Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಮುಭಾವನೆ ಕೆರಳಿಸುವರ ವಿರುದ್ಧ ಕಠಿಣ ಕ್ರಮ: ಡಿವೈಎಸ್‌ಪಿ ಜಮೀರ

ಹಸಿರು ಕ್ರಾಂತಿ ವರದಿ , ಜಮಖಂಡಿ;ಮೆರವಣಿಗೆ ಸಂದರ್ಭದಲ್ಲಾಗಲಿ, ಸೋಷಿಯಲ್‌ ಮೀಡಿಯಾಗಳ ಮುಖಾಂತರ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೆಲಸ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವದು ಎಂದು ಡಿವೈಎಸ್‌ಪಿ ಸೈಯದ್‌ ರೋಷನ್‌ ಜಮೀರ ಹೇಳಿದರು. ನಗರಠಾಣೆಯ ಸಭಾಭವನದಲ್ಲಿ ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಶಾಂತಿಪಾಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗಣೇಶಹಬ್ಬ ಜೊತೆಗೆ ಮುಸ್ಲಿಂ ಬಾಂಧವರ ಈದ್‌ ಮಿಲಾದ್‌ ಎರಡೂ ಹಬ್ಬಗಳು ಬಂದಿರುವದರಿಂದ ಅತ್ಯಂತ ಸಿಸ್ಥಿನಿಂದ ಹಬ್ಬವನ್ನು ಆಚರಿಬೇಕು, ಯಾವುದೇ ಅಹಿತ ಕರ ಘಟನೆಗಳು ನಡೆಯದಂತೆ ಸಭೆಗೆ ಹಾಜರಾಗಿರುವ ಹಿರಿಯರು ಕ್ರಮ ಜಗುಗಿಸಬೇಕು, ತಮ್ಮ ಸಮಾಜದ ಯುವಕರನ್ನು ವಾಲಂಟಿಯರ್‌ಗಳನ್ನಾಗಿ ನಿಯಮಿಸಿ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಈ ಕುರಿತು ಪ್ರಾರ್ಥನಾ ಸ್ಥಳಗಳಲ್ಲಿ ಮಾಹಿತಿ ನೀಡಬೇಕು ಎಂದು ಹೇಳಿದರು. ಸಿಪಿಐ ಮಲ್ಲಪ್ಪ ಮಡ್ಡಿ ಮಾತನಾಡಿ ಕಳೆದ ಎರಡು ವರ್ಷಗಳಿಂದ ಬಳಸುವ ಮಾರ್ಗದಲ್ಲೇ ಮೆರವಣಿಗೆಗೆ ಅನುಮತಿ ನೀಡಲಾಗಿದೆ. ಬೈಕ್‌ಗಳನ್ನು ಬೇಕಾಬಿಟ್ಟಿಯಾಗಿ ಚಲಾಯಿಸುವದು, ಶಾಂತಂತೆ ಕದಡುವಂತೆ ವರ್ತಿಸದಂತೆ ಯುವಕರಿಗೆ ತಿಳಿ ಹೇಳಬೇಕು ಎಂದು ತಿಳಸಿದರು. ರಫೀಕ್‌ ಬಾರಿಗಡ್ಡಿ, ಅಬುಬಕರ್‌ ಕುಡಚಿ, ರಾಕೇಶ್‌ಲಾಡ್‌, ಪ್ರದೀಪ ಮೆಟಗುಡ್‌, ಮಲ್ಲುಮಠ,ಗಣೇಶ ಶಿರಗಣ್ಣವರ, ನಗರಸಭೆ ಸದಸ್ಯರಾದ ಕುಶಾಲ ವಾಘಮೊರೆ, ಸುನೀಲ ಸಿಂಧೆ ಮಾತನಾಡಿದರು. ಜಮಖಂಡಿಯಲ್ಲಿ ಕಾಡಸಿದ್ದೇಶ್ವರ ದೇವಸ್ಥಾನ, ಅಬುಬಕರ್‌ ದರ್ಗಾಗಳಳಿವೆ ಇಲ್ಲಿ ಯಾವಾಗಲೂ ಕೋಮುಗಲಭೆಗಳಾದ ಇತಿಹಾಸ ಇಲ್ಲ ಆದ್ದರಿಂದ ಎಲ್ಲರೂ ಸೇರಿ ಹಬ್ಬಗಳನ್ನು ಶಾಂತಿಯಿಂದ ಆಚರಿಸುವದಾಗಿ ತಿಳಿಸಿದರು. ಕ್ರೈಂವಿಭಾಗದ ಪಿಎಸ್‌ಐ ನಾಗರಾಜ ಕಾಜಗಾರ, ನಗರಠಾಣಿ ಪಿಎಸ್‌ಐ ಅನೀಲ ಕುಂಬಾರ ವೇದಿಕೆಯಲ್ಲಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ