ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್ಸಿ ಶಾಸಕರ ನಡುವೆ ಹೊಡೆದಾಟವೇ ನಡೆಯಿತು.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಅಂಗೀಕರಿಸಿದೆ.
ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.