LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಬರಗಾಲ ಘೋಷಣೆ ರಾಜಕೀಯ ತೀರ್ಮಾನವಲ್ಲ: ಶಾಸಕ ನಾಡಗೌಡ

15 ದಿನಗಳಲ್ಲಿ ಸೂಕ್ತ ನಿರ್ಧಾರ; ರೈತರ ವಿಚಾರದಲ್ಲಿ ರಾಜಕೀಯ ಮಾಡದಂತೆ ವಿರೋಧಿಗಳಿಗೆ ಕಿವಿಮಾತು

ಮುದ್ದೇಬಿಹಾಳ: 2.5 ಎಂಎಂಗೆಿಂತಲೂ ಕಡಿಮೆ ಮಳೆಯಾಗಿರುವ ಪ್ರದೇಶಗಳ ಅಂಕಿ-ಅಂಶಗಳನ್ನು ಆಧರಿಸಿ ರಾಜ್ಯ ಸರ್ಕಾರ ಈಗಾಗಲೇ ನಿಡಗುಂದಿ, ವಿಜಯಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಬರಗಾಲ ಘೋಷಣೆ ಮಾಡಿದೆ. ಮುದ್ದೇಬಿಹಾಳ, ತಾಳಿಕೋಟಿ, ಬಸವನಬಾಗೇವಾಡಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಶೇ.38ರಷ್ಟು ಮಳೆಯಾಗಿರುವ ಅಂಕಿ-ಅಂಶಗಳ ಆಧಾರದ ಮೇಲೆ ಜಿಲ್ಲಾಧಿಕಾರಿಗಳಿಂದ ಹೊಸ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂದಿನ 15 ದಿನಗಳಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದಲ್ಲಿ ಮಾತನಾಡಿದ ಅವರು, ಮಳೆಯ ಕೊರತೆಯಿಂದ ರೈತರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವುದೇ ನಿಖರ ಮಾಹಿತಿ ಇಲ್ಲದೆ ಬರಗಾಲ ಘೋಷಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ. ಇದರಿಂದ ರೈತರು ಮತ್ತಷ್ಟು ತೊಂದರೆಗೆ ಒಳಗಾಗಬೇಕಾಗುತ್ತದೆ ಎಂದು ಹೇಳಿದರು.
ಬರಗಾಲ ಘೋಷಣೆ ಕುರಿತು ಸರ್ಕಾರ ತೆಗೆದುಕೊಳ್ಳುವ ನಿರ್ಧಾರದಲ್ಲಿ ತಮ್ಮ ತಾಕತ್ತಿನ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಇಂತಹ ಪ್ರಮುಖ ನಿರ್ಧಾರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಸಂಬಂಧಿಸಿದ ಸಚಿವರು ಸಭೆಗಳಲ್ಲಿ ಭಾಗವಹಿಸಿ ಸರ್ಕಾರದ ನಿರ್ಧಾರಗಳಿಗೆ ಅನುಮೋದನೆ ನೀಡುತ್ತಾರೆ. ಹೀಗಾಗಿ ಬರಗಾಲ ಘೋಷಣೆ ರಾಜಕೀಯ ತೀರ್ಮಾನವಲ್ಲ ಎಂಬುದನ್ನು ವಿರೋಧಿಗಳು ಮೊದಲು ಅರಿತುಕೊಳ್ಳಬೇಕು ಎಂದು ನಾಡಗೌಡ ಖಾರವಾಗಿ ಹೇಳಿದರು.
ಇತ್ತೀಚೆಗೆ ನಡೆದ ಶಾಸಕರ ಸಭೆಯಲ್ಲಿ ಜಿಲ್ಲೆಯ ಶಾಸಕರಾದ ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಅಶೋಕ ಮನಗೂಳಿ, ಕಟಕದೊಂಡ ಸೇರಿದಂತೆ ಎಲ್ಲ ಶಾಸಕರು ಭೀಕರ ಬರಗಾಲ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಈ ಕುರಿತು ರಾಜ್ಯ ಮಟ್ಟದ ಅಧಿಕಾರಿಗಳು ಕೂಡ ಮಾಹಿತಿ ಪಡೆದು ಸೂಕ್ತ ವರದಿ ಸಿದ್ಧಪಡಿಸುವುದಾಗಿ ತಿಳಿಸಿದ್ದಾರೆ ಎಂದರು.
ನನ್ನ ತಾಕತ್ತಿನ ಬಗ್ಗೆ ಪ್ರಶ್ನಿಸುವವರು ಕೇಂದ್ರಕ್ಕೆ ಒತ್ತಡ ತರಲಿ: ನನ್ನ ತಾಕತ್ತಿನ ಬಗ್ಗೆ ಪ್ರಶ್ನಿಸುವವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ವಿಪತ್ತು ನಿಧಿ ಸೇರಿದಂತೆ ಅಗತ್ಯ ಕಾಯ್ದೆಗಳನ್ನು ತಿದ್ದುಪಡಿ ಮಾಡುವಂತೆ ಒತ್ತಾಯಿಸಲಿ. ಆಗ ಅವರ ತಾಕತ್ತು ಏನೆಂಬುದು ಎಲ್ಲರಿಗೂ ತಿಳಿಯುತ್ತದೆ. ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಬೇಕು. ಬರಗಾಲದ ಕುರಿತು ಮಾತನಾಡುವ ಮುನ್ನ ಅಂಕಿ-ಅಂಶಗಳನ್ನು ಪಡೆದುಕೊಂಡು ವಾಸ್ತವಾಂಶ ತಿಳಿದುಕೊಳ್ಳಬೇಕು ಎಂದು ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿಯವರ ವಿರುದ್ಧ ಶಾಸಕ ನಾಡಗೌಡ ಚಾಟಿ ಬೀಸಿದರು.
ಹೊಬಳಿ ಮಟ್ಟದಲ್ಲಿ ಕುಂದುಕೊರತೆ ಸಭೆ: ಗ್ರಾಮೀಣ ಪ್ರದೇಶಗಳಲ್ಲಿನ ಯಾವುದೇ ಕುಂದುಕೊರತೆಗಳಿದ್ದರೂ ಅವುಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಪ್ರತಿಯೊಂದು ಹೊಬಳಿಯಲ್ಲೂ ಕುಂದುಕೊರತೆ ಸಭೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ. ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲುಗಳು ಹಾಗೂ ನಡವಳಿಕೆಗಳನ್ನು ಸರ್ಕಾರಕ್ಕೆ ವರದಿ ಮಾಡಲಾಗುವುದು. ಮುಂದಿನ ತಿಂಗಳ 5ರಿಂದಲೇ ಈ ಸಭೆಗಳು ಆರಂಭವಾಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ನಾಡಗೌಡ ತಿಳಿಸಿದರು.
ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವುದಕ್ಕಿಂತ ವಿರೋಧಿಗಳು ಮೊದಲು ವಾಸ್ತವಾಂಶ ಹಾಗೂ ಅಂಕಿ-ಅಂಶಗಳನ್ನು ತಿಳಿದುಕೊಂಡು ಮಾತನಾಡಬೇಕು. ರೈತರ ಸಮಸ್ಯೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳದೆ ಸಾಮಾನ್ಯ ಜ್ಞಾನದಿಂದ ವಿಚಾರ ಮಾಡಬೇಕಾಗಿದೆ ಎಂದು ಅವರು ಕಿವಿಮಾತು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್