Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ತಾಳ್ಮೆಯೇ ಯುವಕರ ಉತ್ತಮ ಶಕ್ತಿ"- ಡಾ. ರಮೇಶ್ ಬಾಬು


ಬಳ್ಳಾರಿ  ಜುಲೈ 14. ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆ ಹಾಗೂ ಸರ್ಕಾರಿ ಮಾಜಿ ಪುರಸಭೆ ಸಂಯುಕ್ತ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ಜುಲೈ 11 ನೇ ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಅರಿವು ಮತ್ತು ಪ್ರಬಂಧ ಸ್ಪರ್ಧೆಯನ್ನು ಕಾಲೇಜಿನ ಸಾಬಾಂಗಣದಲ್ಲಿ ಏರ್ಪಡಿಸಲಾಗಿತ್ತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ಕಾರ್ಯಕ್ರಮದ ಉದ್ಘಾಟಕರು ಡಾ. ರಮೇಶ್ ಬಾಬು ಬಳ್ಳಾರಿ  ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ   ಅಧಿಕಾರಿಗಳು ಮಾತನಾಡುತ್ತಾ ಯುವಕರೇ ನಿಮ್ಮ ಉತ್ತಮ ಶಕ್ತಿ ಎಂದರೆ ತಾಳ್ಮೆ ಅದನ್ನು ನೀವು ಅಭ್ಯಾಸ ಮಾಡಿಕೊಂಡಲ್ಲಿ ಸಾದನೆ ಎನ್ನುವುದು ಕಟ್ಟಿಟ್ಟ ಬುತ್ತಿ ಆದ್ದರಿಂದ ಯುವಕರೇ ಹೆಣ್ಣಾಗಲಿ ಗಂಡಾಗಲೀ ಅವಸರದಲ್ಲಿ ಮದುವೆ ಮಾಡಿ ಕೊಳ್ಳಬೇಡಿ  ಏಕೆಂದರೆ  ನಿಮ್ಮ ಸ್ವತಃ ತೀರ್ಮಾನ ತೆಗೆದುಕೊಳ್ಳುವ ಶಕ್ತಿ ಹಾಗೂ ಜೀವನ ಸಂಗಾತಿಯನ್ನು ಆಯ್ದುಕೊಳ್ಳುವ ಶಕ್ತಿ ಮತ್ತು   ವಿದ್ಯಾಭಾಸ ಮುಗಿಸಿ  ಉತ್ತಮ ಜೀವನ ಕಟ್ಟಿಕೊಳ್ಳಲು ಸಮಯ ಬೇಕಾಗುತ್ತದೆ ಆದ್ದರಿಂದ 25 ವರ್ಷದವರೆಗೂ ಮದುವೆ ಆಗಬೇಡಿ ಎಂದು ಕರೆ ಕೊಟ್ಟರು.


ತದನಂತರ ಮಾತನಾಡಿದ  ಎಫ್ಪಿಎಐ ಅಧ್ಯಕ್ಷರಾದ ಟಿ.ಜಿ. ವಿಠ್ಠಲ್, “ಉತ್ತಮ ಸಮಾಜ ನಿರ್ಮಾಣದೊಂದಿಗೆ ಭದ್ರ ಭವಿಷ್ಯದ ಬದುಕು ಕಟ್ಟಿಕೊಳ್ಳುವುದು ಪ್ರಮುಖ. ಸಂತಾನೋತ್ಪತ್ತಿ, ಪ್ರಜನನ ಆರೋಗ್ಯ ಹಾಗೂ ಸಂಬಂಧಿತ ಹಕ್ಕುಗಳ ಅರಿವು ಯುವಕರಿಗೆ ಅಗತ್ಯವಾಗಿದೆ. ಎಫ್ಪಿಎಐ ಈ ವಿಷಯಗಳಲ್ಲಿ ಮಾಹಿತಿ ನೀಡಲು ಯಾವಾಗಲೂ ಸಿದ್ಧವಾಗಿದೆ” ಎಂದು ಹೇಳಿದರು.


ತದನಂತರ ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ   ಸುಂಕಪ್ಪ ಪ್ರಾಂಶುಪಾಲರು ಅಧ್ಯಕ್ಷೀಯ ಭಾಷಣದಲ್ಲಿ ಯುವಕರಲ್ಲಿ ಜಾಗೃತಿ ಮೂಡಬೇಕು ಏನು ಮಾಡಬೇಕು ಏನು ಮಾಡಬಾರದು ಎನ್ನುವ ಚಿಂತನೆ ಬಂದಾಗ ಮಾತ್ರ ಯುವಕರು ಸಭಲೀಕರಣಗೊಳ್ಳುವುದು ಆದ್ದರಿಂದ ನೆರದಂಥ ಎಲ್ಲಾ ಯುವಕರೇ

ನಿಮ್ಮ ಆರೋಗ್ಯದ ಕಡೆ ಗಮನಹರಿಸಿ ಸುಸಜಿತ  ಕುಟುಂಬದ ಕನಸನ್ನು ನನಸುಮಾಡುವುದಕ್ಕೆ ಬೇಕಾದ ಎಲ್ಲಾ ವಿಚಾರಗಳನ್ನು ತಿಳಿದುಕೊಳ್ಳಿ ಎಂದರು.


ಕಾರ್ಯಕ್ರಮದಲ್ಲಿ S ವಿಜಯಲಕ್ಷ್ಮಿ ವ್ಯವಸ್ಥಾಪಕರು ಎಫ್ಪಿಎಐ ಪ್ರಾಸ್ತಾವಿಕ ನುಡಿಗಳನ್ನು ನುಡಿದರು

ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಒಟ್ಟಾರೆ 48 ಮಕ್ಕಳು ಭಾಗವಾಗಿದ್ದು ಮೊದಲನೇ ಸ್ಥಾನ  ಪವನ್ ಎರಡನೇ ಸ್ಥಾನ ಪದ್ಮಾವತಿ ಹಾಗೂ ಮೂರನೇ ಸ್ಥಾನ ಮಣಿಕಂಠ ಪಡೆದರು ಗೆದ್ದ ಸ್ಪರ್ಧಾರ್ಥಿಗಳಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಯಿತು ಹಾಗೂ ಎಲ್ಲಾ ಸ್ಪರ್ಧಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ