Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಬೆಳೆ ಪರಿಹಾರಕ್ಕೆ ಸರ್ಕಾರಕ್ಕೆ ಅಗ್ರಹಿಸುತ್ತೇವೆ: ಆರ್ ಅಶೋಕ 

ರಾಜ್ಯ ಬಿಜೆಪಿ ಮುಖಂಡರಿಂದ ನೇಸರಗಿ ಭಾಗದ  ರೈತರ ಬೆಳೆ ವೀಕ್ಷಣೆ
ನೇಸರಗಿ. ರಾಜ್ಯದ ಮುಖ್ಯಮಂತ್ರಿ 5 ವರ್ಷ ನಾನೇ ಮುಖ್ಯಮಂತ್ರಿ ಎಂಬ ಮಾತನ್ನು ಹೇಳುವದೇ ಅವರ ಸಾಧನೆ ಆಗಿದೆ. ನಾಳೆ ಬೆಳಗಾವಿಗೆ ಬಂದು ರಿಬ್ಬನ್ ಕಟ್ ಮಾಡಿ ಬಿರಿಯಾನಿ ತಿಂದು ಹೋಗುವದು ಅಷ್ಟೇ ಅವರ ಕೆಲಸ ಅಧಿಕಾರಿಗಳು ಸ್ವಾಗತಿಸಿ ಐ ಬಿ ಗೆ ಕರಕೊಂಡು ಹೋಗಿ ಸಮಾರಂಭ ಮಾಡಿ ಬೀಳ್ಕೊಡುಗೆ ಮಾಡುವದಷ್ಟೇ ಅವರ ಕೆಲಸ ಆಗಿದೆ.



ಇಲ್ಲಿಯವರೆಗೂ ಜಿಲ್ಲಾಧಿಕಾರಿಗಳು, ಜಿಲ್ಲಾ ಮಂತ್ರಿಗಳು ಬೆಳೆ ಸಮೀಕ್ಷೆ ಮಾಡಿಲ್ಲ, ರೈತರ ಗೋಳು ಕೇಳ್ಲಿಲ್ಲ, ಅದಕ್ಕಾಗಿ ಈ ಭಾಗದ ರೈತರ ಬೆಳೆ ಹಾನಿ ವೀಕ್ಷಣೆಗೆ ನಾವು ಬಂದಿಗೂ ಈಗ ಜಿಲ್ಲಾಧಿಕಾರಿಗಳು, ತಹಶೀಲ್ದಾರ, ಅಧಿಕಾರಿಗಳು ಬಂದಿದ್ದು, ರೈತರ 80% ಬೆಳೆ ಹಾನಿ ಅಗಿದ್ದು, ಅತಿಯಾದ ಮಳೆ, ಕಳಪೆ ಬೀಜ, ಕೀಟ ಭಾದೆಯಿಂದ ಹಾಳಾಗಿದ್ದು  ಕೂಡಲೇ ಸರ್ಕಾರ ಎಚ್ಚೆತ್ತು ರೈತರಿಗೆ ಪರಿಹಾರ ನೀಡಬೇಕು. ಇಂದಿನಿಂದಲೇ ನಾವು  ಬೆಳೆ ಪರಿಹಾರ  ನೀಡಲು ಅಗ್ರಹಿಸುತ್ತೇವೆ  ಎಂದು ರಾಜ್ಯ  ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ ಹೇಳಿದರು. ಅವರು ಶುಕ್ರವಾರದಂದು ನೇಸರಗಿ, ಮದನಬಾವಿ, ಮುರಕೀಬಾವಿ, ನಾಗನೂರ  ಗ್ರಾಮಗಳ ಹೊಲಗಳಿಗೆ ಬೇಟಿ ನೀಡಿ, ಬೆಳೆ ವೀಕ್ಷಣೆ ಮಾಡಿ ಮಾತನಾಡಿ ಕೇಂದ್ರ ಸರ್ಕಾರ ಎನ್ ಡಿ ಆರ್ ಎಫ್ ಮೂಲಕ ಪರಿಹಾರ ದೇಶದ ಎಲ್ಲ ರಾಜ್ಯಗಳಿಗೆ ನೀಡಿದೆ ಆದರೆ ಸರ್ಕಾರ ರೈತರಿಗೆ ಯಾವ ಪರಿಹಾರವನ್ನು ನೀಡಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ರೈತರಿಗೆ 25 ಸಾವಿರ ರೂಪಾಯಿಗಳನ್ನು ನೀಡಿದ್ದೇವೆ. ತಕ್ಷಣ ಮುಖ್ಯಮಂತ್ರಿ ಅವರು ಬೆಳೆ ವೀಕ್ಷಣೆ ಮಾಡಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು, ನಮ್ಮ ಅಧಿಕಾರ ಅವಧಿಯಲ್ಲಿ 3 ಲಕ್ಷ ಕೋಟಿ ಬಜೆಟ್ ಇತ್ತು ಈಗ 4 ಲಕ್ಷ ಕೋಟಿ ಇದೆ ಆದರೂ ರೈತರಿಗೆ ಪರಿಹಾರ ನೀಡುತ್ತಿಲ್ಲ. ಅತಿಯಾದ ಮಳೆಯಿಂದ ಮನೆಗಳು ನೀರಿನಿಂದ ಮುಳುಗಿದರು  ನಯಾ ಪೈಸೆ ಪರಿಹಾರ ನೀಡುತ್ತಿಲ್ಲ.ಕೂಡಲೇ ಸರ್ಕಾರ ರೈತರಿಗೆ ಪರಿಹಾರ ನೀಡಬೇಕು ಎಂದು ಅಗ್ರಹಿಸಿದರು.



ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ವಿಧಾನ ಪರಿಷತ ಸದಸ್ಯ ಸಿ ಟಿ ರವಿ ಮಾತನಾಡಿ ರೈತರು ಒಬ್ಬೊಬ್ಬರಾಗಿ ತಮ್ಮ ಬೆಳೆಗಳಿಗೆ ಆದ ತೊಂದರೆ ಹೇಳಲು ವಿನಂತಿಸಿದರು. ಆಗ ರೈತರು ಮಾತನಾಡಿ  ಕಳೆದ ವರ್ಷದ ಇಳುವರಿಯಲ್ಲಿ 80% ಬೆಳೆ ಹಾನಿಯಾಗಿದ್ದು ಏಕರಿಗೆ 2 ಕ್ವಿಂಟಲ್ ಮಾತ್ರ ಸೋಯಾಬಿನ್ ಬಂದಿದ್ದು, ಕಟ್ಟಾವು ಸಮಯದಲ್ಲಿ ಅತಿಯಾದ ಮಳೆ, ಕೀಟ ಭಾದೆ, ಕಳಪೆ ಬೀಜದಿಂದ   ನಮ್ಮ ಬಾಳು ತೊಂದರೆ ಅಗಿದ್ದು ಇಂತಹ ಸಂದರ್ಭದಲ್ಲಿ ಯಾವ ಅಧಿಕಾರಿಗಳು, ಜಿಲ್ಲಾ ಮಂತ್ರಿಗಳು  ಸಮೀಕ್ಷೆ,ವೀಕ್ಷಣೆಗೆ ಬಂದಿಲ್ಲಾ ಎಂದರು.


   



ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿನಗಿ, ಎಮ್ ಎಲ್ ಸಿ ರವಿಕುಮಾರ, ಶಾಸಕರಾದ ಸಿದ್ದು ಸವದಿ, ಅಭಯ ಪಾಟೀಲ,ಶಶಿಕಲಾ ಜೊಲ್ಲೆ, ದುರ್ಯೋಧನ ಐಹೋಳೆ, ಮಾಜಿ ಶಾಸಕರು, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ, ಸಂಜಯ್ ಪಾಟೀಲ್, ರಾಯಬಾಗ್ ಶಾಸಕರಾದ ದುರ್ಯೋಧನ ಐಹೊಳೆ. ಜಗದೀಶ ಮೆಟಗುಡ, ಡಾ. ವಿ ಆಯ ಪಾಟೀಲ,ಮಾಜಿ ಎಮ್ ಎಲ್ ಸಿ ಮಹಾಂತೇಶ ಕವಟಗಿಮಠ, ಡಾ. ರವಿ ಪಾಟೀಲ, ಬೆಳಗಾವಿ ಮಹಾನಗರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ವಿಜಯ ಮೆಟಗುಡ. ಶ್ರೀಕರ್ ಕುಲಕರ್ಣಿ,ಬೆಳಗಾವಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶುಭಾಷ ಪಾಟೀಲ, ಹಿರಿಯ ಮುಖಂಡ ಎಮ್ ಬಿ ಜಿರಲಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಖಜಾಂಚಿ ಮಹಾಂತೇಶ್ ಕೂಲಿನವರ,ಬೈಲಹೊಂಗಲ ಬಿಜೆಪಿ ಮಂಡಳ ಅಧ್ಯಕ್ಷ ಶುಭಾಷ ತುರಮರಿ, ಶ್ರೀಮತಿ ಲಕ್ಷ್ಮೀ ಇನಾಮದಾರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಮೆಟಗುಡ,

ಸಂತೋಷ್ ಹಡಪದ, ನೇಸರಗಿ ಗ್ರಾ ಪಂ ಅಧ್ಯಕ್ಷ ವೀರಭದ್ರ ಚೋಬಾರಿ, ತೇಜಪ್ಪಗೌಡ  ಪಾಟೀಲ, ಸಂಜು ಪಾಟೀಲ, ಮಲ್ಲಿಕಾರ್ಜುನ್ ಸೋಮಣ್ಣವರ, ಮಲ್ಲಪ್ಪ ಮಾಳನ್ನವರ ಸೇರಿದಂತೆ ನೇಸರಗಿ ಭಾಗದ  ಹಲವಾರು ರೈತ ಬಾಂಧವರು ಉಪಸ್ಥಿತರಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ