LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ

ಬಾಂಗ್ಲಾದೇಶದಲ್ಲಿ ಉದ್ಭವಿಸಿರುವ ಅಶಾಂತಿ ಹಾಗೂ ಭಾರತಕ್ಕೆ ಬಂದು ಆಶ್ರಯ ಪಡೆದಿರುವ ಪ್ರಧಾನಿ ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ ಕರೆದಿದ್ದರು. ಶೇಖ್​ ಹಸೀನಾ ಮೊದಲು ಚೇತರಿಸಿಕೊಳ್ಳಲಿ ಒಂದೆಡೆ ನೆಲೆಯೂರಲಿ ಬಳಿಕ ಈ ವಿಚಾರದ ಕುರಿತು ಅವರ ಬಳಿ ಮಾತನಾಡೋಣ ಎಂದು ಜೈಶಂಕರ್ ಹೇಳಿದ್ದಾರೆ.

ಕೆಲವು ದೇವಾಲಯಗಳ ಮೇಲೆ ದಾಳಿಗಳು ನಡೆದಿರುವುದರಿಂದ ಸರ್ಕಾರವು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು. ಸರ್ಕಾರ ಕಾದು ನೋಡುವ ಕ್ರಮದಲ್ಲಿದೆ, ಆದರೆ ಬಾಂಗ್ಲಾದೇಶದ ಸೇನೆಯೊಂದಿಗೆ ಸಂಪರ್ಕದಲ್ಲಿದೆ. ಶೇಖ್ ಹಸೀನಾ ಭಾರತಕ್ಕೆ ಬಂದಿರುವ ವಿಚಾರವನ್ನು ವಿದೇಶಾಂಗ ವ್ಯಹಾರಗಳ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಬಾಂಗ್ಲಾದೇಶದಲ್ಲಿರುವ ರಾಯಭಾರಿ ಅಧಿಕಾರಿಗಳು ಮತ್ತು ಭಾರತೀಯ ಪ್ರಜೆಗಳ ಸುರಕ್ಷತೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಚಿವರು ಹೇಳಿದರು. ಆದರೆ, ಪರಿಸ್ಥಿತಿಯು ಸ್ಥಳಾಂತರಿಸುವಷ್ಟು ಕೆಟ್ಟದ್ದಲ್ಲ ಆದರೆ ಎಚ್ಚರಿಕೆಯನ್ನು ತೆಗೆದುಕೊಳ್ಳುವಷ್ಟು ಆತಂಕಕಾರಿಯಾಗಿದೆ ಎಂದು ಅವರು ಹೇಳಿದರು. ಬಾಂಗ್ಲಾದೇಶದಲ್ಲಿ ಕನಿಷ್ಠ 20 ಸಾವಿರ ಮಂದಿ ಭಾರತೀಯರಿದ್ದಾರೆ. ಅವರಲ್ಲಿ 8 ಸಾವಿರ ಮಂದಿ ಹಿಂದಿರುಗಿದ್ದಾರೆ.

ಉದ್ಯೋಗ ಕೋಟಾ ಮರುಜಾರಿ ಕುರಿತು ಪ್ರತಿಭಟನೆ ಶುರುವಾಗಿತ್ತು. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಉನ್ನತ ನ್ಯಾಯಾಲಯ ಈಗಾಗಲೇ ಹಿಂಪಡೆದಿದೆ. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು.

ಪೊಲೀಸರು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಡುವೆ ರಾಷ್ಟ್ರವ್ಯಾಪಿ ನಡೆದ ಘರ್ಷಣೆಯಲ್ಲಿ 151ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಲಭೆಯನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದಾಗ ಸೈನಿಕರು ಬಾಂಗ್ಲಾದೇಶದಾದ್ಯಂತ ನಗರಗಳಲ್ಲಿ ಗಸ್ತು ತಿರುಗಿದರು. ರಾಷ್ಟ್ರವ್ಯಾಪಿ ಇಂಟರ್ನೆಟ್ ಬಂದ್​ ಮಾಡಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್