Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರೂಣಲಿಂಗ ಪತ್ತೆ: ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ

ನಕಲಿ ವೈದ್ಯರ ವಿರುದ್ಧವೂ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ವಿಶೇಷ ತಂಡದ ಕಾರ್ಯಾಚರಣೆ ಚುರುಕುಗೊಳಿಸಿ
ವಿಜಯಪುರ, ಜು.೦೯: ವಿಜಯಪುರ ಗಡಿ ಜಿಲ್ಲೆಯಾಗಿರುವುದರಿಂದ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯದಂತೆ ಕಣ್ಗಾವಲು ಇರಿಸಲು ಈ ಕಾಯ್ದೆಯಡಿ ರಚಿತವಾದ ತಂಡ ನಿಯಮಿತವಾಗಿ ತಪಾಸಣೆ ಮತ್ತು ದಿಢೀರ ಕಾರ್ಯಾಚರಣೆಯನ್ನು ಕೈಗೊಂಡು ಇಂತಹ ಪ್ರಕರಣ ಜಿಲ್ಲೆಯಲ್ಲಿ ನಡೆಯದಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಹಾಗೂ ಸ್ಕ್ಯಾನಿಂಗ್ ಕೇಂದ್ರಗಳ ಪರಿಶೀಲನೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕೆಪಿಎಂಇ ಜಿಲ್ಲಾ ನೋಂದಣಿ ಮತ್ತು ಕುಂದುಕೊರತೆ ನಿವಾರಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಗರ್ಭಿಣಿಯರು ಕಂಡು ಬಂದರೆ ಅಂಥವರ ಮಾಹಿತಿಯನ್ನು ಸಹಾಯವಾಣಿ ೧೦೯೮ ಗೆ ಕರೆ ಮಾಡಲು ತಿಳಿಸಿ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಪ್ರಕರಣಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಪ್ರವೃತವಾಗಿ ಕೆಲಸ ನಿರ್ವಹಿಸಬೇಕೆಂದು ಸೂಚಿಸಿದರು.
ವಿಜಯಪುರ ತಾಲೂಕಿನಲ್ಲಿ ೭೪೨ ಖಾಸಗಿ ಆರೋಗ್ಯ ಸಂಸ್ಥೆಗಳು ಜಿಲ್ಲಾ ಕೆ.ಪಿ.ಎಂ.ಇ ಅಡಿಯಲ್ಲಿ ನೋಂದಣಿ ಆಗಿರುತ್ತದೆ. ಬ.ಬಾಗೇವಾಡಿ ತಾಲೂಕಿನಲ್ಲಿ ೧೦೯, ಮುದ್ದೇಬಿಹಾಳ ತಾಲೂಕಿನಲ್ಲಿ ೧೧೫, ಇಂಡಿ ತಾಲೂಕಿನಲ್ಲಿ ೧೫೨. ಸಿಂದಗಿ ತಾಲೂಕಿನಲ್ಲಿ ೧೫೭, ಒಟ್ಟು ೧೨೭೫ ಖಾಸಗಿ ಆಸ್ಪತ್ರೆಗಳು ನೋಂದಣಿ ಆಗಿರುತ್ತವೆ. ಜಿಲ್ಲೆಯಲ್ಲಿ ನೋಂದಣಿಗೊಂಡ ಪ್ರತಿಯೊಂದು ಖಾಸಗಿ ಆರೋಗ್ಯ ಸಂಸ್ಥೆಗಳು ಕಡ್ಡಾಯವಾಗಿ ನಿರ್ದಿಷ್ಟಪಡಿಸಿದ ವೈದ್ಯಕೀಯ ಚಿಕಿತ್ಸಾ ಪದ್ಧತಿ, ಸಂಸ್ಥೆಯ ಹೆಸರು, ಮಾಲಿಕರು, ನೋಂದಣಿ ಸಂಖ್ಯೆಗಳ ಬಣ್ಣದ ಫಲಕವನ್ನು ಪ್ರದರ್ಶಿಸುವಂತೆ ಸಭೆಯಲ್ಲಿ ಹಾಜರಿದ್ದ ತಾಲೂಕಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಇನ್ನು ಮುಂದೆ ಜಿಲ್ಲೆಯಲ್ಲಿ ನವೀಕರಣಕ್ಕಾಗಿ ಅರ್ಜಿ ಸಲ್ಲಿಸುವ ಖಾಸಗಿ ಆರೋಗ್ಯ ಸಂಸ್ಥೆಗಳು ಕಡ್ಡಾಯವಾಗಿ ನಿರ್ದಿಷ್ಟಪಡಿಸಿದ ಬಣ್ಣದ ಫಲಕ ಅಳವಡಿಸಿದರೆ ಮಾತ್ರ ಕೆ.ಪಿ.ಎಂ.ಇ ಅಡಿ ಅನುಮೋದನೆ ನೀಡುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ನಕಲಿ ವೈದ್ಯರ ವಿರುದ್ಧವೂ ಕ್ರಮಕ್ಕೆ ಸೂಚನೆ: ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸಲು ವಿಶೇಷ ಕಾರ್ಯಪಡೆ ತಂಡವು ಪ್ರತಿ ವಾರ ಒಂದು ತಾಲೂಕಿಗೆ ಅನಿರೀಕ್ಷಿತ ಭೇಟಿ ನೀಡಿ ನಕಲಿ ವೈದ್ಯರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಿ ವರದಿ ಸಲ್ಲಿಸಲು ಎಲ್ಲ ತಾಲೂಕಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚಿಸಿದರು.
ಜಿಲ್ಲೆಯಲ್ಲಿ ನಕಲಿ ವೈದ್ಯರ ಬಗ್ಗೆ ಖಚಿತ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ನೇರವಾಗಿ ಸಂಬಂಧಪಟ್ಟ ತಾಲೂಕಾ ಆರೋಗ್ಯಾಧಿಕಾರಿಗಳಿಗೆ ವಿವರವಾದ ಮಾಹಿತಿ ನೀಡಲು ಮನವಿ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ