ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಿಂದ ಇಡೀ ದೇಶ ದುಃಖಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಯೋತ್ಪಾದನೆಯನ್ನು ಹತ್ತಿಕ್ಕಲು ಮತ್ತು ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ.
ಭಯೋತ್ಪಾದಕ ದಾಳಿಯ ವಿರುದ್ಧ ಕ್ರಮ ಕೈಗೊಳ್ಳಲು ಬುಧವಾರ ಪ್ರಧಾನಿಯವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ಸೇರಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದಾಳಿಯಲ್ಲಿ ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದಾರೆ. ಇತರ ಹಲವರು ಗಾಯಗೊಂಡರು.
ಗುರುವಾರ ಸಂಜೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕೇಂದ್ರವು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಮಾಹಿತಿ ನೀಡಲಿದ್ದು, ಅವರ ಅಭಿಪ್ರಾಯಗಳನ್ನು ಕೇಳಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.