Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರ್ಗಿಯ ಡಾ.ಶರಣಬಸವಪ್ಪ ಅಪ್ಪ ಅಗಲಿಕೆಗೆ ಕಾಶಿ ಜಗದ್ಗುರುಗಳ ಕಂಬನಿ

ಬೆಂಗಳೂರು :  ಗುರುವಾರ ಲಿಂಗೈಕ್ಯರಾದ ಕಲಬುರ್ಗಿಯ ಶ್ರೀಶರಣ ಸಂಸ್ಥಾನದ ಡಾ.ಶರಣಬಸವಪ್ಪ ಅಪ್ಪ ಅವರ ಅಗಲಿಕೆಗೆ ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾಗಿರುವ ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಕಂಬನಿ ಮಿಡಿದಿದ್ದಾರೆ.

ಕಲಬುರ್ಗಿ ಶರಣ ಸಂಸ್ಥಾನದ ಕರ್ತೃಪುರುಷರಾದ ಶ್ರೀಶರಣಬಸಪ್ಪನವರು ಪಂಚಪೀಠಗಳಲ್ಲಿ ಒಂದಾದ ಉಜ್ಜಯಿನಿ ಪೀಠದ ಶಾಖಾಮಠ ಕಲಿಕೇರಿ ಹಿರೇಮಠದ ಶ್ರೀಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಶಿಷ್ಯರಾಗಿದ್ದರು. ಕರ್ತೃಪುರುಷರಾದ ಶ್ರೀಶರಣಬಸಪ್ಪನವರು ತಮ್ಮ ಗುರುವರ್ಯರನ್ನು ಅವರ ಜೀವಮಾನದುದ್ದಕ್ಕೂ ಅರಘಳಿಗೆಯೂ ಅಗಲಿ ಇರಲಿಲ್ಲ. ಕಲಬುರ್ಗಿಯ ಶ್ರೀಶರಣ ಸಂಸ್ಥಾನದÀಲ್ಲಿ ಗುರು-ಶಿಷ್ಯರಿಬ್ಬರೂ ನಿತ್ಯದಲ್ಲಿ ಕೂಡಿಯೇ ಪೂಜಿಸಿಕೊಳ್ಳುತ್ತಿದ್ದಾರೆ. ಅವರ ಭಾವಚಿತ್ರದಲ್ಲಿಯೂ ಗುರು-ಶಿಷ್ಯರು ಶಾಶ್ವತವಾಗಿದ್ದಾರೆ. ವೀರಶೈವ-ಲಿಂಗಾಯತ ಧರ್ಮದ ಗುರು-ಶಿಷ್ಯ ಪರಂಪರೆಯನ್ನು ಆನೂಚಾನವಾಗಿ ಮುನ್ನಡೆಸಿಕೊಂಡು ಬಂದಿದ್ದ ಡಾ.ಶರಣಬಸವಪ್ಪ ಅಪ್ಪ ಅವರು ತಮ್ಮ ಉತ್ತರಾಧಿಕಾರಿ ಕಲಬುರ್ಗಿ ಶ್ರೀಶರಣ ಸಂಸ್ಥಾನದ ೯ನೆಯ ಪೀಠಾಧಿಪತಿಯಾಗಿ ತಮ್ಮ ಸುಪುತ್ರ ದೊಡ್ಡಬಸವಪ್ಪ ಅಪ್ಪ ಅವರಿಗೆ ಪರಂಪರೆಯ ಮೂಲ ಸಂಸ್ಕಾರಗಳನ್ನು ರೂಢಿಸಿದ್ದಾರೆ.


ದಾಸೋಹ ಸೇವೆಗೆ ಹೆಸರು ಮಾಡಿದ್ದ ಡಾ.ಶರಣಬಸವಪ್ಪ ಅಪ್ಪ ಅವರು ಪೂರ್ವಪ್ರಾಥಮಿಕ ಶಾಲೆಯಿಂದ ಮೊದಲ್ಗೊಂಡು ವಿಶ್ವವಿದ್ಯಾಲಯದವರೆಗೆ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸುವ ಮೂಲಕ ವಿದ್ಯಾವಿಕಾಸಕ್ಕೆ ನಿರಂತರ ಶ್ರಮಿಸಿದ್ದರು. ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿ ಶ್ಲಾö್ಯಘನೀಯ ಕಾರ್ಯಮಾಡಿದ್ದು, ಇಹಲೋಕ ತ್ಯಜಿಸಿರುವ ಡಾ.ಶರಣಬಸವಪ್ಪ ಅಪ್ಪ ಅವರ ಆತ್ಮಕ್ಕೆ ಪಾರ್ವತಿ-ಪರಮೇಶ್ವರರು ಹಾಗೂ ಶ್ರೀಜಗದ್ಗುರು ಪಂಚಾಚಾರ್ಯರು ಚಿರಶಾಂತಿಯನ್ನು ಅನುಗ್ರಹಿಸಲೆಂದು ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ