ಆರೋಪಿಗಳು Www.Devaseva.com ಹೆಸರಿನಲ್ಲಿ ನಕಲಿ ವೆಬ್ಸೈಟ್ ತೆರೆದಿದ್ದು, ಅದರ ಮೂಲಕ ದೇಶದ ಮತ್ತು ರಾಜ್ಯದ ಪ್ರತಿಷ್ಠಿತ ದೇವಾಲಯಗಳ ಹೆಸರು ಬಳಸಿ ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ಹಣ ಪಡೆದು ಭಕ್ತರನ್ನು ವಂಚಿಸುತ್ತಿದ್ದರು.
ವಿಶೇಷ ಪೂಜೆ, ಪ್ರಸಾದ, ಸೇವೆಗಳ ಹೆಸರಿನಲ್ಲಿ ವಂಚನೆ ನಡೆಯುತ್ತಿರುವ ಬಗ್ಗೆ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ನಿರಂತರವಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ದೇವಾಲಯದ ಉಪವ್ಯವಸ್ಥಾಪಕ ರಾಘವೇಂದ್ರ ಅವರು ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮ್ಟೆ ವಿಶೇಷ ತಂಡ ರಚಿಸಿ ಆರೋಪಿಗಳ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.