Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಸಚಿವ ಸತೀಶ್‌ ಜಾರಕಿಹೊಳಿ


ನಿಪ್ಪಾಣಿ02: ನಿಪ್ಪಾಣಿಯಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.


ನಿಪ್ಪಾಣಿ ಪಟ್ಟಣದ ಕಾಮ್ಗರ್ ಚೌಕ್ ನಲ್ಲಿ ಏಕತಾ ಫೌಂಡೇಶನ್‌ ಸಹಯೋಗದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ ಹಮ್ಮಿಕೊಂಡಿದ್ದ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.


ಕೊವಿಡ್‌ ಅವಧಿಯಲ್ಲಿ ಕೆಲಸ ಮಾಡಿದ ಏಕತಾ ಫೌಂಡೇಶನ್ ಸಾಮಾಜಿಕ ಕಾರ್ಯ, ಕಳಕಳಿ ಎಲ್ಲರಿಗೂ ಪ್ರೇರಣೆಯಾಗಬೇಕು. ಇಂತಹ ಫೌಂಡೇಶನ್ ಗಳ ಸಂಖ್ಯೆಯೂ ಹೆಚ್ಚಾಗಬೇಕೆಂದು ತಿಳಿಸಿದ ಅವರು, ನಾವು ಕೂಡ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ಮೂಲಕ ಸುಮಾರು ವರ್ಷಗಳಿಂದ ಸಾಮಾಜಿಕ, ಸ್ವಚ್ಛತೆ, ಶೈಕ್ಷಣಿಕ, ಕ್ರೀಡಾ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ಇದೇ ಫೌಂಡೇಶನ್‌ ನಿಂದ ಯುವಕರಿಗೆ ಪೊಲೀಸ್‌, ಆರ್ಮಿ, ಕೆಎಎಸ್‌, ಐಎಎಸ್‌, ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡುತ್ತಿದ್ದೇವೆ. ಅತೀ ಕಡಿಮೆ ಅವಧಿಯಲ್ಲಿ ತರಬೇತಿ ಪಡೆದ ಯುವಕರು ಇಂದು ಅಗ್ನಿವೀರರಾಗಿ, ಪೊಲೀಸ್‌ ಪೇದೆಯಾಗಿ ನೇಮಕವಾಗಿದ್ದಾರೆಂದು ತಿಳಿಸಿದರು.


ಜನವಿರೋಧಿ, ಜನದ್ರೋಹಿ ಹಾಗೂ ಸಂವಿಧಾನ ವಿರೋಧಿ ಬಿಜೆಪಿ ಆಡಳಿತ ವೈಫಲ್ಯದ ವಿರುದ್ಧ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯಾದ್ಯಂತ ಚುನಾವಣಾ ಜನಜಾಗೃತಿ ಆಂದೋಲನ ನಡೆಯಲಿದೆ. ಜನಸಾಮಾನ್ಯರಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಪರಸ್ಪರ ಒಡೆದಾಳುವ ಮೂಲಕ ದೇಶದ ನೆಲ, ಜಲ, ಸಂಪತ್ತನ್ನು ಕಾರ್ಪೊರೇಟ್ ಕಂಪನಿಗಳಿಗೆ ಲೂಟಿ ಹೊಡೆಯಲು ಮುಕ್ತ ಅವಕಾಶ ನೀಡಿರುವ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಬೇಕು. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹೇಳಿದರು.


ಮಾಜಿ ಸಚಿವ ವೀರಕುಮಾರ ಪಾಟೀಲ್‌, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಕಾಂಗ್ರೆಸ್‌ ಮುಖಂಡರಾದ ರಾಜೇಶ್‌ ಕದಮ್‌, ಪಂಕಜ ಪಾಟೀಲ್‌, ರೋಹಣ ಸಾಳವೆ, ಮಾಜಿ ಸಚಿವ ವೀರಕುಮಾರ ಪಾಟೀಲ್, ಗಣೇಶ್ ನಿಂಬಾಳಕರ್, ರಾಜು ವಡ್ಡರ್, ಇರ್ಫಾನ್, ರಾಜಪಟಾಣ ಸಾಬ್ ಸೇರಿದಂತೆ ಏಕತಾ ಫೌಂಡೇಶನ್ ನ ಸರ್ವ ಸದಸ್ಯರು, ಅಪಾರ ಸಂಖ್ಯೆಯ ಸಾರ್ವಜನಿಕರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ