Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲಕ್ಕುಂಡಿಯಲ್ಲಿ ಉತ್ಖನನ ಆರಂಭ



ಉತ್ಖನನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್*

ಪುರಾತತ್ವ ಇಲಾಖೆಯ ನಿವೃತ್ತ ಅಧೀಕ್ಷಕ ಹಾಗೂ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ ನೇತೃತ್ವ

ಗದಗ: ತಾಲೂಕಿನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರು ಶುಕ್ರವಾರ ಉತ್ಖನನಕ್ಕೆ ಚಾಲನೆ ನೀಡಿದರು.

ಪುರಾತತ್ವ ಇಲಾಖೆಯ ನಿವೃತ್ತ ಅಧೀಕ್ಷಕ ಹಾಗೂ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ ಅವರ ನೇತೃತ್ವದಲ್ಲಿ ಉತ್ಖನನ ಆರಂಭವಾಗಿದ್ದು, ಉತ್ಖನನ ಕುರಿತು ಪುರಾತತ್ವ ಅಧಿಕಾರಿಗಳು ಕಾರ್ಮಿಕರಿಗೆ ಮಾಹಿತಿ ನೀಡಿದರು.

20 ಜನ ಮಹಿಳೆಯರು, 10 ಜನ ಪುರುಷರು ಸೇರಿ ಒಟ್ಟು 30 ಕಾರ್ಮಿಕರಿಂದ ಉತ್ಖನನ ಕಾರ್ಯ ಮುಂದುವರಿದಿದ್ದು, ಪುರಾತತ್ವ ಇಲಾಖೆ ಅಧಿಕಾರಿಗಳು ಪ್ರಾಚೀನ ವಸ್ತುಗಳ ಬಗೆಗೆ ಉತ್ಖನನ ಮಾಡುವ ಬಗ್ಗೆ ಕಾರ್ಮಿಕರಿಗೆ ಮಾಹಿತಿ ನೀಡಿ, ನಾಜೂಕಿನಿಂದ ಉತ್ಖನನ ಪ್ರಕ್ರಿಯೆ ನಡೆಸಬೇಕು. ಅಲ್ಲದೇ, ಯಾವುದೇ ವಸ್ತು ಸಿಕ್ಕರೂ ಅದನ್ನು ಅಧಿಕಾರಿಗಳಿಗೆ ತಿಳಿಸಬೇಕು. ಭೂಮಿ ಅಗೆಯುವಾಗ ಸೂಕ್ಷ್ಮತೆ ಇರಲಿ ಎಂದು ಸೂಚನೆ ನೀಡಿದರು.

ಶುಕ್ರವಾರ ಬೆಳಿಗ್ಗೆ 11ರಿಂದ ಆರಂಭವಾದ ಉತ್ಖನನವು ಸಂಜೆ 5.30ರ ವರೆಗೆ ನಡೆದಿದ್ದು, ದಿನದ ಅಂತ್ಯಕ್ಕೆ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ 10/10 ಅಡಿಯ ಸುತ್ತಳತೆಯಲ್ಲಿ ನಡೆದ ಉತ್ಖನನದಲ್ಲಿ ಶುಕ್ರವಾರ ಕೇವಲ 1 ಅಡಿ ಆಳದಷ್ಟು ಮಾತ್ರ ಮಣ್ಣು ಅಗೆಯಲಾಗಿದ್ದು, ಇನ್ನೂ ಸುಮಾರು 7 ರಿಂದ 8 ಅಡಿ ಆಳ ಅಗೆದರೆ ಏನಾದರೂ ಅವಶೇಷಗಳು, ಆಭರಣ, ವಸ್ತುಗಳು ಸಿಗಬಹುದು ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಪುರಾತತ್ವ ಇಲಾಖೆ, ಜಿಲ್ಲಾಡಳಿತ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೇತೃತ್ವದಲ್ಲಿ ನಡೆಯುತ್ತಿರುವ ಉತ್ಖನನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಪುರಾತತ್ವ ಇಲಾಖೆಯ ನಿವೃತ್ತ ಅಧೀಕ್ಷಕ ಹಾಗೂ ಉತ್ಖನನದ ನಿರ್ದೇಶಕ ಟಿ.ಎಂ. ಕೇಶವ ಅವರ ನೇತೃತ್ವದಲ್ಲಿ ಉತ್ಖನನ ಆರಂಭವಾಗಿದೆ. ನಿಧಿ ಸಿಕ್ಕಿರುವ ಬೆನ್ನಲ್ಲೆ ಉತ್ಖನನ ನಡೆಯುತ್ತಿರುವುದು ಕಾಕತಾಳೀಯ. ಸರ್ಕಾರ ಪೂರ್ವ ನಿಗದಿಯಂತೆ ಉತ್ಖನನ ಕಾರ್ಯ ಮಾಡುತ್ತಿದ್ದು, ಭೂಮಿಯ ಒಡಲಿನಲ್ಲಿ ಏನಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ದೇವಸ್ಥಾನದ ಕುರುಹು ಇರುವ ಬಗ್ಗೆ ಪುರಾತತ್ವ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅದರಂತೆ ಉತ್ಖನನಕ್ಕೆ ಚಾಲನೆ ಸಿಕ್ಕಿದೆ. ಉತ್ಖನನ ಏನು ಸಿಗುತ್ತದೆ ಎಂದು ಕಾಯ್ದು ನೋಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ, ಪ್ರಾಧಿಕಾರದ ರಾಜ್ಯ ಸಮಿತಿ ಸದಸ್ಯ ಸಿದ್ದು ಪಾಟೀಲ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಗ್ರಾಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಪಿಡಿಒ ಅಮೀರ ನಾಯ್ಕ ಸೇರಿ ಹಲವರಿದ್ದರು.

ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನಕ್ಕೂ ಮುನ್ನ ಉತ್ಖನನದ ಜಾಗೆ ಹಾಗೂ ಉತ್ಖನನಕ್ಕೆ ಬೇಕಾಗುವ ಸಲಕರಣಗೆಳಿಗೆ ಪೂಜೆ ಸಲ್ಲಿಸಲಾಯಿತು. ನಂತರ 20 ಜನ ಮಹಿಳೆಯರು, 10 ಜನ ಪುರುಷರು ಸೇರಿ ಒಟ್ಟು 30 ಕಾರ್ಮಿಕರಿಂದ ಉತ್ಖನನ ಪ್ರಕ್ರಿಯೆ ಆರಂಭವಾಯಿತು.




ಗ್ರಾಮದ ಸ್ಥಳಾಂತರ ಉತ್ಖನನದಲ್ಲಿ ಸಿಗುವ ಕುರುಹುಗಳ ಮೇಲೆ ನಿರ್ಧಾರವಾಗುತ್ತದೆ. ಉತ್ಖನನದಲ್ಲೆ ಅಂಥದ್ದೇನಾದ್ರೂ ಕಂಡು ಬಂದಲ್ಲಿ ಸ್ಥಳಾಂತರ ಮಾಡುತ್ತೇವೆ. ಗ್ರಾಮದ ಜನರಿಗೆ ಸಂಪೂರ್ಣ ಸಹಕಾರದಿಂದ ಉತ್ಖನನ ನಡೆಯುತ್ತಿದೆ. ಭೂತಾಯಿ ಒಡಲೋಳಗೆ ಏನು ಹುದುಗಿದೆಯೋ ನೋಡಬೇಕು.

-ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ