ಆದರೆ, ಕೆಲಸಕ್ಕೆ ಮರಳಿದರೂ ಕಿರಿಯ ವೈದ್ಯರು ನ್ಯಾಯಕ್ಕಾಗಿ ತಮ್ಮ ಬೇಡಿಕೆಯಲ್ಲಿ ದೃಢವಾಗಿ ಉಳಿದಿದ್ದಾರೆ. ಶುಕ್ರವಾರ ಮಧ್ಯಾಹ್ನ ಸ್ವಸ್ಥ ಭವನದಿಂದ ಸಿಬಿಐ ಕಚೇರಿಯವರೆಗೆ ಮೆರವಣಿಗೆ ನಡೆಸಲು ಯೋಜಿಸಿದ್ದಾರೆ. ತಮ್ಮ ಕುಂದುಕೊರತೆಗಳ ಬಗ್ಗೆ ಗಮನ ಸೆಳೆದು ಅಧಿಕಾರಿಗಳಿಂದ ಪರಿಹಾರ ಪಡೆಯುವುದು ಈ ಪ್ರತಿಭಟನೆ ಮೆರವಣಿಗೆಯ ಉದ್ದೇಶವಾಗಿದೆ.
ಕೊಲ್ಕತ್ತಾದ ಕಿರಿಯ ವೈದ್ಯರು ಈ ಶನಿವಾರದಿಂದ ತುರ್ತು ವೈದ್ಯಕೀಯ ಸೇವೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ ನಿರ್ಧಾರವು ಹಲವಾರು ದಿನಗಳ ಪ್ರತಿಭಟನೆ ಮತ್ತು ಸೇವೆಗಳಲ್ಲಿ ಅಡ್ಡಿಪಡಿಸಿದ ನಂತರ ಸರ್ಕಾರಕ್ಕೆ ಕೊಂಚ ರಿಲೀಫ್ ಉಂಟುಮಾಡಿದೆ. ವೈದ್ಯರ ಮುಷ್ಕರದಿಂದ ಕೊಲ್ಕತ್ತಾದ ಜನರು ವೈದ್ಯರ ಚಿಕಿತ್ಸೆ ಸಿಗದೆ ಸಾಕಷ್ಟು ತುಂದರೆ ಅನುಭವಿಸಿದ್ದರು. ಪ್ರತಿಭಟನೆ ಹಿಂಪಡೆಯುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಾಕಷ್ಟು ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ