Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧೂಳಿನಿಂದ ಕಂಗೆಟ್ಟ ಸಾರ್ವಜನಿಕರು

ಚನಮ್ಮನ ಕಿತ್ತೂರು: ವಾಹನಗಳ ಓಡಾಟದಿಂದಾಗಿ ಮೇಲೇಳುತ್ತಿರುವ ಧೂಳಿನಿಂದಾಗಿ ಸಾರ್ವಜನಿಕರು ಕಂಗೆಟ್ಟುಹೋಗಿದ್ದಾರೆ.
ರಣಗಟ್ಟಿ ಕೆರೆ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿದ್ದು ಹೂಳೆತ್ತಿದ ಮಣ್ಣನ್ನು ಪ್ರಮುಖ ಬೀದಿಯಿಂದಲೇ ಸಾಗಿಸುತ್ತಿರುವುದರಿಂದ ಹಾಗು ರಸ್ತೆ ಅಗಲೀಕರಣ ಕೆಲಸದಿಂದಾಗಿ ಮಣ್ಣು ರಸ್ತೆಯ ತುಂಬ ಹರಡಿ ವಾಹಗಳು ಸಂಚರಿಸಿದಾಗ ಧೂಳು ಮೇಲೆದ್ದು ಅಡ್ಡಾಡುವ ಜನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ರಸ್ತೆಯ ಅಕ್ಕಪಕ್ಕದ ಅಂಗಾಡಿಕಾರರು ತಮ್ಮ ಅಂಗಡಿಗಳನ್ನು ದಿನಕ್ಕೆ ನಾಲ್ಕಾರು ಬಾರಿ ಸ್ವಚ್ಛಗೊಳಿಸಲು ಹೆಣಗಾಡುವುದರ ಜೊತೆಗೆ ಮಾಸ್ಕ್ ಹಾಕಿಕೊಂಡು ಕುಳಿತುಕೊಳ್ಳುವುದು ಅನಿವಾರ್ಯವಾಗಿಬಿಟ್ಟಿದೆ. ಧೂಳು ಮಿಶ್ರಿತ ಕಲುಷಿತ ವಾಯುವಿನ ಉಸಿರಾಟದ ಪರಿಣಾಮ ಬಹುತೇಕ ಜನರು ನೆಗಡಿ, ಕೆಮ್ಮು, ಅಲರ್ಜಿ ಹಾಗು ಅಸ್ತಮಾದಿಂದ ನರಳುತ್ತಿರುವುದು ಇಲ್ಲಿ ಸಾಮಾನ್ಯವಾಗಿಬಿಟ್ಟಿದೆ.
ಈ ದುಷ್ಪರಿಣಾಮವನ್ನು ತಪ್ಪಿಸಲು ಜನರ ಒತ್ತಾಯದ ಮೇರೆಗೆ ಟ್ರ್ಯಾಕ್ಟರ್ ಮುಖಾಂತರ ನೀರು ಸಿಂಪರಣೆಯನ್ನು ಮಾಡಲಾಗುತ್ತಿದೆಯಾದರೂ ಅದು ಕೆಲಮಟ್ಟಿಗೆ ಮಾತ್ರ ನಿಯಂತ್ರಿಸಲು ಸಾಧ್ಯವಾಗುತ್ತಿದೆ.
ಮಣ್ಣು ಸಾಗಿಸಲು ಪರ್ಯಾಯ ವ್ಯವಸ್ಥೆ ಕಷ್ಟ ಸಾಧ್ಯವಾಗಿರುವುದರಿಂದ ಜನರೇ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ