Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರೂ ಒಂದು ಸಸಿ ನೆಟ್ಟು ಪೊಸಿಸಿ :ನ್ಯಾಯಾದೀಶ ಚವ್ಹಾಣ 

 

ಬೈಲಹೊಂಗಲ.ದೇಶದ ವಾಸಿಯಾದ ಪ್ರತಿಯೊಬ್ಬರು  ಒಂದೊಂದು ಸಸಿ ನೆಟ್ಟು ಮನೆಯ ಮಕ್ಕಳ ಹಾಗೆ ಪೊಸಿಸಿ ಬೆಳೆಸಿದರೆ ನಮ್ಮ ದೇಶದ ಪರಿಸರ ಉತ್ತಮವಾಗಿ ಬೆಳೆದು ಮಾನವನ ಅರೋಗ್ಯ ಉತ್ತಮವಾಗಿರಲು ಸಹಕಾರಿ ಆಗುತ್ತದೆ ಎಂದು ಬೈಲಹೊಂಗಲ ಸಿವಿಲ್ ನ್ಯಾಯಾದೀಶರಾದ ರವಿ  ಬಿ ಚವ್ಹಾಣ ಹೇಳಿದರು.
     ಅವರು ನಗರದ ಕೋರ್ಟ್ ಆವರಣದಲ್ಲಿ ಶುಕ್ರವಾರದಂದು ಬೈಲಹೊಂಗಲ ಕಾನೂನು ಸೇವಾ ಸಮಿತಿ, ಬೈಲಹೊಂಗಲ ವಕೀಲರ ಸಂಘ, ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಕೋರ್ಟ್ ಆವರಣದಲ್ಲಿ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
    ನೇಸರಗಿ ವಲಯ ಅರಣ್ಯಾಧಿಕಾರಿಗಳಾದ  ಪ್ರಸನ್ನ ಬೆಲ್ಲದ ಮಾತನಾಡಿ ಅರಣ್ಯ ರಕ್ಷಣೆ ಮತ್ತು ಪರಿಸರ ರಕ್ಷಣೆಗೆ ಎಲ್ಲ ಕಡೆಗಳಲ್ಲಿ ಸಸಿ ನೆಡುವ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಕಷ್ಟು ಸಹಕಾರ ನೀಡುತ್ತಿದ್ದು ಇದರ ಸದುಪಯೋಗ ಸಾರ್ವಜನಿಕರು ಉಚಿತ  ಸಸಿಗಳನ್ನು  ಪಡೆದು ನೆಟ್ಟು ಪೊಸಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಪ್ರಧಾನ ದಿವಾಣಿ ನ್ಯಾಯಾದೀಶ ಶ್ರೀಮತಿ ರೋಹಿಣಿ ಬಸಾಪುರ, ಸರ್ಕಾರಿ ಅಭಿಯೋಜಕರಾದ ಕುಮಾರಿ ಸರೋಜಿನಿ ಬಟಕುರ್ಕಿನ್ಯಾಯವಾದಿಗಳ ಸಂಘದ ಅಧ್ಯಕ್ಷ ಸಿ ಎಚ್ ಹೊಸಮನಿ, ಸರ್ಕಾರಿ ವಕೀಲ ರಮೇಶ ಕೊಲಕಾರ, ಸರ್ಕಾರಿ ಅಭಿಯೋಜಕ ಗುರುನಾಥ ಶಿರೂರ, ಉಪನ್ಯಾಸಕ ವೀರೇಶ ಅಂಡೋಲಿ, ಉಪ ಅರಣ್ಯ ಅಧಿಕಾರಿ ಸುರೇಶ ನಾಯ್ಕ, ಎನ್ ಎನ್ ಬಡವಣ್ಣವರ, ಶ್ರೀಮತಿ ಬಿ ಬಿ ದಳವಾಯಿ, ಶ್ರೀಮತಿ ಜೆ ಎಸ್ ಕುಲಕರ್ಣಿ, ಅಶೋಕ ಬಿಜಗತ್ತಿ,  ನ್ಯಾಯವಾದಿಗಳ ಸಂಘದ ಸದಸ್ಯರು, ನ್ಯಾಯಾಲಯದ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
  ಇದೆ ಸಂದರ್ಭದಲ್ಲಿ ನೇಸರಗಿ ಕುವೆಂಪು ಮಾದರಿ ಪ್ರಾಥಮಿಕ ಶಾಲೆ, ಮಲ್ಲಾಪುರ ಕೆ ಎನ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ದೇಶನೂರ ಪ್ರಾಥಮಿಕ ಶಾಲೆಗಳಲ್ಲಿ ಸಸಿ ನೆಟ್ಟು, ಅನೇಕ ತರಹದ ಸಸಿಗಳನ್ನು ವಿದ್ಯಾರ್ಥಿಗಳಿಗೆ ನೀಡುವದರ ಮುಖಾಂತರ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ನೇಸರಗಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷ, ಸದಸ್ಯರು, ವಿದ್ಯಾರ್ಥಿಗಳು, ನೇಸರಗಿ ಭಾಗದ ಮುಖಂಡರು ಭಾಗವಹಿಸಿದ್ದರು.
  

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೋಯಾಲುಕ್ಕಾಸ್ ಫೌಂಡೇಶನ್‌ನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಕಿಟ್ ವಿತರಣೆಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್‌ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆಅಹಿಂದ ಕೇವಲ ರಾಜಕೀಯ ಘೋಷಣೆಯಾಗಬಾರದು; ಅದು ಸಮಾಜ ಪರಿವರ್ತನೆಯ ಮಹಾ ಚಳವಳಿಯಾಗಬೇಕು – ಹೊನ್ನುರಸ್ವಾಮಿ ಕೆ.ಟಿಸರಕಾರಿ‌ ಪದವಿ ಮಹಾವಿದ್ಯಾಲಯಕ್ಕೆ ಮಂಜೂರಗಾಗಿ ಕರವೇ ಆಗ್ರಹಇಂದು ನೆಟ್ಟ ಸಸಿ ನಾಳೆ ಮರವಾಗಿಸುವುದೇ ಪರಿಸರ ದಿನಾಚರಣೆಪ್ರತಿಯೊಬ್ಬರೂ ಒಂದು ಸಸಿ ನೆಟ್ಟು ಪೊಸಿಸಿ :ನ್ಯಾಯಾದೀಶ ಚವ್ಹಾಣ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ: "ನಮ್ಮ ಭೂಮಿ ನಮ್ಮ ಜವಾಬ್ದಾರಿ"ವಿಶ್ವ ಪರಿಸರ ದಿನಾಚರಣೆಪರಿಸರ ಸಂರಕ್ಷಣೆ ಮಾಡುವುದು ನಮ್ಮ ಭವಿಷ್ಯದ ಸಂರಕ್ಷಣೆ : ಡಾ|| ಮಲ್ಲಿಕಾರ್ಜುನ ಮಹಾಸ್ವಾಮೀಜಿನಿತ್ಯವೂ ಪರಿಸರ   ದಿನವಾಗಲಿ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು