Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಮಿಗಳು - ಬಂಡವಾಳ ಹೂಡಿಕೆದಾರರು ಇಂಕ್ಯುಬೇಷನ್ ಸೆಂಟರ್ ಸದುಪಯೋಗ ಪಡೆದುಕೊಳ್ಳಿ : ಯಶವಂತರಾಜ್ ನಾಗಿರೆಡ್ಡಿ

ಬಳ್ಳಾರಿ, ಅ. 18:ಉದ್ಯಮಗಳು ಮತ್ತು ಉದ್ಯೋಗಗಳನ್ನು ಹೆಚ್ಚಿಸಲು ಅಗತ್ಯವಿರುವ ಬಂಡವಾಳ – ತಾಂತ್ರಿಕ ; ಮಾರುಕಟ್ಟೆ – ಮಾನವ ಸಂಪನ್ಮೂಲಗಳ ಮಾರ್ಗದರ್ಶನ ನೀಡಲಿಕ್ಕಾಗಿಯೇ ನಮ್ಮ ಸಂಸ್ಥೆಯು ಇಂಕ್ಯುಬೇಷನ್ ಸೆಂಟರ್ ಪ್ರಾರಂಭಿಸಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾಗಿರುವ ಯಶವಂತರಾಜ್ ನಾಗಿರೆಡ್ಡಿ ಅವರು ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆಡಿಟೋರಿಯಂನಲ್ಲಿ ಶನಿವಾರ ನಡೆದ `ಲೀನ್ ಯೋಜನೆ, ಸಿ, `ಝೀರೋ ಡಿಫೆಕ್ಟ್, ಝೀರೋ ವೇಸ್ಟ್’ (ಲೀನ್) ಹಾಗೂ ರಫ್ತು’ ವಿಷಯದ ಒಂದು ದಿನದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಉದ್ಯಮದಲ್ಲಿ ಪ್ರತಿ ನಿತ್ಯವೂ, ಪ್ರತಿ ಕ್ಷಣವೂ ಸವಾಲುಗಳು - ಸಂಕಷ್ಟಗಳು ಎದುರಾಗುವುದು ಸಹಜ. ಅಂಥಹಾ ಸವಾಲುಗಳು - ಸಂದರ್ಭಗಳನ್ನು ಯಶಸ್ವಿಯಾಗಿ ಎದುರಿಸಿ ಉದ್ಯಮದಲ್ಲಿ ಗೆಲುವು ಸಾಧಿಸಲು ನಮ್ಮ ಇಂಕ್ಯುಬೇಷನ್ ಸೆಂಟರ್ ಜ್ಞಾನವನ್ನು, ಕೌಶಲ್ಯಗಳನ್ನು, ಆತ್ಮಸ್ಥೆöÊರ್ಯವನ್ನು ನೀಡಲಿದೆ. ಪ್ರತಿಯೊಬ್ಬರೂ ಈ ವ್ಯವಸ್ಥೆಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಕೇವಲ ವಾಣಿಜ್ಯ ಮತ್ತು ಕೈಗಾರಿಕೆಗಳಿಗೆ ಸೀಮಿತವಾದ ಸಂಸ್ಥೆಯಲ್ಲ. ಸಮಾಜದ ಪ್ರತಿಯೊಬ್ಬರಿಗೂ ನಮ್ಮ ಸಂಸ್ಥೆ ತಲುಪುತ್ತಿದೆ. ಅನೇಕರಿಗೆ ನಮ್ಮ ಯೋಜನೆಗಳು ತಲುಪುತ್ತಿವೆ. ಈ ನಿಟ್ಟಿನಲ್ಲಿ ರಫ್ತು ಸಲಹೆ, ಉತ್ಪನ್ನಗಳ ಗುಣಮಟ್ಟ, ಮಾರುಕಟ್ಟೆ ಇನ್ನಿತರೆಗಳ ಮಾಹಿತಿ ಪಡೆಯಲು ಇಂಕ್ಯುಬೇಷನ್ ಸೆಂಟರ್‌ನ ಸದುಪಯೋಗ ಪಡೆದುಕೊಳ್ಳಿರಿ ಎಂದರು.
ಬಳ್ಳಾರಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಬಿ. ಸೋಮಶೇಖರ್ ಅವರು, ಕೈಗಾರಿಕೆಗಳು ಮತ್ತು ಉತ್ಪನ್ನಗಳ ಉತ್ತೇಜನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳನ್ನು ವಿವರಿಸಿ, `ಝೀರೋ ಡಿಫೆಕ್ಟ್, ಝೀರೋ ವೇಸ್ಟ್’ (ಲೀನ್) ಕುರಿತು ಸಮಗ್ರವಾಗಿ ವಿವರಿಸಿದರು.
ಬಳ್ಳಾರಿ ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ. ರಾಮಚಂದ್ರ ಅವರು ಮುಖ್ಯ ಅತಿಥಿಗಳಾಗಿ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳು ಅತಿ ಹೆಚ್ಚಿನ ಉದ್ಯೋಗ ಸೃಷ್ಟಿಸುತ್ತಿವೆ. ಉದ್ಯೋಗ ಸೃಷ್ಠಿಯಲ್ಲಿ ನಿರಂತರ ತೊಡಗಿಕೊಂಡಿರುವ ಉದ್ಯಮಗಳು ವಿವಿಧ ಕಾರ್ಯಾಗಾರಗಳು, ಸಂಸ್ಥೆಗಳು ನೀಡುವ ಸಲಹೆ - ಸೂಚನೆಗಳನ್ನು ಪಡೆದು, ಯಶಸ್ವಿಯಾಗಬೇಕು ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು, ಬಳ್ಳಾರಿ ಜಿಲ್ಲಾ ಹತ್ತಿ ಗಿರಣಿಗಳ ಸಂಘದ ಅಧ್ಯಕ್ಷರಾದ ದಂಡಿನ್ ತಿಪ್ಪೇಸ್ವಾಮಿ, ವಿಟಿಪಿಸಿ ಧಾರವಾಡದ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ವೇದಿಕೆಯಲ್ಲಿದ್ದರು.
ಕಾಸಿಯಾದ ಕಾಸಿಯಾದ ಉಪಾಧ್ಯಕ್ಷರಾದ ನಿಂಗಣ್ಣ ಎಸ್. ಬಿರಾದಾರ ಅವರು ಅಧ್ಯಕ್ಷತೆವಹಿಸಿದ್ದರು. ಕಾಶಿಯದ ವ್ಯವಸ್ಥಾಪಕ ಸಮಿತಿ ಸದಸ್ಯ ಶಿವಕುಮಾರ್ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಆರ್. ಕೇಶವಮೂರ್ತಿ ಅವರು ವಂದನಾರ್ಪಣೆ ಸಲ್ಲಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ