Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತ್ರೆಗಳು ನಮ್ಮ ದೇಶೀಯ ವೈಭವವನ್ನು ಭಿತ್ತರಿಸುತ್ತಿವೆ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹಳೆಯ ಕಾಲದ ಹಿರಿಯರು, ಜನ ಹಾಗೂ ಜಾನುವಾರುಗಳಿಗೆ ರೋಗ, ರುಜೀಣುಗಳು ಬರದ ಹಾಗೇ ಗ್ರಾಮದ ತುಂಬೆಲ್ಲ ಭಂಡಾರ ರೂಪದ ಶುದ್ಧ ಅರಿಷಿಣ ಪುಡಿಯನ್ನು ಎರಚಿ ಜಾತ್ರೆಯನ್ನು ಮಾಡುವ ಪದ್ಧತಿಯನ್ನು ರೂಢಿಸಿಕೊಂಡು ಬಂದಿದ್ದಾರೆ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.
ಸೋಮವಾರ ತಾಲ್ಲೂಕಿನ ನಾಗನೂರು ಪಟ್ಟಣದಲ್ಲಿ ಜರುಗಿದ. ಅರಣ್ಯ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಜಾತ್ರೆಗಳು ನಮ್ಮ ದೇಶೀಯ ವೈಭವವನ್ನು ಭಿತ್ತರಿಸುತ್ತಿವೆ ಎಂದರು. ಹಿಂದಿನ ಕಾಲದಲ್ಲಿ ಪ್ಲೇಗ್, ಕಾಲರಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದವು. ಜಾನುವಾರುಗಳಿಗೆ ಕಾಲುಬೇನೆ, ಬಾಯಿ ಬೇನೆ ಬರುತ್ತಿದ್ದವು. ಇವುಗಳನ್ನು ಹೋಗಲಾಡಿಸಲು ಜನರು ದೇವರಿಗೆ ಮೊರೆ ಹೋಗುತ್ತಿದ್ದರು. ಎಲ್ಲಾ ಜಾತಿಯ ಜನರು ಒಟ್ಟಾಗಿ ಸೇರಿಕೊಂಡು ಗ್ರಾಮ ದೇವತೆಯರ ಜಾತ್ರೆಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದರು. ದೇವರಿಗೆ ನೈವೇದ್ಯ ಅರ್ಪಿಸಿ ಕೃಪೆಗೆ ಪಾತ್ರರಾಗುತ್ತಿದ್ದರು. ಹಿರಿಯರು ಹಾಕಿಕೊಟ್ಟ ಸಂಪ್ರದಾಯಗಳನ್ನು ಈಗಿನ ಪೀಳಿಗೆಯವರು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ನಮ್ಮ ದೇಶದ ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಹೇಳಿದರು. ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು ಜಾತ್ರಾ ಕಮಿಟಿಯ ಸದಸ್ಯರು ಸತ್ಕರಿಸಿದರು.
ಈ ಸಂದರ್ಭದಲ್ಲಿ ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಮುಖಂಡರಾದ ಚಂದ್ರು ಬೆಳಗಲಿ, ಸುಭಾಸ ಬೆಳಗಲಿ (ಪಡದಲ್ಲಿ), ಗಣಪತಿ ದೇಸಾರ, ರಮೇಶ ಬೆಟಗೇರಿ, ನಾಗಪ್ಪ ಬೆಳಕೂಡ, ಹಣಮಂತ ಕಿತ್ತೂರ, ಸಿದ್ದಪ್ಪ ಯಡ್ರಾವಿ, ಸಿದ್ದಪ್ಪ ಗುಡೆನ್ನವರ, ಸಿದ್ದಲಿಂಗ ವಾಳಕಿ, ಸದಾಶಿವ ಯಡ್ರಾವಿ, ಕೆಂಚಪ್ಪ ಗೊರೋಜಿ, ಸಿದ್ದಪ್ಪ ಗೊರೋಜಿ, ಯಲ್ಲಪ್ಪ ಪೂಜೇರಿ, ಸಿದ್ದಪ್ಪ ಯಡ್ರಾವಿ, ಶ್ರೀಶೈಲ ಕಿತ್ತೂರ ಮತ್ತಿತರರು ಉಪಸ್ಥಿತರಿದ್ದರು.

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ