LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ನ.2 ರಿಂದ ಇಂಧನ ಶೃಂಗಸಭೆ, ಎಕ್ಸ್‌ಪೋ (BRESE)2026

ಹಸಿರು ಕ್ರಾಂತಿ ವರದಿ ನವದೆಹಲಿ ನವೀಕರಿಸಬಹುದಾದ ಇಂಧನ ವಲಯದಲ್ಲಿ ಅಂತಾರಾಷ್ಟ್ರೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ದೆಹಲಿಯಲ್ಲಿ ನ.2 ರಿಂದ 5 ರವರೆಗೆ ಭಾರತ ನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಎಕ್ಸ್‌ಪೋ BRESE-2026  ಆಯೋಜಿಸಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ದೆಹಲಿಯಲ್ಲಿ ಗುರುವಾರ ನಡೆದ BRESE-2026ರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, BRESE 2026 ಶೃಂಗಸಭೆ ಇದೇ ಮೊದಲ ಬಾರಿಗೆ 3 ಪ್ರಮುಖ ನವೀಕರಿಸಬಹುದಾದ ಇಂಧನ ಕಾರ್ಯಕ್ರಮಗಳನ್ನು ಒಂದೇ ವೇದಿಕೆಯಡಿ ತರಲಿದೆ. ನವದೆಹಲಿಯ ಭಾರತ್ ಮಂಟಪದಲ್ಲಿ ನವೆಂಬರ್‌ ಮೊದಲ ವಾರದಲ್ಲೇ ನಿರಂತರ 4 ದಿನಗಳ ಕಾಲ ಜರುಗಲಿರುವ ನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಎಕ್ಸ್‌ಪೋ (BRESE) ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದರು.

ಭಾರತದಲ್ಲಿ ನಡೆಯುತ್ತಿರುವ ಈ ಐತಿಹಾಸಿಕ ಶೃಂಗಸಭೆಯು ಜಾಗತಿಕ ಮಟ್ಟದಲ್ಲಿ ಹೊಸ ಹೊಸ ಪಾಲುದಾರಿಕೆಗಳನ್ನು ಬೆಳೆಸುತ್ತದೆ. ಹೆಚ್ಚು ಹೆಚ್ಚು ಹೂಡಿಕೆಗಳನ್ನು ಆಕರ್ಷಿಸುವ ಜತೆಗೆ ನವೀಕರಿಸಬಹುದಾದ ಇಂಧನ ವಲಯದಲ್ಲಿ ನಾವೀನ್ಯತೆಯನ್ನು ಉತ್ತೇಜಿಸುತ್ತದೆ ಮತ್ತು ಮತ್ತಷ್ಟು ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

BRESE-2026 ಶೃಂಗಸಭೆ ಜತೆಗೆ ಅಂತರಾಷ್ಟ್ರೀಯ ಸೌರ ಒಕ್ಕೂಟ (ISA) ಅಸೆಂಬ್ಲಿಯ 9ನೇ ಅಧಿವೇಶನ ಮತ್ತು ಹಸಿರು ಹೈಡ್ರೋಜನ್ ಕುರಿತ 4ನೇ ಅಂತಾರಾಷ್ಟ್ರೀಯ ಸಮ್ಮೇಳನ (ICGH) ಸಹ ನಡೆಯಲಿದ್ದು, ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದರು.

34 ಹೊಸ ರಾಷ್ಟ್ರಗಳಿಗೆ ಆಹ್ವಾನ: ಈ ಶೃಂಗಸಭೆಯನ್ನು ನಿಜವಾದ ಜಾಗತಿಕ ದೃಷ್ಟಿಕೋನದೊಂದಿಗೆ ವಿನ್ಯಾಸಗೊಳಿಸಲಾಗಿದೆ. 34 ಹೊಸ ದೇಶಗಳಿಗೆ ಆಹ್ವಾನ ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಸೌರ ಒಕ್ಕೂಟ 128 ದೇಶಗಳನ್ನು ಆಹ್ವಾನಿಸಿದೆ. ಇದು ಜಾಗತಿಕವಾಗಿ ನವೀಕರಿಸಬಹುದಾದ ಇಂಧನ ಸಮುದಾಯವನ್ನು ಒಗ್ಗೂಡಿಸಲು ಅನುವು ಮಾಡಿಕೊಟ್ಟಿದೆ. ಶೃಂಗಸಭೆಯು ನವೀಕರಿಸಬಹುದಾದ ಇಂಧನ ವಲಯದ ಬೆಳವಣಿಗೆ, ಉದಯೋನ್ಮುಖ ಅವಕಾಶಗಳು ಮತ್ತು ಶುದ್ಧ ಇಂಧನ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಜಾಗತಿಕ ಸಹಯೋಗಕ್ಕೆ ಭಾರತದ ಬದ್ಧತೆ ಪ್ರತಿಬಿಂಬಿಸುತ್ತದೆ ಎಂದು ಭರವಸೆ ನೀಡಿದರು.

ಶೀಘ್ರದಲ್ಲೇ 300 GW ಹೆಗ್ಗುರುತು: ಭಾರತ ಶೀಘ್ರದಲ್ಲೇ 300 GW ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಹೆಗ್ಗುರುತನ್ನು ದಾಟಲಿದೆ. ಅಂತೆಯೇ ಪ್ರಧಾನಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ ಸದ್ಯದಲ್ಲೇ 50 ಲಕ್ಷ ಫಲಾನುಭವಿಗಳನ್ನು ದಾಟುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು.

BRESE-2026 ರ ಅಧಿಕೃತ ಲೋಗೋ ಊರ್ಜಾ ಚಕ್ರವನ್ನು ಅನಾವರಣಗೊಳಿಸಿದರು ಮತ್ತು ಶೃಂಗಸಭೆಗಾಗಿ ಅಧಿಕೃತ ಡಿಜಿಟಲ್ ಪೋರ್ಟಲ್ ಮತ್ತು ಮೊಬೈಲ್ ಅಪ್ಲಿಕೇಶನ್ ಸಹ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೊ ನಾಯಕ್, ಭಾರತದ ನವೀಕರಿಸಬಹುದಾದ ಇಂಧನ ಪರಿವರ್ತನೆ ದೇಶಾದ್ಯಂತದ ಎಲ್ಲ ರಾಜ್ಯಗಳ ಸಾಮೂಹಿಕ ಪ್ರಯತ್ನದಿಂದ ಸಾಧ್ಯವಾಗುತ್ತಿದೆ ಎಂದರು.

ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ ಮಾತನಾಡಿ, ಇಂಧನ ಪರಿವರ್ತನೆ ಮುಂದಿನ ಹಂತವು ಹೈಬ್ರಿಡ್ ನವೀಕರಿಸಬಹುದಾದ ಇಂಧನ ಯೋಜನೆಗಳು, ಬ್ಯಾಟರಿ ಶಕ್ತಿ ಸಂಗ್ರಹ ವ್ಯವಸ್ಥೆ, ತೇಲುವ ಸೌರಶಕ್ತಿ, ಕೃಷಿ ವೋಲ್ಟೇಜ್‌ ಮತ್ತು ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಮೂಲಕ ಸಾಮರ್ಥ್ಯ ಬಲಪಡಿಸುವತ್ತ ಗಮನಹರಿಸುತ್ತದೆ ಎಂದರು.


ಭಾರತ್ ನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಎಕ್ಸ್‌ಪೋ (BRESE) 2026 ಸರ್ಕಾರಗಳು, ಕೈಗಾರಿಕೆಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಅಂತರಾಷ್ಟ್ರೀಯ ಪಾಲುದಾರರಿಗೆ ಹೂಡಿಕೆ, ತಂತ್ರಜ್ಞಾನ ಪಾಲುದಾರಿಕೆ ಮತ್ತು ಶುದ್ಧ ಇಂಧನದಲ್ಲಿ ಸಹಯೋಗವನ್ನು ವೇಗಗೊಳಿಸಲು ಸಾಮಾನ್ಯ ವೇದಿಕೆಯನ್ನು ಒದಗಿಸುತ್ತದೆ.
-ಪ್ರಲ್ಹಾದ ಜೋಶಿ, ಕೇಂದ್ರ ಸಚಿವರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್