Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕಂಕಣಬದ್ಧರಾಗಬೇಕು : ಮನಗೂಳಿ ಕರೆ

ಸಿಂದಗಿ:ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳಿಗೂ ಕನ್ನಡ ನಾಡು ನುಡಿಯ ಅಸ್ಮಿತೆಯ ಬಗ್ಗೆ ಅಪಾರ ಗೌರವವಿದ್ದು, ಸಮ್ಮೇಳನ ಸಮಯದಲ್ಲಿ ಅದನ್ನು ಅವರು ಸಾದರಪಡಿಸಬೇಕು. ಅಲ್ಲದೆ ಸಕ್ರಿಯವಾಗಿ ಪಾಲ್ಗೊಂಡು ಕೆಲಸ ಕಾರ್ಯಗಳಲ್ಲಿ ಕೈಜೋಡಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಕರೆ ನೀಡಿದರು.
ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ೨೧ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸುದೀರ್ಘ ೧೪ವ?ಗಳ ಅವಧಿಯ ನಂತರ ಸಿಂದಗಿ ತಾಲೂಕಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಭಾಗ್ಯ ಒದಗಿ ಬಂದಿದ್ದು, ಸಮ್ಮೇಳನದ ಯಶಸ್ಸಿಗೆ ಎಲ್ಲ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು, ಮಹಿಳೆಯರು, ಹಿರಿಯ ಮತ್ತು ಕಿರಿಯ ಕವಿಗಳು, ಸಾಹಿತ್ಯಾಸಕ್ತರು ಮತ್ತು ಮಕ್ಕಳು ಕಂಕಣಬದ್ಧರಾಗಬೇಕು. ಸಮ್ಮೇಳನವನ್ನು ಏಪ್ರಿಲ್ ಪ್ರಥಮ ವಾರದಲ್ಲಿ ಹಮ್ಮಿಕೊಳ್ಳಲು ನಿಶ್ಚಯಿಸಲಾಗಿತ್ತು. ಆದರೆ ಪ್ರಥಮ ವಾರದಲ್ಲಿ ಪರೀಕ್ಷೆಗಳು ಹಾಗೂ ಮೌಲ್ಯಮಾಪನ, ದ್ವಿತೀಯ ವಾರದಲ್ಲಿ ಅಂಬೇಡ್ಕರ್ ಜಯಂತಿ, ಮೂರನೇ ವಾರದಲ್ಲಿ ಬಸವ ಜಯಂತಿಯ ಕಾರ್ಯಕ್ರಮಗಳು ಇರುವುದರಿಂದ ಏಪ್ರಿಲ್ ಕೊನೆಯ ವಾರ ೨೭ ಮತ್ತು ೨೮ರಂದು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದ್ದು ಅಧಿಕೃತ ದಿನಾಂಕವನ್ನು ಮುಂದಿನ ಸಭೆಯಲ್ಲಿ ತಿಳಿಸಲಾಗುವುದು. ಸಮ್ಮೇಳನದಲ್ಲಿ ಸರ್ವಾಧ್ಯಕ್ಷರ ಮೆರವಣಿಗೆ, ಕುಂಭಮೇಳ, ಬುತ್ತಿ ಜಾತ್ರೆ, ವಿವಿಧ ಕಲಾತಂಡಗಳಿಂದ ಮೆರವಣಿಗೆ ಕಾರ್ಯಕ್ರಮ ಇರುತ್ತವೆ. ಇವೆಲ್ಲವುಗಳ ಜೊತೆಗೆ ಊಟೋಪಚಾರ, ವಸತಿ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿದಾಗ ಮಾತ್ರ ಸಮ್ಮೇಳನ ಯಶಸ್ವಿಯಾಗುತ್ತದೆ. ಸಿಂದಗಿ ನಗರದ ಕೀರ್ತಿ ನಾಡಿಗೆಲ್ಲ ಹಬ್ಬುವಂತೆ ಸಮ್ಮೇಳನದಲ್ಲಿ ಸಾಹಿತ್ಯಾಸಕ್ತರು, ಸಾರ್ವಜನಿಕರು, ಮಕ್ಕಳು, ಮಹಿಳೆಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ವೇಳೆ ಕನ್ನಡ ಸಾಹಿತ್ಯ ಪರಿ?ತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ, ತಾಲೂಕಾಧ್ಯಕ್ಷ ವಾಯ್.ಸಿ ಮಯೂರ್ ಮಾತನಾಡಿದರು.
ಕಾರ್ಯಕ್ರಮದ ವೇದಿಕೆಯ ಮೇಲೆ ಸಿಂದಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ದೇವರ ಹಿಪ್ಪರಗಿ ತಾಲೂಕಾಧ್ಯಕ್ಷ, ಸಿದ್ದು ಮೇಲಿನಮನಿ, ಆಲಮೇಲ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಅಶೋಕ ಕೊಳಾರಿ, ತಾಲೂಕ ಪಂಚಾಯತ್ ಇಒ ರಾಮು ಅಗ್ನಿ ಇದ್ದರು. ಸಿಂದಗಿ ತಾಲೂಕ ಕನ್ನಡ ಸಾಹಿತ್ಯ ಪರಿ?ತ್ ಗೌರವ ಕಾರ್ಯದರ್ಶಿ ಆನಂದ್ ಶಾಬಾದಿ ಕಾರ್ಯಕ್ರಮ ನಿರ್ವಹಿಸಿದರು. ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ