ಬೆಂಗಳೂರು, ಮಾರ್ಚ್ 26: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿ, ನಂತರ ಸರ್ಕಾರದ ಭರವಸೆಯಿಂದ ತೃಪ್ತರಾಗಿ ಹೋರಾಟದಿಂದ ಹಿಂದೆ ಸರಿದಿದ್ದ ಸಾರಿಗೆ ನೌಕರರು ಇದೀಗ ಮತ್ತೆ ಸಿಡಿದೇಳುವ ಸುಳಿವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ. ಮಾತುಕತೆಯನ್ನೂ ನಡೆಸಿಲ್ಲ ಎಂದು ಆರೋಪಿಸಿರುವ ಅವರು, ಸಿಎಂ ಮನೆ ಮುಂದೆ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.
ಏಪ್ರಿಲ್ 15 ರಂದು ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಧರಣಿ ಸತ್ಯಾಗ್ರಹದ ನಡೆಸಲಾಗುವುದು ಎಂದು ಜಂಟಿ ಕ್ರಿಯಾ ಸಮಿತಿ ಹೇಳಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ತಪ್ಪಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದೆ.
ಮಾತುಕತೆಯ ಭರವಸೆ ನೀಡಿದ್ದ ಸಿಎಂ ಸಿದ್ದರಾಮಯ್ಯ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದರು. ಆ ಸಂದರ್ಭದಲ್ಲಿ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದ ಸಿಎಂ, ಮುಷ್ಕರ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಅಲ್ಲದೆ, ಸಂಕ್ರಾಂತಿ ನಂತ್ರ ನೌಕರರ ಸಂಘಟನೆ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದರು. ನೌಕರರ ಜೊತೆ ಮಾತುಕತೆ ನಡೆಸುವುದು ಮಾತ್ರವಲ್ಲದೆ, ಪ್ರಯಾಣ ದರ ಏರಿಕೆ ಷರತ್ತನ್ನೂ ಹಾಕಲಾಗಿತ್ತು. ಅದರಂತೆ, ನಿಗಮವು ಈಗಾಗಲೇ ಟಿಕೆಟ್ ದರ ಏರಿಕೆ ಮಾಡಿದೆ. ಆದರೆ, ನೌಕರರನ್ನು ಮಾತ್ರ 2 ತಿಂಗಳು ಕಳೆದರೂ ಮಾತುಕತೆಗೆ ಕರೆದಿಲ್ಲ. ಇದರಿಂದಾಗಿ ಸಾರಿಗೆ ನೌಕರರ ಸಂಘಟನೆಗಳು ಸಿಎಂ ವಿರುದ್ಧ ಕೆರಳಿವೆ. ಏಪ್ರಿಲ್ 15 ರ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸುವ ಸುಳಿವು ನೀಡಿವೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.