Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರ ಆರಂಭ

ಬಳ್ಳಾರಿ,ಫೆ.05 -2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಕೇಂದ್ರ ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ ರೂ.5875 ರಂತೆ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ ಶಾಖೆ ಇವರ ಮೂಲಕ ರೈತರಿಂದ ಖರೀದಿಸಲು ನೋಂದಣಿ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
*ಖರೀದಿ ಕೇಂದ್ರಗಳ ವಿವರ:*
ಬಳ್ಳಾರಿ ನಗರದ ಮಾರುತಿ ನಗರದ 2ನೇ ಕ್ರಾಸ್ ನ ಎಸ್.ಪಿ ವೃತ್ತ ಹತ್ತಿರದ ರೈತರ ಸೇವಾ ಸಹಕಾರ ಸಂಘ ನಿಯಮಿತ (ಮೊ.9535380789) ಮತ್ತು ಸಿರುಗುಪ್ಪ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-1(ಮೊ.9845166601). ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಬೆಂಗಳೂರು, ಬಳ್ಳಾರಿ ಮೊ.9449664453.
*ಬೇಕಾದ ಅಗತ್ಯ ದಾಖಲೆ:*
2025-26ನೇ ಸಾಲಿನ ಪಹಣಿ ಪತ್ರ, ಆಧಾರ್ ಕಾರ್ಡ್ (ಮೂಲ), ಬ್ಯಾಂಕ್ ಖಾತೆ (ಆಧಾರ್ ಕಾರ್ಡ್ಗೆ ಜೋಡಣೆಗೊಂಡ) ಪುಸ್ತಕದ ನಕಲು ಪ್ರತಿ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿರಬೇಕು ಹಾಗೂ ಎಫ್‌ಐಡಿ ಪಡೆಯುವುದು ಕಡ್ಡಾಯ.
ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರು ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಲು ತಿಳಿಸಿದೆ.
ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ಜ.29 ರಿಂದ ರಿಂದ 80 ದಿನಗಳೊಳಗೆ ನೋಂದಣಿ ಮಾಡಿಸತಕ್ಕದ್ದು, ಹಾಗೂ ನೋಂದಣಿ ಚೀಟಿ ಪಡೆಯುವುದು. ಒಣಗಿದ ಹಾಗೂ ಸ್ವಚ್ಛ ಎಫ್.ಎ.ಕ್ಯೂ ಗುಣಮಟ್ಟದ ಕಡಲೆ ಉತ್ಪನ್ನವನ್ನು ಮಾರಾಟಕ್ಕಾಗಿ ಖರೀದಿ ಕೇಂದ್ರಕ್ಕೆ ತರುವುದು.
ನಿಗಧಿತ ಅವಧಿಯೊಳಗೆ ನೋಂದಣಿಗೊAಡ ರೈತರಿಂದ ಪ್ರತಿ ಎಕರೆಗೆ 04 (ನಾಲ್ಕು) ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಪ್ರಮಾಣದಷ್ಟು ಕಡಲೆಕಾಳು ಉತ್ಪನ್ನವನ್ನು 90 ದಿನಗಳವರೆಗೆ ಖರೀದಿಸಲಾಗುವುದು. ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಖರೀದಿಸಲಾಗುವುದು.
ಜಿಲ್ಲೆಯ ರೈತರು ಬೆಂಬಲಬೆಲೆ ಯೋಜನೆಯನ್ನು ಸದುಪಯೋಗಪಡೆದುಕೊಳ್ಳಲು ಕೋರಿದೆ. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಸದುಪಯೋಗವನ್ನು ರೈತರೇ ನೇರವಾಗಿ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ