LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅಬಕಾರಿ ನೀತಿ ಹಗರಣ: ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನವದೆಹಲಿ,ಏಪ್ರಿಲ್ 18: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂದನಕ್ಕೀಡಾಗಿರುವ ದೆಹಲಿ ಮಾಜಿ ಸಚಿವ ಹಾಗೂ ಆಮ್ ಆದ್ಮಿ ಪಕ್ಷದ ಹಿರಿಯ ಮುಖಂಡ ಮನೀಷ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಲಾಗಿದೆ.

ದೆಹಲಿ ಅಬಕಾರಿ ನೀತಿಯಲ್ಲಿ  ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕೊಳ್ಳಪಟ್ಟಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 26 ರವರೆಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.

ಮನೀಶ್ ಸಿಸೋಡಿಯಾ ಪರ ವಾದ ಮಂಡಿಸಿದ ವಕೀಲ ಮೋಹಿತ್ ಮಾಥುರ್, 'ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ವಿಳಂಬವಾಗಿದೆ ಎಂದು ಹೇಳಿದರು. ಪ್ರಕರಣದಲ್ಲಿ ಮತ್ತೋರ್ವ ಆರೋಪಿ ಬೆನೊಯ್ ಬಾಬುಗೆ ಜಾಮೀನು ನೀಡಿರುವುದನ್ನು ಉಲ್ಲೇಖಿಸಿದ ಅವರು, ಸಿಸೋಡಿಯಾ ಕೂಡಾ ಪ್ರಭಾವಿ ಸ್ಥಾನದಲ್ಲಿಲ್ಲ. ಹೀಗಾಗಿ ಅವರಿಗೂ ಜಾಮೀನು ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇ.ಡಿ ಪರ ವಕೀಲರು, ಈ ಪ್ರಕರಣದಲ್ಲಿ ಪ್ರಮುಖ ಸಂಚುಕೋರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೊತೆಗೆ ಹಲವು ಎಎಪಿ ನಾಯಕರು ಮತ್ತು ಸಚಿವರು ಭಾಗಿಯಾಗಿದ್ದಾರೆ. ಪ್ರಕರಣದ ಪೂರ್ಣ ತನಿಖೆವರೆಗೂ ಜಾಮೀನು ನೀಡಬಾರದು ಎಂದು ವಾದಿಸಿದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್ ಏಪ್ರಿಲ್ 26ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಏಪ್ರಿಲ್ 26 ರಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆ ಮುಂದೂಡಿತು.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್