Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧೂಳಿನಿಂದ ಕಂಗೆಟ್ಟ ಸಾರ್ವಜನಿಕರು

ಚನಮ್ಮನ ಕಿತ್ತೂರು: ವಾಹನಗಳ ಓಡಾಟದಿಂದಾಗಿ ಮೇಲೇಳುತ್ತಿರುವ ಧೂಳಿನಿಂದಾಗಿ ಸಾರ್ವಜನಿಕರು ಕಂಗೆಟ್ಟುಹೋಗಿದ್ದಾರೆ.
ರಣಗಟ್ಟಿ ಕೆರೆ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದ್ದು ಹೂಳೆತ್ತಿದ ಮಣ್ಣನ್ನು ಪ್ರಮುಖ ಬೀದಿಯಿಂದಲೇ ಸಾಗಿಸುತ್ತಿರುವುದರಿಂದ ಹಾಗು ರಸ್ತೆ ಅಗಲೀಕರಣ ಕೆಲಸದಿಂದಾಗಿ ಮಣ್ಣು ರಸ್ತೆಯ ತುಂಬ ಹರಡಿ ವಾಹಗಳು ಸಂಚರಿಸಿದಾಗ ಧೂಳು ಮೇಲೆದ್ದು ಅಡ್ಡಾಡುವ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆಯ ಅಕ್ಕಪಕ್ಕದ ಅಂಗಾಡಿಕಾರರು ತಮ್ಮ ಅಂಗಡಿಗಳನ್ನು ದಿನಕ್ಕೆ ನಾಲ್ಕಾರು ಬಾರಿ ಸ್ವಚ್ಛಗೊಳಿಸಲು ಹೆಣಗಾಡುವುದರ ಜೊತೆಗೆ ಮಾಸ್ಕ್ ಹಾಕಿಕೊಂಡು ಕುಳಿತುಕೊಳ್ಳುವುದು ಅನಿವಾರ್ಯವಾಗಿಬಿಟ್ಟಿದೆ. ಧೂಳು ಮಿಶ್ರಿತ ಕಲುಷಿತ ವಾಯುವಿನ ಉಸಿರಾಟದ ಪರಿಣಾಮ ಬಹುತೇಕ ಜನರು ನೆಗಡಿ, ಕೆಮ್ಮು, ಅಲರ್ಜಿ ಹಾಗು ಅಸ್ತಮಾದಿಂದ ನರಳುತ್ತಿರುವುದು ಇಲ್ಲಿ ಸಾಮಾನ್ಯವಾಗಿಬಿಟ್ಟಿದೆ.
ಈ ದುಷ್ಪರಿಣಾಮವನ್ನು ತಪ್ಪಿಸಲು ಜನರ ಒತ್ತಾಯದ ಮೇರೆಗೆ ಟ್ರ್ಯಾಕ್ಟರ್ ಮುಖಾಂತರ ನೀರು ಸಿಂಪರಣೆಯನ್ನು ಮಾಡಲಾಗುತ್ತಿದೆಯಾದರೂ ಅದು ಕೆಲಮಟ್ಟಿಗೆ ಮಾತ್ರ ನಿಯಂತ್ರಿಸಲು ಸಾಧ್ಯವಾಗುತ್ತಿದೆ.
ಮಣ್ಣು ಸಾಗಿಸಲು ಪರ್ಯಾಯ ವ್ಯವಸ್ಥೆ ಕಷ್ಟ ಸಾಧ್ಯವಾಗಿರುವುದರಿಂದ ಜನರೇ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*