Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿ ಮನೆಯಲ್ಲೂ ಇರಲಿ ಪುಸ್ತಕ ಕೋಣೆ– ಡಾ. ಮಾನಸ


ಕೊಪ್ಪಳ ಜೂನ್ 03: ನಗರದ ಎನ್.ಜಿ.ಓ ಕಾಲೋನಿಯಲ್ಲಿನ ಅಪ್ಪಾಜಿ ನಿಲಯದ ನಾಗರಾಜ ನಾಯಕ ಡಿ. ಡೊಳ್ಳಿನ ಅವರ ಮನೆಯಲ್ಲಿ ಮನೆಗೊಂದು ಗ್ರಂಥಾಲಯ ಉದ್ಘಾಟಿಸಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ. ಮಾನಸ ಅವರು, ಪ್ರತಿ ಮನೆಯಲ್ಲೂ ಇರಲಿ ಪುಸ್ತಕ ಕೋಣೆ ಎಂದರು.
ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಮನೆಗೊಂದು ಗ್ರಂಥಾಲಯ ಗ್ರಂಥಾಲಯ ಅನುಷ್ಠಾನ ಸಮಾರಂಭದಲ್ಲಿ ನಾಗರಾಜ ನಾಯಕ ಡಿ. ಡೊಳ್ಳಿನ ಅವರ ಮನೆಯಲ್ಲಿ ಏರ್ಪಡಿಸಲಾಗಿದ್ದ ಪುಸ್ತಕ ಪ್ರದರ್ಶನಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಡಾ.ಮಾನಸ ಅವರು, ನಮ್ಮೆಲ್ಲರ ಮನೆಯಲ್ಲಿ ಭಕ್ತಿಗಾಗಿ ದೇವರ ಕೋಣೆ ಇರುವಂತೆ, ಪುಸ್ತಕಕ್ಕೂ ಮೀಸಲು ಜಾಗ ಇರಲಿ. ಪುಸ್ತಕ ಕೋಣೆ ಇರಲಿ. ಇದು ಭಾರತ ಭಾಗ್ಯವಿಧಾತ ಡಾ.ಬಿ.ಆರ್. ಅಂಬೇಡ್ಕರ್ ಅವರ ಕನಸು. ಓದು ಮನುಷ್ಯನನ್ನು ಪ್ರಜ್ಞಾವಂತನನ್ನಾಗಿಸುತ್ತದೆ. ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಓದು ತುಂಬಾ ಸಹಕಾರಿಯಾಗಲಿದೆ. ಇಂದಿನ ಒತ್ತಡದ ಬದುಕಿನಲ್ಲಿ ಓದು ಮಾತ್ರ ನಮ್ಮನ್ನು ಶಾಂತವಾಗಿರುವAತೆ ಮಾಡುತ್ತದೆ. ಪುಸ್ತಕಗಳು ಉತ್ತಮ ಸ್ನೇಹಿತರಿದ್ದಂತೆ ಓದು ಮತ್ತು ಲೇಖಕ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ವರೆಗೂ ಲೇಖಕನಿಗೆ ಸಿಕ್ಕ ಗೌರವ ಓದುಗನಿಗೆ ಸಿಗುತ್ತಿರಲಿಲ್ಲ. ಇದನ್ನರಿತು ಕನ್ನಡ ಪುಸ್ತಕ ಪ್ರಾಧಿಕಾರ ಓಗುಗ ಪ್ರತಿ ಮನೆಯಲ್ಲೂ ಇರಲಿ ಎನ್ನುವ ಆಶಯದೊಂದಿಗೆ ಈ ಮನೆಗೊಂದು ಗ್ರಂಥಾಲಯ ಅನುಷ್ಠಾನ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಶಿಕ್ಷಕರಾದ ಶಿವಮ್ಮ, ಉಪನ್ಯಾಸಕರಾದ ನಿಂಗಪ್ಪ ಕಂಬಳಿ, ಮುಖ್ಯೋಪಾಧ್ಯಯರಾದ ವಿಕಯಲಕ್ಷ್ಮೀ ಕೆ.ಎಂ., ಮಾರುತಿ ಕಟ್ಟಿಮನಿ, ಗೆಳೆಯರ ಬಳಗ ಗುಡಿಗ್ರಂಥಾಲಯ ನಿರ್ಮಾಣ ಮಾಡಿದ್ದಕ್ಕಾಗಿ ಈ ಐವರ ಮನೆಗೆ ತೆರಳಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಗೌರವಿಸಿ ಸನ್ಮಾನಿಸಲಾಯಿತು.  
ಈ ಸಂದರ್ಭದಲ್ಲಿ ಜಿಲ್ಲಾ ಗ್ರಂಥಾಲಯ ಜಾಗೃತಿ ಸಮಿತಿ ಸಂಚಾಲಕ ಜಿ.ಎಸ್.ಗೋನಾಳ, ಜಿಲ್ಲಾ ಗ್ರಂಥಾಲಯ ಜಾಗೃತಿ ಸಮಿತಿ ಸದಸ್ಯರಾದ ಸಾವಿತ್ರಿ ಮುಜುಂದಾರ, ಫಕೀರಪ್ಪ ವಜ್ರಬಂಡಿ, ನಿವೃತ್ತ ಉಪನ್ಯಾಸಕರಾದ ಎಸ್.ಎ ರಜಪೂತ, ಉಪಪ್ರಾಂಶುಪಾಲರಾದ ಮಂಜುನಾಥ ಚಿತ್ರಗಾರ ಸೇರಿದಂತೆ ಮತ್ತಿತರರು ಹಾಜರಿದ್ದರು.  
****

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*