Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಯೋಗಿ ವೃತ್ತದಲ್ಲಿ ರೈತರಿಂದ ಸಿಹಿ, ಪಟಾಕಿ, ಹಚ್ಚಿ ಸಂಭ್ರಮ

ಅಥಣಿ: ಪ್ರತಿ ಟನ್ ಕಬ್ಬಿಗೆ ರಾಜ್ಯ ಸರಕಾರ 3300 ಘೋಷಣೆ ಮಾಡಿದ ಪರಿಣಾಮ ವಿವಿಧ ರೈತ ಸಂಘಟನೆಗಳು ಕಳೆದ ನಾಲ್ಕು ದಿನಗಳಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಪಡೆದು ಸರಕಾರದ ನಿರ್ಧಾರ ಸ್ವಾಗತಿಸಿ  ವಿಜಯೋತ್ಸವ ಆಚರಿಸಿದವು.


  ಸ್ಥಳೀಯ ಶಿವಯೋಗಿ ವೃತ್ತದಲ್ಲಿ ರೈತರು ಹಮ್ಮಿಕೊಂಡಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ ಸಿದರಾಯ ಭೋಸಗಿ, ರೈತರ ಪ್ರತಿಭಟನೆಗೆ ಮಣಿದು ಪ್ರತಿ ಟನ್ ಕಬ್ಬಿಗೆ 3300 ದರ ನಿಗದಿ ಮಾಡಿದೆ ಮತ್ತು ಸರಕಾರದ ಈ ನಿರ್ಧಾರವನ್ನು ರೈತ ಸಂಘಟನೆಗಳು ಸ್ವಾಗತಿಸಿದ ಹಿನ್ನಲೆಯಲ್ಲಿ ತಾವೂ ಪ್ರತಿಭಟನೆಯನ್ನು ಕೈ ಬಿಡಬೇಕು ಎಂದು ಮನವಿ ಮಾಡಿದರು.


        ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘದ ಮಹಾದೇವ ಮಡಿವಾಳ ಮಾತನಾಡಿ, ರಾಜ್ಯ ಸರಕಾರದ ನಿರ್ಧಾರವನ್ನು ನಾವು ಕೂಡ ಸ್ಚಾಗತಿಸಿಕೊಂಡು ಪ್ರತಿಭಟನೆ ಹಿಂದೆ ಪಡೆದಿದ್ದೇವೆ ಎಂದರು.


ಕರವೇ ಅಧ್ಯಕ್ಷ ಅಣ್ಣಾಸಾಹೇಬ ತೆಲಸಂಗ ಮಾತನಾಡಿ, ರೈತರ ಪ್ರತಿಭಟನೆಗೆ ಅಥಣಿ ಪಟ್ಟಣದ ವ್ಯಾಪಾರಸ್ಥರು, ಕನ್ನಡ ಪರ ಸಂಘಟನೆಗಳು, ಸಾರ್ವಜನಿಕರು ತನು, ಮನ, ಧನದಿಂದ ಸಹಾಯ, ಸಹಕಾರ ಮಾಡಿದ್ದು, ಅವರೆಲ್ಲರಿಗೂ ರೈತ ಸಂಘದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವೆ ಎಂದರು.


ವಿಜಯೋತ್ಸವದಲ್ಲಿ ರೈತ ಮುಖಂಡರು, ಹಾಗೂ ರೈತ ಎಲ್ಲಾ ವಿವಿಧ ಸಂಘಟನೆಯ ಅಧ್ಯಕ್ಷರು, ಕನ್ನಡ ಪರ ಸಂಘಟನೆಗಳು, ವಕೀಲರ ಸಂಘ, ದಲಿತ ಸಂಘಟನೆ, ಮುಸ್ಲಿಂ ಸಮಾಜ, ತಾಲೂಕಾ ಕಟ್ಟಡ ಕಾರ್ಮಿಕರ ಸಂಘದ ಪದಾಧಿಕಾರಿಗಳು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ