Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್​ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ದು ಯಾರು ಎನ್ನುವ ಸ್ಫೋಟಕ ಮಾಹಿತಿ ಬಹಿರಂಗ!

ಬೆಂಗಳೂರು, ಹಾಸನ,ಮೇ.02: ಸಂಸದ ಪ್ರಜ್ವಲ್ ರೇವಣ್ಣ  ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಪ್ರಕರಣ ದಾಖಲಾದ ಮೇಲೆ SIT ತನಿಖೆ ಚುರುಕುಗೊಳಿಸಿದೆ. ತನಿಖೆ ನಡೆಯುತ್ತಿರುವಾಗಲೇ ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋವನ್ನು ಮೊದಲು ಬಿಡುಗಡೆ ಮಾಡಿರುವುದು ಯಾರು ಎನ್ನುವುದೇ ನಿಗೂಢವಾಗಿತ್ತು. ಈ ಸಂಬಂಧ ಕುಮಾರಸ್ವಾಮಿ -ಡಿಕೆ ಶಿವಕುಮಾರ್ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿವೆ. ಇದರ ಮಧ್ಯೆ ಇದೀಗ ವಿಡಿಯೋ ರಿಲೀಸ್ ಮಾಡಿದ್ದವರು ಯಾರು ಎನ್ನುವ ಸ್ಫೋಟಕ ಮಾಹಿತಿ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ಅವರ ಬಳಿಕ ಕಾರು ಚಾಲಕನಾಗಿದ್ದ ಕಾರ್ತಿಕ್, ಮೊದಲು ವಿಡಿಯೋವನ್ನು ವಾಟ್ಸಪ್​ ಮೂಲಕ ಬೇರೊಬ್ಬರಿಗೆ ಕಳುಹಿಸಿದ್ದಾರೆ. ಆತ ಬೇರೆ ಯಾರೂ ಅಲ್ಲ ಕಾಂಗ್ರೆಸ್ ಕಾರ್ಯಕರ್ತ, ಸಚಿವ ಜಮೀರ್ ಅಹಮ್ಮದ್ ಖಾನ್ ಬೆಂಬಲಿಗ ಬೇಲೂರು ಮೂಲದ ನವೀನ್ ಗೌಡ ಅವರಿಗೆ ವಿಡಿಯೋ ಕಳುಹಿಸಿದ್ದಾರೆ ಎನ್ನುವುದು ಬಹಿರಂಗವಾಗಿದೆ.

ವಿಡಿಯೋ ಸಿಕ್ಕ ಬಳಿಕ ನವೀನ್ ಗೌಡ, ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್​ಬುಕ್​ನಲ್ಲಿ ಮೊದಲ ಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆ ಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದಾನೆ. ಇದೀಗ ನವೀನ್ ಗೌಡ ಎಂಬಾತನಿಗೆ ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಡಿಯೋ ಬಿಡುಗಡೆ ಮಾಡಿರುವ ಆರೋಪದ ಮೇಲೆ ನವೀನ್ ಗೌಡ ವಿರುದ್ಧ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಇದೀಗ ನವೀನ್ ಗೌಡನನ್ನ ಎಸ್‍ಐಟಿ ವಿಚಾರಣೆಗೆ ಕರೆದಿದೆ. ಮೇ.4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದು ಎಸ್‍ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ. ಈಗಾಗಲೇ ನವೀನ್ ಗೌಡ ಫೋನ್‍ನಲ್ಲಿ ಪ್ರಾಥಮಿಕ ಮಾಹಿತಿ ನೀಡಿದ್ದು, ಈ ವೇಳೆ ನಾನು ಪೆನ್‍ಡ್ರೈವ್ ಹಂಚಿಕೆ ಮಾಡಿಲ್ಲ ಎಂದು ಹೇಳಿದ್ದಾನೆ ಎಂದು ತಿಳಿದುಬಂದಿದೆ.

ಇತ್ತ ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಎಚ್​ಡಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣಗೂ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದ್ರೆ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇತ್ತ ಪ್ರಜ್ವಲ್ ರೇವಣ್ಣ ಅವರು ಸಮಯಾವಕಾಶ ಕೇಳಿ ತಮ್ಮ ವಕೀಲರ ಮೂಲಕ ಎಸ್‍ಐಟಿ ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಒಂದು ವಾರ ಸಮಯ ಕೊಡಿ ಎಸ್‍ಐಟಿ ಮುಂದೆ ಹಾಜರಾಗುತ್ತೇನೆ. ಆದಷ್ಟು ಬೇಗ ಸತ್ಯ ಹೊರಗೆ ಬರುತ್ತೆ ಎಂದು ತಮ್ಮ ಫೇಸ್‍ಬುಕ್‍ನಲ್ಲಿಯೂ ಬರೆದುಕೊಂಡಿದ್ದಾರೆ.

ಪ್ರಜ್ವಲ್ ಅವರದ್ದು ಎನ್ನಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ, ಇದನ್ನು ಯಾರು ಬಿಡುಗಡೆ ಮಾಡಿದ್ರು? ಹೇಗೆ ವೈರಲ್ ಆದವು? ಇದರ ಹಿಂದೆ ಯಾರು ಇದ್ದಾರೆ? ಅಂತೆಲ್ಲಾ ಚರ್ಚೆಗಳು ನಡೆಯುತ್ತಿದ್ದವು. ಇತ್ತ ಜೆಡಿಎಸ್​ ನಾಯಕರು ಕಾಂಗ್ರೆಸ್​ ಮೇಲೆ ಆರೋಪ ಮಾಡುತ್ತಿದ್ದರು. ಅದರಲ್ಲೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್​ ಅವರ ಕೈವಾಡವಿದೆ ಎಂದು ಖುದ್ದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಆದ್ರೆ, ಇದನ್ನು ಡಿಕೆ ಶಿವಕುಮಾರ್ ಅಲ್ಲಗೆಳೆದಿದ್ದು, ಇಂತಹ ನೀಚ ರಾಜಕಾರಣ ಮಾಡುವುದಿಲ್ಲ. ಕಾರ್ತಿಕ್ (ಪ್ರಜ್ವಲ್ ಕಾರು ಚಾಲಕ) ಕುಮಾರಸ್ವಾಮಿಗೆ ಪೆನ್​ಡ್ರೈವ್ ಕೊಟ್ಟಿದ್ದು, ಅವರೇ ಬಿಡುಗಡೆ ಮಾಡಿರಬಹುದು ಎಂದು ತಿರುಗೇಟು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಕುಮಾರಸ್ವಾಮಿ, ಡಿಕೆ ಸಹೋದರರ ವಿರುದ್ಧ ವಾಚಾಮಗೋಚರವಾಗಿ ಬೈದಿದ್ದರು. ಇದೀಗ ಅಂತಿಮವಾಗಿ ವಿಡಿಯೋ ಯಾರು ಮೊದಲು ಲೀಕ್ ಮಾಡಿದ್ದರು ಎನ್ನುವುದು ಬಹಿರಂಗವಾಗಿದ್ದು, ಮುಂದೆ ಈ ಪ್ರಕರಣ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ