Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಲಕರು ಸುರಕ್ಷತಾ ನೀಯಮವನ್ನು ಪಾಲಿಸಿ-ಪಿಎಸ್‌ಐ ಖೋತ್


ತಾಳಿಕೋಟೆ, ವಿದ್ಯಾರ್ಥಿಗಳು ಈ ದೇಶದ ಅಮೂಲ್ಯ ರತ್ನಗಳಾಗಿವೆ ಮತ್ತು ದೇಶದ ಮುಂದಿನ ಭವಿಷ್ಯ ರೂಪಿಸುವಂತವರಾಗಿದ್ದಾರೆ ಅವರನ್ನು ಶಾಲಾ ವಾಹನಗಳಲ್ಲಿ ಕರೆದುಕೊಂಡು ಹೋಗುವ ಚಾಲಕರು ಸುರಕ್ಷತೆಯನ್ನು ಕಾಪಾಡಿಕೊಂಡು ಸಾಗಬೇಕೆಂದು ಸ್ಥಳೀಯ ಪೊಲೀಸ್ ಠಾಣಾ ಪಿಎಸ್‌ಐ ಶ್ರೀಮತಿ ಜ್ಯೋತಿ ಖೋತ್ ಅವರು ಹೇಳಿದರು.
       ಗುರುವಾರ ಪಟ್ಟಣದ ಮೈಲೇಶ್ವರ ಕ್ರಾಸ್‌ನಲ್ಲಿರುವ ಬ್ರಿಲಿಯಂಟ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಆಗಮಿಸಿದ ಅವರು ವಾಹನಗಳ ಫಿಟ್ನೆಸ್ ಪ್ರಮಾಣ ಪತ್ರ, ವಿಮೆ, ವೇಗ ನಿಯಂತ್ರಕಗಳನ್ನು ಪರಿಶೀಲಿಸಿ, ಎಲ್ಲ ವಾಹನಗಳು  ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಂಡ ನಂತರ ಚಾಲಕರಿಗೆ ತಿಳಿ ಹೇಳಿದ ಅವರು ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳನ್ನು ಹೆಚ್ಚಿಗೆ ತುಂಬಿಕೊಂಡು ಹೋಗುವಂತಾಗಬಾರದು ಸುರಕ್ಷತೆ ನೀಯಮವನ್ನು ಪಾಲನೆ ಮಾಡಬೇಕು ವಾಹನಗಳು ಸುಸ್ಥಿರದಲ್ಲಿರುವದನ್ನು ಖಚಿತ ಪಡಿಸಿಕೊಂಡು ವಾಹನವನ್ನು ಚಲಾಯಿಸುವಂತಾಗಬೇಕು ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಹೋಗುವಾಗ ರಸ್ತೆಯ ಮೇಲೆ ವಾಹನಗಳನ್ನು ನಿಲ್ಲಿಸದೇ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಸಮೀಪದ ಮೈದಾನ ಮತ್ತು ವಾಹನ ದಟ್ಟನೆ ಇಲ್ಲದ ಜಾಗೆಯನ್ನು ಆಯ್ಕೆ ಮಾಡಿಕೊಂಡು ಇಳಿಸುವಂತಹ ಕಾರ್ಯ ಮಾಡಬೇಕೆಂದು ಕಾನೂನು ನೀಯಮ ಪಾಲನೆ ಕುರಿತು ತಿಳುವಳಿಕೆ ನೀಡಿದರು.
     ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ನಾನಾಗೌಡ ನಡುವಿನಮನಿ, ಉಪಾಧ್ಯಕ್ಷ ಆರ್.ಬಿ.ನಡುವಿನಮನಿ, ಕಾರ್ಯದರ್ಶಿ ಎಮ್ ಬಿ ಮಡಿವಾಳರ, ಪೊಲೀಸ್ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಾಲಕರು ಸುರಕ್ಷತಾ ನೀಯಮವನ್ನು ಪಾಲಿಸಿ-ಪಿಎಸ್‌ಐ ಖೋತ್ಒಲೆ ಹೂಡಿ ಅಡುಗೆ ಮಾಡಿ ರೈತ ಮುಖಂಡರ ವಿನೂತನ ಪ್ರತಿಭಟನೆಸತತ ಬಾರಿ  ಮಳೆ: ಬಳ್ಳಾರಿ ನಾಲಾದ ಅತಿಕ್ರಮಣದಿಂದ ರೈತರಲ್ಲಿ ಮೂಡಿದ  ಆತಂಕದ್ವಿಚಕ್ರ ವಾಹನ ಚಲಾಯಿಸಿದ ಅಪ್ರಾಪ್ತ ಬಾಲಕನ ತಂದೆಗೆ ₹25,000 ದಂಡ.ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಸಂಕಲ್ಪಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಬೆಳಗಾವಿಗೆ ಡಿ.ಕೆ. ಶಿವಕುಮಾರ್; ಅದ್ಧೂರಿ ಸ್ವಾಗತಎಲ್ ನಿನೋ ಪರಿಣಾಮ ಎದುರಿಸಲು ಇಂಧನ ಇಲಾಖೆ ಸಜ್ಜು: ಗೌರವ್‌ ಗುಪ್ತಜನರ ಬಳಿಗೆ ಸರಕಾರ; ನನ್ನ ಆದ್ಯತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ವಿಜಯಪುರ ನಗರ ಮತಕ್ಷೇತ್ರ: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಜಿಲ್ಲಾಧಿಕಾರಿ ಡಾ. ಆನಂದ ಕೆ. ದಿಢೀರ್ ಭೇಟಿ, ಪರಿಶೀಲನೆಭಾಷಾ ಅಧಿನಿಯಮದಂತೆ ನಾಮಫಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ