LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಎಸ್​ವೈ ಪುತ್ರನ ವಿರುದ್ಧ ಈಶ್ವರಪ್ಪ ಸ್ಪರ್ಧೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಶಿವಮೊಗ್ಗ, ಏ.23: ರಾಜ್ಯ ಬಿಜೆಪಿಯಲ್ಲಿ ಬಿಜೆಪಿ ಕಟ್ಟಾಳು ಕೆಎಸ್ ಈಶ್ವರಪ್ಪ ಬಿರುಗಾಳಿ ಎಬ್ಬಿಸಿದ್ದಾರೆ. ಪುತ್ರ ಕಾಂತೇಶ್​ಗೆ ಹಾವೇರಿ ಟಿಕೆಟ್ ಫಿಕ್ಸ್ ಆಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು. ಇದರಿಂದ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ವಿಜಯೇಂದ್ರ ಮೇಲೆ ಕೆಂಡಾಮಂಡಲವಾಗಿದ್ದಾರೆ. ಇದೀಗ ಬದಲಾದ ಪರಿಸ್ಥಿತಿಯಲ್ಲಿ ಪಕ್ಷವೇ ತಾಯಿ ಎನ್ನುತ್ತಿದ್ದ ಈಶ್ವರಪ್ಪ ಅವರು ಅನಿವಾರ್ಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದಾರೆ. ಈ ನಡುವೆ ಈಶ್ವರಪ್ಪ ಅವರಿಗೆ ಚುನಾವಣೆ ಚಿಹ್ನೆ ಕಬ್ಬಿನ ಜೊತೆಗಿನ ರೈತ ಸಿಕ್ಕಿದೆ.

ಇನ್ನು ನಾಮಪತ್ರ ವಾಪಸ್ ಪಡೆಯುತ್ತೇನೆ ಎನ್ನುವರಿಗೆ ಈಶ್ವರಪ್ಪ ತಮ್ಮ ಧಾಟಿಯಲ್ಲೇ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಶುದ್ಧೀಕರಣ ಮತ್ತು ಕುಟುಂಬ ರಾಜಕಾರಣದ ವಿರುದ್ಧ ಈಶ್ವರಪ್ಪ ಈಗ ತಿರುಗಿಬಿದ್ದಿದ್ದಾರೆ. ಬಿಎಸ್​ವೈ ಪುತ್ರ ರಾಘವೇಂದ್ರನ ಸೋಲಿಸಲು ಈಶ್ವರಪ್ಪ ಪಣ ತೊಟ್ಟಿದ್ದಾರೆ. ಅತ್ತ ಮತ್ತೊಬ್ಬ ಪುತ್ರ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಈಶ್ವರಪ್ಪ ಗುಡುಗಿದ್ದು, ರಾಜ್ಯಾಧ್ಯಕ್ಷ ಕುರ್ಚಿಯನ್ನ ಚುನಾವಣೆ ಬಳಿಕ ವಿಜಯೇಂದ್ರ ಕಳೆದುಕೊಳ್ಳಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈಶ್ವರಪ್ಪ ಪಕ್ಷೇತರ ಅಭ್ಯರ್ಥಿ ಆಗಿ ನಿಲ್ಲಲು ಬಿಎಸ್​ವೈ ಕುಟುಂಬ ಕಾರಣ ಎನ್ನುವ ಸಿಟ್ಟು ದಿನೇ ದಿನೇ ಈಶ್ವರಪ್ಪರನ್ನ ಕೆರಳಿಸುತ್ತಿದೆ. ನಾನೇ ಓರಿಜನಲ್ ಬಿಜೆಪಿ, ಬಿಎಸ್​ವೈ ಡುಪ್ಲೀಕೇಟ್ ಬಿಜೆಪಿ ಎಂದು ಈಶ್ವರಪ್ಪ ವ್ಯಂಗ್ಯ ಮಾಡಿದ್ದಾರೆ. ಕೆಜೆಪಿ ಕಟ್ಟಿ ಯಡಿಯೂರಪ್ಪ ಅವರು ಪಕ್ಷ ಬಿಟ್ಟು ಹೋಗಿದ್ದರು. ಟಿಪ್ಪು ಜಯಂತಿ ಮಾಡಿ ಟೋಪಿ ಹಾಕಿಕೊಂಡಿದ್ದರು. ನಾನು ಪಕ್ಷ ಅಂದ್ರೆ ತಾಯಿ ಇದ್ದಂಗೆ. ಹಾಗಾಗಿ ಈ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆಂದು ಈಶ್ವರಪ್ಪ ವಿಶ್ವಾಸ ಹೊರಹಾಕಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್