Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಅನುಕೂಲಕ್ಕೆ ರಸಗೊಬ್ಬರ ಮಳಿಗೆ ಪ್ರಾರಂಭ - ಆನಂದ ನ್ಯಾಮಗೌಡ



 ಜಮಖಂಡಿ; ರೈತರಿಗೆ ಸಕಾಲಕ್ಕೆ ಯೋಗ್ಯದರದಲ್ಲಿ ರಸಗೊಬ್ಬರ, ಕ್ರಮಿನಾಶಕಗಳು ಹಾಗೂ ಉತ್ತಮ ಕಂಪನಿಗಳ ಬೀಜ ದೊರಕಿಸಿಕೊಡುವ ಉದ್ದೇಶ ದಿಂದ ನೂತನ ರಸಗೊಬ್ಬರ ಮಳಿಗೆಯನ್ನು ಪ್ರಾರಂಭಿಸಲಾಗಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು. ಎಪಿಎಂಸಿ ಆರವಣದಲ್ಲಿ ಗುರುವಾರ ಶ್ರೀಸಿದ್ಧು ನ್ಯಾಮಗೌಡ ಸಹಕಾರ ಸಂಘದ ಆಶ್ರಯದಲ್ಲಿ ಪ್ರಾಂಭಿಸಲಾದ ನೂತನ ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಹಕಾರ ಸಂಘ ಕಳೆದ ಆರು ವರ್ಷಗಳಲ್ಲಿ ಉತ್ತಮ ಸಾಧನೆ ಮಾಡಿದ್ದು, 431 ಕೋಟಿಗಳಷ್ಟು ಠೇವಣಿ ಹೊಂದಿದೆ. 16916 ಜನ ಸದಸ್ಯರಿದ್ದು, 31 ಲಕ್ಷದಷ್ಟು ಶೇರು ಬಂಡವಾಳ ಹೊಂದಿದೆ. ಕಳೆದ 3 ತಿಂಗಳಲ್ಲಿ 10.18 ಲಕ್ಷ ಠೇವಣಿ ಹೊಂದಿದೆ. 6 ವರ್ಷಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಲಾಭದಲ್ಲಿದೆ. ಲಾಭಾಂಶವನ್ನು ಸದಸ್ಯರಿಗೆ ಹಂಚಲಾಗಿದೆ. ಪ್ರಸಕ್ತ ಸಾಲಿನ 4 ಕೋಟಿ10 ಲಕ್ಷರೂ. ಲಾಭಾಂಶವನ್ನು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವದು ಎಂದು ಹೇಳಿದರು. ಸಧ್ಯ 5 ಬ್ರ್ಯಾಂಚ್‌ಗಳಿದ್ದು ಇನ್ನೂ ಐದು ಹೊಸ ಶಾಖೆಳನ್ನು ಪ್ರಾರಂಭಿಸಲು ಯೋಚಿಸಲಾಗಿದೆ.

ಮುತ್ತಿನಕಂತಿ ಮಠದ ಪಂಡಿತಾರಾಧ್ಯ ಶಿವಲಿಂಗ ಶಿವಾಚಾರ್ಯರು, ಓಲೆ ಮಠದ ಆನಂದ ದೇವರು ರಸಗೊಬ್ಬರದ ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಸವರಾಜ ನ್ಯಾಮಗೌಡ, ಮುಖಂಡರಾದ ಬಿ.ಎಸ್‌.ಸಿಂಧೂರ, ವರ್ಧಮಾನ ನ್ಯಾಮಗೌಡ, ನಗರಸಭೆ ಅಧ್ಯಕ್ಷ ಪರಮಾನಂದ ಗೌರೋಜಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅನ್ವರ ಮೋಮಿನ, ನಗರಸಭೆಯ ಸದಸ್ಯರಾದ ಸಿದ್ದು ಮೀಸಿ, ಈಶ್ವರ ವಾಳೆಣ್ಣವರ,ಅರುಣ ಕುಮಾರ ಶಾ, ಸೇರಿದಂತೆ ನಗರದ ಪ್ರಮುಖರು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ