Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಸೇವೆ ಸ್ಮರಣೀಯ: ಮೇಯರ್ ಪಿ.ಗಾದೆಪ್ಪ

ಬಳ್ಳಾರಿ,ಡಿ.24..ಯಾವುದೇ ಆಸೆ ಇಲ್ಲದೇ ದೇಶಕ್ಕಾಗಿ, ಜನರಿಗಾಗಿ ಕಷ್ಟಪಟ್ಟು ದುಡಿದು ಬೆಳೆ ಬೆಳೆಯುವ ರೈತರ ಸೇವೆ ಸ್ಮರಣೀಯವಾಗಿದೆ ಎಂದು ಬಳ್ಳಾರಿ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷರೂ ಆಗಿರುವ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ ಅವರು ಹೇಳಿದರು.
ಕೃಷಿ ಇಲಾಖೆಯ ಆತ್ಮ ಯೋಜನೆ, ಕೃಷಿ ವಿಜ್ಞಾನ ಕೇಂದ್ರ ಹಗರಿ ಹಾಗೂ ಬಳ್ಳಾರಿ ತಾಲ್ಲೂಕು ಕೃಷಿಕ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ತಾಲ್ಲೂಕಿನ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಅಂತರಾಷ್ಟಿçÃಯ ರೈತ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಕಿಸಾನ್ ಗೋಷ್ಠಿ ಕಾರ್ಯಕ್ರಮ ಹಾಗೂ ರೈತ, ರೈತ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೈತರ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಅವರಿಗೆ ಗೌರವ ಸಮರ್ಪಣೆ ಮಾಡುವುದಕ್ಕಾಗಿ ರೈತರ ದಿನಾಚರಣೆ ಆಚರಿಸಲಾಗುತ್ತದೆ ಎಂದರು.
ಕೃಷಿ ಮಹಾವಿದ್ಯಾಲಯದ ಪಶು ವಿಜ್ಞಾನದ ಪ್ರಾಧ್ಯಾಪಕ ಡಾ.ರಮೇಶ್ ಅವರು ಮಾತನಾಡಿ, ರೈತರು ಸುಸ್ಥಿರ ಕೃಷಿ ಕಡೆ ಗಮನ ನೀಡಿ, ಹೆಚ್ಚಿನ ಇಳುವರಿ ಪಡೆಯುವ ಮೂಲಕ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕು. ಭೂಮಿಯ ಒಡಲನ್ನು ರಕ್ಷಿಸುವುದಕ್ಕಾಗಿ ನೈಸರ್ಗಿಕ ಕೃಷಿಯ ಮೇಲೆ ಅವಲಂಬಿತರಾಗಬೇಕು ಎಂದು ರೈತರಿಗೆ ತಿಳಿಸಿದರು.
ಹಗರಿ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ. ರವಿ ಅವರು ಮಾತನಾಡಿ, ಮಣ್ಣು ರೈತರ ಕಣ್ಣು. ಮಣ್ಣಿಂದಲೇ ಜಗದ ಉಗಮ. ಮಣ್ಣನ್ನು ನಾವು ಮುಂದಿನ ಪೀಳಿಗೆಯವರೆಗೂ ಕಾಪಾಡಬೇಕು. ಅತಿಯಾದ ರಾಸಾಯನಿಕ ಬಳಕೆಯನ್ನು ತಪ್ಪಿಸಿ ಸುಸ್ಥಿರ ಕೃಷಿಯೆಡೆಗೆ ಹೆಜ್ಜೆ ಇಡಬೇಕು ಎಂದು ಕರೆ ನೀಡಿದರು.
ಬಳ್ಳಾರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶ ಹಸಿವು ಮುಕ್ತ ಮಾಡುವಲ್ಲಿ ರೈತರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಗರಿಯ ಕೃಷಿ ಕಾಲೇಜಿನ ಪ್ರಭಾರ ಅಧಿಕಾರಿ ಡಾ. ರವಿಶಂಕರ್ ಅವರು  ಮಣ್ಣಿನ ಮಹತ್ವ, ನೀರು ಮತ್ತು ಮಣ್ಣು ಸಂರಕ್ಷಣೆ ಕುರಿತು ವಿಷಯ ಮಂಡನೆ ಮಾಡಿದರು. ಕೃಷಿ ಅಧಿಕಾರಿ ಬಸವರಾಜ ಸಿಂಧಿಗೇರಿ, ಕೃಷಿ ಇಲಾಖೆಯಡಿ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಪ್ರಗತಿಪರ ರೈತರಾದ ಕಾರೇಕಲ್ಲು ವೀರಾಪುರದ ಭೋಗಾರೆಡ್ಡಿ, ಎತ್ತಿನ ಬೂದಿಹಾಳು ಗ್ರಾಮದ ಗಾಳೆಪ್ಪ, ದಮ್ಮೂರು ಗ್ರಾಮದ ನಿತೀಶ್  ಹಾಗೂ  ಇಬ್ರಾಹಿಂಪುರದ ರವಿಕುಮಾರ್ ಇವರು ತಮ್ಮ ಕೃಷಿ ಅನುಭವವನ್ನು ರೈತರಲ್ಲಿ ಹಂಚಿಕೊAಡರು.
ತದನಂತರ ರೈತರೆಲ್ಲರೂ ಕೃಷಿ ವಿಜ್ಞಾನ ಕೇಂದ್ರ ಹಗರಿಯ ಕುಸುಬೆ ಕ್ಷೇತ್ರಕ್ಕೆ ಭೇಟಿ ನೀಡಲಾಯಿತು. ಫ್ಯಾಕ್ಟ್ ಕಂಪನಿಯವರು ಡ್ರೋನ್ ಮೂಲಕ ನ್ಯಾನೋ ಯೂರಿಯಾವನ್ನು ಕುಸುಬೆ ಬೆಳೆಗೆ ಸಿಂಪಡಿಸುವುದನ್ನು ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶಿಸಿದರು ಹಾಗೂ ಫ್ಯಾಕ್ಟ್ ಸೇಲ್ಸ್ ಮ್ಯಾನೇಜರ್ ರೇವಂತ್ ಮಣ್ಣು ಮಾದರಿ ಸಂಗ್ರಹಿಸುವ ವಿಧಾನ ತೋರಿಸಿಕೊಟ್ಟರು.
ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲ್ಲೂಕು ಮಟ್ಟದಿಂದ 05 ರೈತ, ರೈತ ಮಹಿಳೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಕ್ಕಬೇವಿನಹಳ್ಳಿ ಗ್ರಾಮದ ಲಕ್ಷಿö್ಮಪುತ್ರಪ್ಪ, ಕುಂಬಳಪ್ಪ ತಂಬ್ರಳ್ಳಿ ಗ್ರಾಮ, ಕಾರೇಕಲ್ಲು ವೀರಾಪುರದ ರಾಜಶೇಖರ ರೆಡ್ಡಿ, ದಮ್ಮೂರು ಗ್ರಾಮದ ನಿರ್ಮಲ ಹಾಗೂ ಬಾದನಹಟ್ಟಿ ಗ್ರಾಮದ ಚಾನಾಳು ಕವಿತಾ ಇವರಿಗೆ ಸನ್ಮಾನಿಸಿ ಪ್ರಶಸ್ತಿಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಕೃಷಿ ವಿಸ್ತರಣಾ ವಿಜ್ಞಾನಿ ಡಾ.ನವೀನ್, ಫ್ಯಾಕ್ಟ್ ಕಂಪನಿಯ ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಪಳನಿಸ್ವಾಮಿ, ತಾಲ್ಲೂಕು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಉಪಾಧ್ಯಕ್ಷ ಗೋಡೆಹಾಳ್ ಸತ್ಯನಾರಾಯಣರೆಡ್ಡಿ, ಸಮಿತಿ ಖಜಾಂಚಿ ವೈ.ಲಿಂಗಾರಾಜು, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವೈ.ಗಿರಿಗೋವಿಂದಪ್ಪ, ಕೆ.ರಾಮಣ್ಣ, ಎಸ್.ಸಮುದ್ರರಾಜ್, ವೈ.ಗೋಪಾಲರೆಡ್ಡಿ, ಕೃಷಿ ಅಧಿಕಾರಿಗಳಾದ ಜಂಬಣ್ಣ, ಜ್ಯೋತಿ, ಗಾಯಿತ್ರಿ, ಆತ್ಮ ಯೋಜನೆಯ ಸಿಬ್ಬಂದಿಗಳಾದ ಕವಿತಾ ಕುಮಾರಿ, ವಾಣಿ ಕೋರಪ್ಪಳ, ಶಿಲ್ಪಾ, ಕೃಷಿ ಸಂಜೀವಿನಿ ಸಿಬ್ಬಂದಿ ಮಣಿಕೃಷ್ಣ ಸೇರಿದಂತೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕಿನ ರೈತರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ