Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆ

ಘಟಪ್ರಭಾ: ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರಾಜ್ಯ ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ನೇತ್ರತ್ವದಲ್ಲಿ ಇಂದು ಘಟಪ್ರಭಾ ಎಡದಂಡೆ ಕಾಲುವೆಗೆ ಇಳಿದು ರೈತರು ಪ್ರತಿಭಟನೆ ನಡೆಸಿದರು.
ಘಟಪ್ರಭಾದಲ್ಲಿ ಎಡದಂಡೆ ಕಾಲುವೆ ಮೇಲಿನ ಬ್ರಿಜ್ ತಿಂಗಳ ಹಿಂದೆ ಶಿಥಿಲಗೊಂಡ ಕಾರಣ ಹಳೆ ಬ್ರಿಜ್ ತೆರವುಗೊಳಿಸಿ ಕಳೆದ ಒಂದು ತಿಂಗಳಿನಿಂದ ೫ ಕೋಟಿ ವೆಚ್ಚದಲ್ಲಿ ನೂತನ ಬ್ರಿಜ್ ಕಾಮಗಾರಿ ಬರದಿಂದ ನಡೆಯುತಿತ್ತು. ಪ್ರಯಾಣಿಕರ ಅನುಕೂಲಕ್ಕಾಗಿ ಹಳೆ ಸೇತುವೆ ಪಕ್ಕದಲ್ಲಿ ಎಡದಂಡೆ ಕಾಲುವೆ ಮೇಲೆ ಪೈಪಗಳನ್ನು ಹಾಕಿ ತಾತ್ಕಾಲಿಕ ರಸ್ತೆ ಮಾಡಲಾಗಿತ್ತು. ಇದರಿಂದ ಕಾಲುವೆಗೆ ನೀರು ಬಿಡಲು ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ ಆದರೆ ಇಂದು ರೈತರು ರೊಚ್ಚಿಗೆದ್ದು ತಾತ್ಕಾಲಿಕವಾಗಿ ನಿರ್ಮಿಸಿದ ರಸ್ತೆಯನ್ನು ತೆರವುಗೊಳಿಸಿ ನೀರು ಬಿಡಲು ಆಗ್ರಹಿಸಿದರು. ಒಂದು ಹಂತದಲ್ಲಿ ರೈತರೆ ಕಾಲುವೆಗೆ ಇಳಿದು ತಾತ್ಕಾಲಿಕ ರಸ್ತೆಯನ್ನು ತೆರವುಗೊಳಿಸಲು ಪ್ರಯತ್ನಸಿದರು ಆ ಸಂದರ್ಭದಲ್ಲಿ ರೈತರನ್ನು ಸಮಾಧಾನಪಡಿಸಲು ಅಧಿಕಾರಿಗಳು ಹಾಗೂ ಪೊಲೀಸರು ತುಂಬಾ ಪ್ರಯತ್ನ ಪಟ್ಟರು ಯಾರ ಮಾತನ್ನು ಯಾರು ಕೇಳುವ ಪರಿಸ್ಥಿತಿ ಇಲ್ಲದಿದ್ದ ಕಾರಣ ಹೈಡ್ರಾಮವೆ ನಡೆಯಿತು. ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜಾರಿ ಅಧಿಕಾರಿಗಳನ್ನು ತೀವೃವಾಗಿ ತೆಗೆದುಕೊಂಡು ನೀವು ೫ ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದೀರಿ ಆದರೆ ಕಳೆದ ಒಂದು ತಿಂಗಳಿನಿಂದ ರೈತರ ಬೆಳೆಗೆ ನೀರು ಇಲ್ಲದೆ ಕೋಟ್ಯಾಂತರ ರೂಪಾಯಿ ಬೆಳೆ ಹಾನಿಯಾಗುತ್ತಿದೆ. ದನ-ಕರುಗಳಿಗೆ ನೀರು ಇಲ್ಲದೆ ಸಾಯುತ್ತಿದೆ ಎಂದು ಹೇಳಿದರು.
ಬ್ರಿಜ್ ಶಿಥಿಲಗೊಂಡ ನಂತರ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿಯವರೆ ನೂತನ ಬ್ರಿಜ್ ತಕ್ಷಣ ಮಾಡಿಸಲು ಅಧಿಕಾರಿಗಳಿಗೆ ಆದೇಶಿಸಿ ೪೫ ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಿದ್ದರು ಹಾಗೂ ಕಾಮಗಾರಿ ಪ್ರಾರಂಭಗೊಂಡ ನಂತರ ಸ್ಥಳಕ್ಕೆ ಸಚಿವರು ಈಗಾಗಲೆ ೪ ಬಾರಿ ಭೇಟಿ ನೀಡಿ ಪರಿಶೀಲಿಸಿದ್ದರು. ರಸ್ತೆ ಕಾಮಗಾರಿ ಇನ್ನು ಒಂದು ವಾರದಲ್ಲಿ ಮುಗಿಯುತ್ತಿರುವುದರಿಂದ ಒಂದು ವಾರದ ನಂತರ ನೀರು ಬಿಡುವ ಭರವಸೆಯನ್ನು ಅಧಿಕಾರಿಗಳು ನೀಡಿದರು ರೈತರು ಒಪ್ಪದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಕಾರಣ ಪ್ರಯಾಣಿಕರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ನಿರ್ಮಿಸಿದ ರಸ್ತೆಯನ್ನು ನಾಳೆಯಿಂದಲೆ ತೆರವುಗೊಳಿಸಲು ಅಧಿಕಾರಿಗಳು ಸೂಚಿಸಿದ್ದು ಮುಂದಿನ ೪ ದಿನ ಪ್ರಯಾಣಿಕರು ಬೇರೆ ರಸ್ತೆಯಲ್ಲಿ ಪ್ರಯಾಣಿಸಲು ಸೂಚನೆ ನೀಡಿದರು. ಹಾಗೂ ಜಿಲ್ಲಾಧಿಕಾರಿಗಳು ದಿ.೨೦ರಿಂದ ನೀರು ಬಿಡಲು ಭರವಸೆ ನೀಡಿದ್ದರಿಂದ ಸುಮಾರು ೪ ಗಂಟೆಯ ಪ್ರತಿಭಟನೆಯ ನಂತರ ರೈತರು ಪ್ರತಿಭಟನೆಯನ್ನು ವಾಪಸು ಪಡೆದರು.
ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಡಾ|| ಮೋಹನ ಭಸ್ಮೆ, ಘಟಪ್ರಭಾ ಠಾಣೆಯ ಪಿಐ ಎಚ್.ಡಿ.ಮುಲ್ಲಾ, ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ, ಗೋಕಾಕ ಸಿಪಿಐ ಸುರೇಶ ಬಾಬು, ಸಂಕೇಶ್ವರ ಸಿಪಿಐ, ಮತ್ತು ಸುತ್ತ-ಮುತ್ತಲಿನ ಪೊಲೀಸ್ ಠಾಣೆಯ ಪಿಎಸ್‌ಐ, ನೀರಾವಾರಿ ಇಲಾಖೆಯ ಅಧಿಕಾರಿ ನಾಗೇಶ ಕೊಲ್ಕಾರ ಮತ್ತು ದುಂಡಪ್ಪ ಜೊಕ್ಕಾನಟ್ಟಿ, ಸಚಿವರ ಅಪ್ತ ಸಹಾಯಕ ಶಿವು ಪಾಟೀಲ, ಪಿಡಬ್ಲ್ಯೂಡಿ ಅಧಿಕಾರಿ ರಾಮಚಂದ್ರ ಅವತಾಡೆ ಹಾಜರಿದ್ದರು ಹಾಗೂ ರಾಯಬಾಗ, ಹುಕ್ಕೇರಿ, ಮೂಡಲಗಿ ಭಾಗದ ನೂರಾರು ರೈತರು ಪ್ರತಿಭಟನೆಗೆ ಆಗಮಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ