LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬ್ಯಾಂಕ್ ದರೋಡೆ ತನಿಖೆ ವೇಳೆ ನಕಲಿ ನಂಬರ್ ವಾಹನಗಳ ಹಾವಳಿ

ಮಂಗಳೂರು, ಜನವರಿ 21: ಉಳ್ಳಾಲ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಕರ್ನಾಟಕದಾದ್ಯಂತ ಭಾರೀ‌ ಸಂಚಲನ‌ ಸೃಷ್ಟಿಸಿತ್ತು. ಇದೀಗ ಮೂವರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಪೊಲೀಸರು ಚಿನ್ನಾಭರಣಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ನಡುವೆ, ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಸ್ಫೋಟಕ‌ ಮಾಹಿತಿ ಬಹಿರಂಗಗೊಂಡಿದೆ. ರಾಜ್ಯಾದ್ಯಂತ ಸಾವಿರಾರು ವಾಹನಗಳು ನಕಲಿ ನಂಬರ್ ಪ್ಲೇಟ್ ಅಳವಡಿಸಿ ಓಡಾಡುತ್ತಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.









ಬ್ರಹ್ಮರಕೂಟ್ಲು ಟೋಲ್ ಗೇಟ್​ನಲ್ಲಿ ಬ್ಯಾಂಕ್ ದರೋಡೆಕೋರರು ಪಾಸಾಗಿದ್ದಾರೆಂಬ ಶಂಕೆಯಿಂದ ಪರಿಶೀಲಿಸಿದ್ದರೂ‌, ಅವರು ಸರ್ವಿಸ್ ರಸ್ತೆಯ ಮೂಲಕ ತೆರಳಿದ್ದಾರೆ ಎಂಬುದು ಬಳಿಕ ಗೊತ್ತಾಗಿದೆ. ಆದರೆ, ಆ ಟೋಲ್ ಗೇಟ್​ನ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕಾರು, ಟೆಂಪೋ ಟ್ರಾವೆಲ್ಲರ್, ಲಾರಿ ಸೇರಿದಂತೆ ಹತ್ತಾರು ವಾಹನಗಳು ಫೇಕ್ ನಂಬರ್ ಪ್ಲೇಟ್ ಅಳವಡಿಸಿರುವುದು ಬೆಳಕಿಗೆ ಬಂದಿದೆ. ಅಂದರೆ ವಾಹನದಲ್ಲಿ ಇರುವ ನಂಬರೇ ಬೇರೆ, ಫಾಸ್ಟ್ ಟ್ಯಾಗ್ ರೀಡ್ ಮಾಡುವ ನಂಬರೇ ಬೇರೆ!









ಈ ರೀತಿ ನಕಲಿ ನಂಬರ್ ಪ್ಲೇಟ್ ಯಾಕಾಗಿ ಅಳವಡಿಸಿದ್ದಾರೆ ಎಂಬ ಸಂದೇಹ ಇದೀಗ ಬಲವಾಗಿದೆ. ಕೆಲವರು ಎರಡೆರಡು ವಾಹನಗಳಿಗೂ ಒಂದೇ ಫಾಸ್ಟ್ ಟ್ಯಾಗ್ ಬಳಕೆ ಮಾಡುವವರೂ ಇದ್ದಾರೆ. ಆದರೂ ಈ‌ ರೀತಿ ನಕಲಿ ನಂಬರ್ ಪ್ಲೇಟ್ ಅಳವಡಿಸಿರುವ ವಾಹನಗಳ ತಪಾಸಣೆ ನಡೆಸಲೂ ಇದೀಗ ಪೊಲೀಸ್ ಇಲಾಖೆ ಮುಂದಾಗಿದೆ.

ಯಾವ ಕಾರಣಕ್ಕಾಗಿ ವಾಹನದಲ್ಲೊಂದು, ಫಾಸ್ಟ್ ಟ್ಯಾಗ್​​ನಲ್ಲೊಂದು ವಾಹನದ ನಂಬರ್ ಅಳವಡಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಒಟ್ಟಿನಲ್ಲಿ, ಕೋಟೆಕಾರು ಬ್ಯಾಂಕ್ ದರೋಡೆಕೋರರ ತನಿಖೆಯಿಂದ ಮತ್ತೊಂದು ಅಕ್ರಮ ಬೆಳಕಿಗೆ ಬಂದಂತಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್