Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸಗೊಬ್ಬರ ಬಳಕೆಯಿಂದ ಭೂಮಿಯ ಫಲವತ್ತತೆ ಕುಸಿತ: ಶಾಸಕ ಹೆಚ್.ಆರ್.ಗವಿಯಪ್ಪ

ವಿಜಯನಗರ(ಹೊಸಪೇಟೆ) : ನಿರಂತರ ರಸಗೊಬ್ಬರ ಬಳಕೆಯಿಂದಾಗಿ ಮಣ್ಣಿನ ಫಲವತ್ತತೆ ಕುಸಿತಗೊಳ್ಳಲಿದೆ. ಇದಕ್ಕಾಗಿ ಅನ್ನದಾತ ಸಾವಯವ ಕೃಷಿಗೆ ಆಸಕ್ತಿ ವಹಿಸುವ ಮೂಲಕ ಕೃಷಿ ಭೂಮಿ ಮಣ್ಣಿನ ಆರೋಗ್ಯ ವೃದ್ಧಿಗೆ ಆದ್ಯತೆ ನೀಡಬೇಕಿದೆ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದರು.

ನಗರದ ಎಪಿಎಂಸಿ ಆವರಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆ ಏರ್ಪಡಿಸಿದ್ದ ಕೃಷಿ ಉಪಕರಣಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಂಗಳವಾರ ಅವರು ಮಾತನಾಡಿದರು, ರೈತರು ತಮ್ಮ ಕೃಷಿ ಭೂಮಿಗಳ ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೊಣೆಗಾರಿಕೆ ಎಂದು ಭಾವಿಸಬೇಕು. ಹೆಚ್ಚುವರಿ ರಸಗೊಬ್ಬರ ಬಳಕೆ ಮತ್ತು ಕಳಪೆ ಮಣ್ಣಿನ ಆರೋಗ್ಯದಿಂದ ರೈತರಿಗೆ ನಷ್ಟವಾಗಲಿದೆ. ಮಣ್ಣಿನಲ್ಲಿ ಅನೇಕ ಗುಣಗಳು ಹಾನಿಯಾಗಲಿವೆ. ಮಣ್ಣಿನ ಗುಣ್ಣಮಟ್ಟ ಕುಸಿದರೇ ಭವಿಷ್ಯದಲ್ಲಿ ಬೆಳೆ ಇಳುವರಿಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕೃಷಿ ಭೂಮಿಗಳು ಫಲವತ್ತತೆ ಕಳೆದುಕೊಂಡರೇ ಅಹಾರದ ಅಭದ್ರತೆ ಸೃಷ್ಟಿಯಾಗಲಿದೆ. ಹಾಗಾಗೀ ರೈತರು ಸಾವಯವ ಕೃಷಿಗೆ ಹೆಚ್ಚಿನ ಆಸಕ್ತಿ ವಹಿಸಿ ಆರ್ಥಿಕ ಅಭಿವೃದ್ಧಿ ಹೊಂದಬಹುದಾಗಿದೆ. ರಾಜ್ಯ ಸರ್ಕಾರ ಕೃಷಿಕರಿಗೆ ಸಾವಯವ ಪದ್ದತಿ ಅನುಸರಿಸಲು ಅನೇಕ ಯೋಜನೆಗಳನ್ನು ತರಲಾಗಿದೆ. ರೈತರು ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಬಳಿಕ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಬಿತ್ತನೆ ಬೀಜ ವಿತರಣೆ, ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ಮಣ್ಣು ಆರೋಗ್ಯ ಕಾರ್ಡ್ ವಿತರಣೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳ ವಿತರಣೆ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ನೀರಾವರಿ ಪಿವಿಸಿ ಪೈಪ್ಸ್ ಘಟಕಗಳ ವಿತರಣೆ ಸೇರಿ ಕೃಷಿ ಯಂತ್ರೋಪಕರಣ ಯೋಜನೆಯಡಿ ಕೃಷಿ ಉಪಕರಣಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಇದೇ ವೇಳೆ ಪ್ರಮುಖವಾಗಿ ಎಪಿಎಂಸಿ ಆವರಣದಲ್ಲಿ ವೇಬ್ರಿಡ್ಜ್ ನಿರ್ಮಾಣ, ಎರೆಹುಳ ಗೊಬ್ಬರ ಮರು ವಿತರಣೆಗೆ ಕ್ರಮ, ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಆದ್ಯತೆ, ಪಾಪಿನಾಯಕಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಕುರಿತಂತೆ ರೈತರು ಶಾಸಕರಿಗೆ ಅಹವಾಲು ಸಲ್ಲಿಸಿದರು.

ಬೆಂಗಳೂರಿನಲ್ಲಿ ನಡೆದ ಅಂತರಾಷ್ಟಿçÃಯ ಸಿರಿಧಾನ್ಯ ಹಾಗೂ ಸಾವಯವ ಮೇಳದಲ್ಲಿ ನಡೆದ ರಾಜ್ಯಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆಯಲ್ಲಿ ವಿಜಯನಗರ ಜಿಲ್ಲೆಯಿಂದ ಪ್ರಥಮ ಸ್ಥಾನ ಪಡೆದ ಹೊಸಪೇಟೆಯ ರೂಪ ಮತ್ತು 2023-24ನೇ ಸಾಲಿನ ರಾಜ್ಯಮಟ್ಟದ ಬೆಳೆ ಸ್ಪರ್ಧೆ ಯೋಜನೆಯಡಿ ಭಾಗವಹಿಸಿ ಪರಿಶಿಷ್ಟ ಜಾತಿ ಮಹಿಳಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕೊಂಡನಾಯಕಹಳ್ಳಿ ಗ್ರಾಮದ ನಿವಾಸಿ ನಾಗಮ್ಮ ಇವರಿಗೆ ಗೌರವಿಸಿ ಸನ್ಮಾನಿಸಲಾಯಿತು.

ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಮನೋಹರ ಗೌಡ, ಕೃಷಿ ವಿಜ್ಞಾನಿಗಳಾದ ಭದ್ರೇಶ್, ಮಂಜುನಾಥ ಬಾನುವಳ್ಳಿ, ಕೃಷಿ ಇಲಾಖೆಯ ಪರಮೇಶ್ವರ ನಾಯ್ಕ, ಶರತ್ ಕುಮಾರ್, ಕೃಷಿ ಅಧಿಕಾರಿ ಎಲ್.ವೆಂಕಟೇಶ್ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ