LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

VB G RAM G ಯೋಜನೆ ಕಾಮಗಾರಿ ಸ್ಥಳಕ್ಕೆ ಇಒ ಭೇಟಿ; ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ರಕ್ಕಸಗಿ ಗ್ರಾಮ ಪಂಚಾಯತಿಗೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂಗನಗೌಡ ಬಿರಾದಾರ VB G RAM G ಯೋಜನೆಯಡಿ ಪ್ರಗತಿಯಲ್ಲಿದ್ದ ಕ್ಯಾನಲ್ ಹೂಳು ಎತ್ತುವುದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್ ಯೋಜನೆಯಡಿ ರಕ್ಕಸಗಿ ಗ್ರಾಮ ಪಂಚಾಯತಿಯ ಬಲದಿನ್ನಿ ಹಾಗೂ ಕಾರಕೂರ ಗ್ರಾಮದ ವಿಬಿಜಿ ರಾಮ್ ಜಿ ಯೋಜನೆಯ ಕೂಲಿಕಾರರು ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಿದ್ದರು. ಕಾರಕೂರ ಗ್ರಾಮದ ಅಮರೇಶ ಗಾದಿ ಇವರ ಹೊಲದಿಂದ ಬಸಪ್ಪ ಸಂ ಹುದ್ದಾರ ಇವರ ಹೊಲದವೆರೆಗೆ ಕಾಲೂವೆ ಹೂಳು ಎತ್ತುವುದು ಕಾಮಗಾರಿಯಲ್ಲಿ NMR ತೆಗೆದು ಕೆಲಸ ಹಂಚಿಕೆ ಮಾಡಲಾಗಿದೆ.
ಜುಲೈ-1 ರಿಂದ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ವಿಬಿಜಿ ರಾಮ್ ಜಿ ಯೋಜನೆ ಜಾರಿಗೆ ಬಂದಿದ್ದು, 100 ದಿನಗಳ ಬದಲಾಗಿ 125  ಮಾನವ ದಿನಗಳನ್ನು ನೀಡಲಾಗಿದೆ. ಅಲ್ಲದೆ ಒಂದು ದಿನದ ಕೂಲಿ ದರ ರೂ. 382 ಹೆಚ್ಚಾಗಿದ್ದು, ಕೂಲಿಕಾರರ ಜೀವನ ನಿರ್ವಹಣೆಗೆ ಆರ್ಥಿಕವಾಗಿ ಸಹಕಾರಿಯಾಗಲಿದೆ ಎಂದು ಇಒ ಅವರು ತಿಳಿಸಿದರು.
ಕೃಷಿ ಹಂಗಾಮ ಹೊರತುಪಡಿಸಿ ಕೂಲಿಕಾರರಿಗೆ ನಿರಂತರ ಕೆಲಸ ನೀಡಲಾಗುವುದು. ರೈತರು ಕೃಷಿಹೊಂಡ, ದನದ ಶೆಡ್, ಮೇಕೆ, ಕುರಿ ಶೆಡ್ ನಿರ್ಮಾಣ ಕಾಮಗಾರಿಗಳನ್ನು ಮಾಡಿಕೊಳ್ಳಲು ಅವಕಾಶವಿದೆ. ಗ್ರಾ.ಪಂ. ಗರ ಭೇಟಿ ನೀಡಿ ಬೇಡಿಕೆ ಅರ್ಜಿಗಳನ್ನು ಸಲ್ಲಿಸಿ ಎಂದು ಸಲಹೆ ನೀಡಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಎಂ.ವೈ. ಅಮ್ಮನ್ನವರ, ವಿಬಿಜಿ ರಾಮ್ ಜಿ ತಾಲೂಕು ಐಇಸಿ ಸಂಯೋಜಕ ಪರಮೇಶ ಹೊಸಮನಿ, ತಾಂತ್ರಿಕ ಸಹಾಯಕ ಉಮೇಶ ಕಣ್ಣಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ