ಆರೋಪಿ ವಿಜೇತ್, ಜಾರಿ ನಿರ್ದೇಶನಾಲಯ (ಇಡಿ) ಹಣ ಮುಟ್ಟುಗೋಲು ಹಾಕಿಕೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿದ್ದು ಎಂಬ ನಂಬಿಕೆ ಬರುವ ರೀತಿಯಲ್ಲಿ ಹೈಕೋರ್ಟ್ ಆದೇಶವನ್ನೇ ಹೋಲುವಂತೆ ನಕಲಿ ಆದೇಶ ಪ್ರತಿ ತಯಾರಿಸಿದ್ದ.
ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಲಯ ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಮುಟ್ಟುಗೋಲು ಹಾಕಿಕೊಂಡಿದೆ. ಆದರೆ, ಹೈಕೋರ್ಟ್ ಈ ತಮ್ಮ ಪರ ತೀರ್ಪು ನೀಡಿದ್ದು, ಸೀಜ್ ಮಾಡಿದ ಹಣವನ್ನು ಜಾರಿ ನಿರ್ದೇಶನಾಲಯ ನಮಗೆ ನೀಡಬೇಕಿದೆ. ಆ ಹಣವನ್ನು ಬಿಡಿಸಿಕೊಳ್ಳಲು ಸ್ವಲ್ಪ ಹಣ ಬೇಕಾಗಿದೆ. ಮೊತ್ತ ಕೈಸೇರಿದ ಕೂಡಲೇ ಹಿಂದಿರುಗಿಸುವುದಾಗಿ ಆರೋಪಿಗಳು ಜನರನ್ನು ವಂಚಿಸುತ್ತಿದ್ದರು. ಹೈಕೋರ್ಟ್ ಆದೇಶವನ್ನೇ ಹೋಲುವ ನಕಲಿ ಪ್ರತಿ ತಯಾರಿಸಿ ಜನರಲ್ಲಿ ನಂಬಿಕೆ ಬರುವಂತೆ ಮಾಡಿ ಹಣ ಪೀಕುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ.