ಯಾಧ್ಯಕ್ಷ ಸುರೇಶ್ ಮಾತನಾಡಿ, ಡಾಕ್ಟರ್ ರಾಜಕುಮಾರ್ ಒಬ್ಬ ಚಿತ್ರನಟ ಮಾತ್ರ ಆಗಿರದೆ ಅವರು ಕನ್ನಡದ ಆಸ್ಮಿತೆಯಾಗಿ ಗುರುತಿಸಿಕೊಂಡಿದ್ದರು ಚಿತ್ರರಂಗದಲ್ಲಿ ಎಲ್ಲಾ ರೀತಿಯ ಪಾತ್ರಗಳನ್ನು ಮಾಡುತ್ತಾ ಆಡುಮುಟ್ಟದ ಸೊಪ್ಪಿಲ್ಲ ಡಾಕ್ಟರ್ ರಾಜ್ ಅಭಿನಯಿಸಿದ ಪಾತ್ರವಿಲ್ಲ ಎಂಬಂತೆ ಇಡೀ ಕನ್ನಡ ಚಿತ್ರರಂಗಕ್ಕೆ ಒಂದು ಮಹಾ ವಿಶ್ವವಿದ್ಯಾಲಯವಾಗಿದ್ದರು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಾಗರ್ ಅಪ್ಪು ಜಿಲ್ಲಾಧ್ಯಕ್ಷರು, ತಾಲೂಕ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಹಲವಾರು ಜನ ಸದಸ್ಯರಿದ್ದರು.