Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂವಿಧಾನದಿಂದ ಸಮಾನತೆ: ಪ್ರೊ.ಎಂ ಮುನಿರಾಜು ಅಭಿಮತ




ಬಳ್ಳಾರಿ,ಜ.27-ಸಂವಿಧಾನದ ಭದ್ರ ಅಡಿಪಾಯವಾದ ಕಾನೂನಿನ ಚೌಕಟ್ಟಿನಿಂದ ಇಂದು ದೇಶದ ನಾಗರಿಕರೆಲ್ಲ ಸಮಾನತೆಯಿಂದ ಬದುಕಲು ಸಾಧ್ಯವಾಗಿದೆ. ಗಣರಾಜ್ಯೋತ್ಸವಕ್ಕಾಗಿ ಶ್ರಮಿಸಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ತಂಡವನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ವಿವಿಯ ಕುಲಪತಿ ಪ್ರೊ.ಎಂ ಮುನಿರಾಜು ಹೇಳಿದರು.
77ನೇ ಗಣರಾಜ್ಯೋತ್ಸವದ ಅಂಗವಾಗಿ ವಿಶ್ವವಿದ್ಯಾಲಯದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಅವರು ಮಾತನಾಡಿದರು.
ಸಂವಿಧಾನದ ನೆಲೆಗಟ್ಟಿನಲ್ಲಿ ವಿವಿಯ ವಿದ್ಯಾರ್ಥಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್, ಸುಸಜ್ಜಿತ ಗ್ರಂಥಾಲಯ, ಗುಣಮಟ್ಟದ ಆಹಾರ ಸೌಲಭ್ಯ ಒದಗಿಸಲು ಹಂತ-ಹAತವಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದರು.
ಕಲ್ಯಾಣ-ಕರ್ನಾಟಕ ಭಾಗದ ವಿದ್ಯಾರ್ಥಿಗಳು ಉದ್ಯಮಶೀಲರಾಗಲು ಬೇಕಿರುವ ಕೌಶಲ್ಯಾಧಾರಿತ ಶಿಕ್ಷಣ ನೀಡಲು ವಿವಿಯ ಎಲ್ಲ ಸಿಬ್ಬಂದಿ ಶ್ರಮಿಸಬೇಕು ಎಂದು ಕರೆ ನೀಡಿದರು.
ವಿಶ್ವವಿದ್ಯಾಲಯದಲ್ಲಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಆದಷ್ಟು ಬೇಗ ನಿರ್ಮಿಸಲಾಗುವುದು ಎಂದು ಕುಲಪತಿಗಳು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಳ್ಳಾರಿಯ ಎನ್‌ಸಿಸಿ ಬಟಾಲಿಯನ್ ಎನ್ ಬಿ ಸುಬೇದಾರ್ ಹರಿಂದರ್ ಸಿಂಗ್ ಅವರು ಮಾತನಾಡಿ, ವಿಶ್ವದಲ್ಲಿಯೇ ಬೃಹತ್ ಸಂವಿಧಾನ ನಮ್ಮದು. ಎಲ್ಲ ಧರ್ಮಗಳಿಗೂ ಸಂವಿಧಾನದಲ್ಲಿ ಸಮಾನ ಸ್ಥಾನಮಾನ ನೀಡಲಾಗಿದೆ. ವಿವಿಯ ವಿದ್ಯಾರ್ಥಿಗಳು ಎನ್‌ಸಿಸಿ ಘಟಕಗಳಿಗೆ ಸೇರಿ ನಿಗದಿತ ಪ್ರಮಾಣಪತ್ರಗಳನ್ನು ಪಡೆದುಕೊಂಡು ಸರ್ಕಾರಿ ಹುದ್ದೆಗಳಲ್ಲಿ ಮೀಸಲಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಗಣರಾಜ್ಯೋತ್ಸವ ದಿನದಂದು ವಿವಿಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ವ್ಯಾಯಾಮ ಕೇಂದ್ರಗಳು (ಜಿಮ್) ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಲೋಕಾರ್ಪಣೆಗೊಳಿಸಲಾಯಿತು.
ಕುಲಸಚಿವ ಪ್ರೊ.ತಿಪ್ಪೇರುದ್ರಪ್ಪ.ಜೆ ಅತಿಥಿಗಳನ್ನು ಸ್ವಾಗತಿಸಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ಎಂ ಸಾಲಿ, ಸಿಂಡಿಕೇಟ್ ಸದಸ್ಯರಾದ ರಮೇಶ್ ಸವದಿ, ಶಿವಕುಮಾರ್, ಕ್ರೀಡಾ ವಿಭಾಗದ ನಿರ್ದೇಶಕ ಡಾ.ಶಶಿಧರ್ ಕೆಲ್ಲೂರ್ ವೇದಿಕೆಯಲ್ಲಿದ್ದರು.
ವಿವಿಯ ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ