Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಶ್ರುತ ವಿಜ್ಞಾನ ಪ್ರಯೋಗಾಲಯ ಸೇರಿ ವಿವಿಧ ಚಟುವಟಿಕೆಗಳಿಗೆ ಚಾಲನೆ


ಮಹಾಲಿಂಗಪುರದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಸಕ ಸಿದ್ದು ಸವದಿ ಭೇಟಿ  ವಿದ್ಯಾರ್ಥಿಗಳ ಸವಾಂಗೀಣ ಅಭಿವೃದ್ಧಿಗೆ ಒತ್ತು.
ಮಹಾಲಿಂಗಪುರ,ಜು,೧೬:ನಗರದ ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾದ ಸುಶ್ರುತ ವಿಜ್ಞಾನ ಪ್ರಯೋಗಾಲಯ, ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಶಾಲಾ ಸಂಸತ್ತು ಹಾಗೂ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭವು ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ತೇರದಾಳ ಮತಕ್ಷೇತ್ರದ ಜನಪ್ರಿಯ ಶಾಸಕ ಸಿದ್ದು ಸವದಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸುಶ್ರುತ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ, ವಿವಿಧ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಬಳಿಕ ಪ್ರಯೋಗಾಲಯವನ್ನು ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, "ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತರಾಗದೆ ವಿಜ್ಞಾನ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಯಕತ್ವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಪ್ರಯೋಗಾಲಯಗಳು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಸಹಕಾರಿಯಾಗುತ್ತವೆ" ಎಂದು ಹೇಳಿದರು.

ಇದೇ ವೇಳೆ ಶಾಲೆಯ ವತಿಯಿಂದ ಶಾಸಕ ಸಿದ್ದು ಸವದಿ ಅವರಿಗೆ ಆತ್ಮೀಯ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಶಂಕರಗೌಡ ಪಾಟೀಲ, ಶೇಖರ ಅಂಗಡಿ, ಭೀಮಶಿ ಗೌಂಡಿ, ಶಿವಾನಂದ ಅಂಗಡಿ, ವಿಜಯ ಸಬಕಾಳೆ, ಅರ್ಜುನ ಮೋಪಗಾರ, ಚನ್ನಪ್ಪ ಪಟ್ಟಣಶೆಟ್ಟಿ, ಮಹೇಶ ಜಿಡ್ಡಿಮನಿ, ತಿಪ್ಪಣ್ಣ ಬಂಡಿವಡ್ಡರ, ಸಂಜಯ ರಾಠೋಡ, ಈರಪ್ಪ ಬೀಳಗಿ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿದರು. ಶಾಲೆಯಲ್ಲಿ ನಿರ್ಮಿಸಲಾದ ಸುಶ್ರುತ ವಿಜ್ಞಾನ ಪ್ರಯೋಗಾಲಯ ಹಾಗೂ ವಿವಿಧ ಶೈಕ್ಷಣಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಲಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
೧೫ mಟಠಿ ೦೧ ಫೋಟೋ

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ