Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಬಕೋವಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ 12 ನಿರ್ದೇಶಕರ ಚುನಾವಣೆ




ಬಳ್ಳಾರಿ: 10.ಇಲ್ಲಿನ ರಾಬಕೋವಿ ಹಾಲು ಒಕ್ಕೂಟದ ಕಚೇರಿಯಲ್ಲಿ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ 12 ನಿರ್ದೇಶಕರ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ನೂತನ ಸದಸ್ಯರಿಗೆ ಚುನಾವಣೆ ಅಧಿಕಾರಿ ಪ್ರಮೋದ್ ಅವರು ಪ್ರಮಾಣ ಪತ್ರಗಳನ್ನು ವಿತರಿಸಿದರು.


ಕೊಪ್ಪಳ ಜಿಲ್ಲೆ: ಕೃಷ್ಣಾ ರೆಡ್ಡಿ 106 ಮತಗಳು, ಮಹಿಳಾ ಕ್ಷೇತ್ರದಿಂದ ಕುಕನೂರಿನ ಕಮಲವ್ವ 92 ಮತಗಳು, ಮಂಜುನಾಥ್ 94, ಎನ್.ಸತ್ಯನಾರಾಯಣ 93 ಮತಗಳನ್ನು ಪಡೆದು ಆಯ್ಕೆಯಾದರು. ರಾಯಚೂರು ಜಿಲ್ಲೆ:  ಬಿ.ಪ್ರವೀಣ್ ಕುಮಾರ್ 31 ಮತಗಳು, ಅಮರಗುಂಡಪ್ಪ  31 ಮತಗಳು, ಭೀಮನಗೌಡ 24 ಮತಗಳು, ಮಹಿಳಾ ಕ್ಷೇತ್ರದಿಂದ ಎನ್.ಸೀತಾರಾಮ ಲಕ್ಷ್ಮಿ ಅವರು 28 ಮತಗಳನ್ನು ಪಡೆದು ಆಯ್ಕೆಯಾದರು. ಅಖಂಡ ಬಳ್ಳಾರಿ ಜಿಲ್ಲೆ: ಎಲ್.ಬಿ.ಪಿ. ಭೀಮಾ ನಾಯ್ಕ್ 183 ಮತಗಳು, ಎಚ್. ಮರಳುಸಿದ್ದಪ್ಪ 165, ಐಗೋಳು ಚಿದಾನಂದ 159 ಮತಗಳು, ಮಹಿಳಾ ಕ್ಷೇತ್ರದಿಂದ ರತ್ನಮ್ಮ ಎಚ್ 147 ಮತಗಳನ್ನು ಪಡೆದು ಆಯ್ಕೆಯಾದರು ಎಂದು ಚುನಾವಣೆ ಅಧಿಕಾರಿ ಪ್ರಮೋದ್ ಅವರು ಅಧಿಕೃತವಾಗಿ ಘೋಷಿಸಿ, ಪ್ರಮಾಣ ಪತ್ರಗಳನ್ನು ವಿತರಿಸಿದರು. ಫಲಿತಾಂಶ ಹೊರ ಬೀಳುತ್ತಿದ್ದಂತೆ ಜಮಾಯಿಸಿದ್ದ ಅಪಾರ ಬೆಂಬಲಿಗರು, ಅಭಿಮಾನಿಗಳು ನಗರದ ರಾಬಕೋವಿ ಹಾಲು ಒಕ್ಕೂಟದ (ಕೆಎಂಎಫ್) ಕಚೇರಿ ಬಳಿಯ ಶ್ರೀ ಕನಕದಾಸ ವೃತ್ತದ ಬಳಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.


ಘೋಷಣೆ ಕೂಗಿ

ಹೈಡ್ರಾಮಾ: ನಗರದ ರಾಬಕೋವಿ ಹಾಲು ಒಕ್ಕೂಟದ ಕಚೇರಿಯಲ್ಲಿ ಬೆಳಿಗ್ಗೆ ನಿಗಧಿತ ಅವಧಿಯಲ್ಲಿ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಯಿತು. ಮಧ್ಯಾಹ್ನದ ಬಳಿಕ ಚುನಾವಣೆ ಪ್ರಕ್ರಿಯೆ ಬಿರುಸಿನಿಂದ ನಡೆಯಿತು.  ಕೆಎಂಎಫ್ ಮಾಜಿ ಅಧ್ಯಕ್ಷ ಭೀಮಾ ನಾಯ್ಕ್ ಅವರ ನೇತೃತ್ವದಲ್ಲಿ ಮಧ್ಯಾಹ್ನ ಸುಮಾರು 6 ರಿಂದ 7 ಖಾಸಗಿ ಬಸ್ ಸೇರಿ ವಿವಿಧ ವಾಹನಗಳ  ಮೂಲಕ ಮತದಾರರು ಕಛೇರಿಯತ್ತ ಹೆಜ್ಜೆ ಹಾಕಿ, ಸರದಿಯಲ್ಲಿ ನಿಂತು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಈ ವೇಳೆ ಕಚೇರಿ ಬಳಿಯ ಶ್ರೀ ಕನಕದಾಸ ವೃತ್ತದ ಬಳಿ ಹೈಡ್ರಾಮಾ ನಡೆಯಿತು. ಬಸ್ ನಿಂದ ಮತದಾರರು ಕೆಳಗಿಳಿಯುತ್ತಿದ್ದಂತೆ ಸ್ಥಳದಲ್ಲಿದ್ದ ಕೆಲವರು, ದಬ್ಬಾಳಿಕೆಗೆ ಮತ ಹಾಕಬೇಡಿ, ದೌರ್ಜನ್ಯ ನಡೆಯುತ್ತಿದೆ, ಬಡವರನ್ನು ನೋಡಿ, ಬಡವರಿಗೆ, ರೈತರ ಪರವಾಗಿ ದುಡಿಯುವವರಿಗೆ ಮತ ಹಾಕಿ ಬೆಂಬಲಿಸಿ ಎಂದು ಘೋಷಣೆ ಕೂಗಿದರು. ಸ್ಥಳದಲ್ಲಿದ್ದ ಭೀಮಾ ನಾಯ್ಕ್ ಇದ್ಯಾವುದನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೆ ತಮ್ಮ ಬೆಂಬಲಿಗರನ್ನು ಮತದಾನ ಕೇಂದ್ರದ ಕಡೆ ಕರೆದೊಯ್ದರು.


ಪಟಾಕಿ ಸಿಡಿಸಿ ಸಂಭ್ರಮ: ನೂತನ ಸದಸ್ಯರಾಗಿ ಆಯ್ಕೆಯಾಗುತ್ತಿದ್ದಂತೆ ಚುನಾವಣೆ ಅಧಿಕಾರಿ ಪ್ರಮೋದ್ ಅವರು ಪ್ರಮಾಣ ಪತ್ರಗಳನ್ನು ವಿತರಿಸಿದರು. ಗೆಲುವಿನ ನಗೆಯಲ್ಲಿ ಕಚೇರಿಯಿಂದ ಹೋರ ಬಂದ ನೂತನ ಸದಸ್ಯರಿಗೆ  ಅಭಿಮಾನಿಗಳು, ಬೆಂಬಲಿಗರು ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ  ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಯಲಬುರ್ಗಾ ತಾಲೂಕು ಅಧ್ಯಕ್ಷ ಸುಧೀರ್ ಕೋರ್ಲಹಳ್ಳಿ, ಕುಕನೂರು ಪಟ್ಟಣ ಪಂಚಾಯಿತಿ ಸದಸ್ಯ ಗಗನ್ ನೋಟಗಾರ್, ಗಾವರಾಳ ಗ್ರಾಮ ಪಂಚಾಯಿತಿ ಸದಸ್ಯ ಮಹೇಶ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ

ಶರಣಪ್ಪ ಗಾಂಜಿ, ಮುಖಂಡರಾದ ಮಲ್ಲಿಕಾರ್ಜುನ್ ಜಕ್ಲಿ ಅವರು ನೂತನ ಸದಸ್ಯೆ ಕಮಲವ್ವ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಇದಕ್ಕೂ ಮುನ್ನ ಕೆಎಂಎಫ್ ಮಾಜಿ ಅಧ್ಯಕ್ಷ ಭೀಮಾ ನಾಯ್ಕ್ ಸೇರಿದಂತೆ ಅವರ ತoಡಡ ನೂತನ ಸದಸ್ಯರು ಪ್ರಮಾಣ ಪತ್ರಗಳನ್ನು ಪಡೆದು, ಗೆಲುವಿನ ನಗೆ ಬೀರಿದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ