Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಂದು ಜೀವ ಸಂಕುಲ ಪರಿಸರವನ್ನು ಅವಲಂಬಿಸಿದೆ : ಜೈವರ್ಧನ

ಹುನಗುಂದ; ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವ? ಜೂನ್ ೫ರಂದು ’ವಿಶ್ವ ಪರಿಸರ’ ದಿನವನ್ನು ಆಚರಿಸಲಾಗುತ್ತಿದೆ.ಇದು ಹಸಿರನ್ನು ಉಳಿಸಿ, ಬೆಳೆಸುವ ಮೂಲಕ ಹೆಚ್ಚು ಸಮರ್ಥನೀಯ ಭವಿ?ವನ್ನು ಸೃಷ್ಟಿಸುವ ಗುರಿ ಹೊಂದಿದೆ. ಈ ಮಹತ್ವದ ದಿನದಂದು ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪರಿಸರ ರಕ್ಷಣೆಗೆ ಉತ್ತೇಜನ ನೀಡಲು ದೃಢವಾದ ಮತ್ತೊಂದು ಹೆಜ್ಜೆಗೆ ಸಿದ್ದರಾಗೋಣ ಎಂದು ವಲಯ ಅರಣ್ಯಾಧಿಕಾರಿ ಜೈವರ್ಧನ ತಳವಾರ ಹೇಳಿದರು. 

ಇಲ್ಲಿನ ವಲಯ ಅರಣ್ಯಾಧಿಕಾರಿಗಳ ಕಚೆರಿ ಮತ್ತು ಕಾನೂನು ಅಅರಿವು ನೆರವು ಹಾಗೂ ವಕೀಲರ ಸಂಘ ಸಹಯೋಗದಲ್ಲಿ ನಡೆಸಿದ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಸಸಿ ನೆಟ್ಟು ನೀರುಣಿಸಿ ಅವರು ಮಾತನಾಡುತ್ತ ವನ್ಯ ಜೀವಿಗಳ ಪೋ?ಣೆಯಲ್ಲಿ ಪರಿಸರವೂ ಅತಿ ಮುಖ್ಯ ಪಾತ್ರ ವಹಿಸುತ್ತಿದೆ. ಹೀಗಾಗಿಯೇ ಈ ದಿನಕ್ಕೆ ಹೆಚ್ಚು ಪ್ರಾಮುಖ್ಯತೆ ಇರುತ್ತದೆ ಎಂಬುದನ್ನು ನಾವಿಂದು ಮನಗಾಣಬೇಕಾಗಿದೆ. ಮಾನವ ಸೇರಿದಂತೆ ಇತರ ಪ್ರಾಣಿ, ಪಕ್ಷಿಗಳೂ ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ ,ನೀರು ಮತ್ತು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನು ಅವಲಂಬಿಸಿದ್ದೇವೆ.ಆದರೆ ಅದರ ಜತೆಗೆ ಇತ್ತಿಚಿನ ದಿನಗಳಲ್ಲಿ ಮಾನವನು ತನ್ನ ಅನುಕೂಲತೆಗಳಿಗಾಗಿ ಪರಿಸರವನ್ನು ಹಾಳು ಮಾಡುತ್ತಿದ್ದಾನೆ ಎಂಬುದನ್ನು ನಾವು ನಿತ್ಯ ನೋಡುತ್ತೇವೆ ಎಂದು ತಳವಾರ ತಿಳಿಸಿದರು. 

ನ್ಯಾಯವಾದಿ ಉಮಾ ಬಳ್ಳೋಳ್ಳಿ ಮಾತನಾಡುತ್ತ ಮಣ್ಣು, ಗಾಳಿ ,ನೀರು ಸೇರಿದಂತೆ ಎಲ್ಲವೂ ಕಲುಷಿತಗೊಂಡು ಇಡೀ ಪರಿಸರವೇ ಹಾಳಾಗುತ್ತದೆ. ಇದರಿಂದಾಗಿಯೇ ಹವಾಮಾನ ವೈಪರಿತ್ಯ, ಆರೋಗ್ಯ ಸಮಸ್ಯೆಗಳು ಹೆಚ್ಚಿ ಜನಜೀವನ ದುಸ್ತರವಾಗಿ ಮನು ಕುಲದ ಸರ್ವನಾಶಕ್ಕೆ ನಾವೇ ಕಾರಣರಾಗಿದ್ದೇವೆ. ಹೀಗಾಗಿ ಪರಿಸರ ಉಳಿಸುವಂತೆ ಜನರಿಗೆ ತಿಳಿಸಿ ಹೇಳುವುದರ ಮೂಲಕ ಅದರ ಉಳಿವಿಗೂ ಸಂಕಲ್ಪ ಮಾಡುವುದು ಇಂದಿನ ಕರ್ತವ್ಯವಾಗಿದೆ. ಆ ದಿಸೆಯಲ್ಲಿ ನಾವೆಲ್ಲರೂ ಕಾಡು ಬೆಳೆಸಿ ನಾಡು ಉಳಿಸಲು ಮುಂದೆ ಸಾಗೋಣ ಎಂದರು. ಉಪ ವಲಯ ಅರಣ್ಯಾಧಿಕಾರ ಎಸ್.ಎನ್. ಕಂಬಿಮಠ, ವಿಜಯಕುಮಾರ ನಾಯಕ, ಜಗಧೀಶ ಚಿಂಚೋಳ್ಳಿ, ಗಿರೀಶ ಮೆಕ್ಕೇದ, ಅರಣ್ಯ ವೀಕ್ಷಕ ಯಲ್ಲಪ್ಪ ಅಂಬಿಗೇರ ಮತ್ತು ಸಿಬ್ಬಂದಿ, ಶ್ರೀಮತಿ ದೀಪಾ, ದೇವರಾಜ ಅರಸು ವಸತಿ ನಿಲಯದ ವಿಧ್ಯಾರ್ಥಿನಿಯರು ಇದ್ದರು.

Advertisement

೫;ಎಚ್‌ಎನ್‌ಡಿ;೧; ಹುನಗುಂದ ವಲಯ ಅರಣ್ಯ ಇಲಾಖೆ ಮತ್ತು ಕಾನೂನು ಅರಿವುನೆರವು ಮತ್ತು ವಕೀಲರ ಸಂಘದ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಜೈವರ್ಧನ ತಳವಾರ ಸಸಿ ನೆಟ್ಟು ನೀರುಣಿಸಿದರು.  

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಂದು ಜೀವ ಸಂಕುಲ ಪರಿಸರವನ್ನು ಅವಲಂಬಿಸಿದೆ : ಜೈವರ್ಧನ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮಾತಂಗಿ ಸಮಾಜದಿಂದ ವಿಶೇಷ ಪೂಜೆ, ಸರ್ಕಾರಕ್ಕೆ ಮನವಿಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಅರಣ್ಯ ನಾಶದಿಂದ ಪ್ರಕೃತಿಯ ಸಮತೋಲನ ಹಾಳಾಗುತ್ತಿದೆ : ಶ್ರೀಶೈಲ ಗುಡಮೆ ಪ್ರಕಾಶ ಕೆಳಗೇರಿ ವೇಯ್ಟ ಲಿಫ್ಟಿoಗ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ. ವಿಶ್ವ ಪರಿಸರ ದಿನಾಚರಣೆ: ಬಳ್ಳಾರಿಯಲ್ಲಿ 5,000 ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಚಾಲನೆಪ್ಲಾಸ್ಟಿಕ ಮುಕ್ತ ಜೀವನ ಶೈಲಿ ಅಲವಡಿಸಕೊಳ್ಳಿ: ಸದಾಶಿವ ಮಕ್ಕೋಜಿವಿಕ್ರಮಪೂರ ಶಾಲೆಯಲ್ಲಿ ಸಡಗರದ ವಿಶ್ವ ಪರಿಸರ ದಿನಾಚರಣೆ:*ಡಿಸಿಎಂ ಸ್ಥಾನಕ್ಕಾಗಿ ಮಸೀದಿ ದರ್ಗಾದಲ್ಲಿ ಪ್ರಾರ್ಥನೆ; ಕಾಂಗ್ರೆಸ್ ಹೈಕಮಾಂಡ್‌ಗೆ ಮುಸ್ಲಿಂ ಸಮುದಾಯದ ಸಂದೇಶ*