Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿರೀಷ ಜೋಶಿಗೆ ಚಲನಚಿತ್ರ ಅಕಾಡೆಮಿ ಪ್ರಶಸ್ತಿ



ಬೆಳಗಾವಿ - ಹಿರಿಯ ಸಾಹಿತಿ, ರಂಗಕರ್ಮಿ ಶಿರೀಷ ಜೋಶಿಯವರಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ಲಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮ್ಯ ಮೈಸೂರಿನಲ್ಲಿ ಪ್ರದಾನ ಮಾಡಿದರು.


ವಿಶಾಲ್ ರಾಜ್ ನಿರ್ದೇಶಿಸಿರುವ ಸಾವಿತ್ರಿಬಾಯಿ ಫುಲೆ ಚಲನಚಿತ್ರದ ಸಂಭಾಷಣೆಗಾಗಿ ಶಿರೀಷ್ ಜೋಶಿಯವರಿಗೆ 2018 -19ನೇ ಸಾಲಿನ ಪ್ರಶಸ್ತಿ ಲಭಿಸಿದೆ. ಮೈಸೂರಿನ ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ನಡೆದ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಪ್ರಶಸ್ತಿಪ್ರದಾನ ಸಮಾರಂಭದಲ್ಲಿ  ಅತ್ಯುತ್ತಮ ಸಂಭಾಷಣೆಕಾರ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನವೆಂಬರ್  3ರಂದು ಪ್ರದಾನ ಮಾಡಿದರು.

ಶಿರೀಷ ಜೋಶಿಯವರು 2018ರಲ್ಲಿ ಬಿಡುಗಡೆಯಾದ ಸಾವಿತ್ರಿಬಾಯಿ ಫುಲೆ ಚಲನಚಿತ್ರಕ್ಕಾಗಿ ಸಂಭಾಷಣೆ ಬರೆದಿದ್ದರು.  ಈ ಪ್ರಶಸ್ತಿಯು 100 ಗ್ರಾಂ ಬೆಳ್ಳಿಯ ಪದಕ, ಸ್ಮರಣಿಕೆ, 20 ಸಾವಿರ ರೂ. ನಗದು, ಮತ್ತು ಪ್ರಶಸ್ತಿ ಫಲಕಗಳನ್ನು ಹೊಂದಿದೆ. ಡಾ.ಸರಜೂ ಕಾಟ್ಕರ್ ಅವರ ಸಾವಿತ್ರಿಬಾಯಿ ಫುಲೆ ಕಾದಂಬರಿಯನ್ನಾಧರಿಸಿದ ಈ ಚಲನಚಿತ್ರವನ್ನು ವಿಶಾಲರಾಜ್ ಅವರು ನಿದೇಶಿಸಿದ್ದು ನಾಗರಾಜ ಆದವಾನಿಯವರ ಛಾಯಾಗ್ರಹಣವಿದೆ. ಸತೀಶ ಕುಲಕರ್ಣಿ ಸಾಹಿತ್ಯ ಒದಗಿಸಿದ್ದಾರೆ. ಬೆಳಗಾವಿ ಜಿಲ್ಲೆಯವರೇ ಆದ ಯಾದವಾಡದ ಬಸವರಾಜ ಭೂತಾಳಿಯವರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ. ಇವರೆಲ್ಲರ ಸಹಕಾರವನ್ನು ಶಿರೀಷ ಜೋಶಿ ಈ ಸಂದರ್ಭದಲ್ಲಿ ಸ್ಮರಿಸಿಕೊಂಡು ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಬೆಳಗಾವಿಯ ರಂಗಸೃಷ್ಟಿಯ ಅಧ್ಯಕ್ಷ ರಮೇಶ ಜಂಗಲ, ಉಪಾಧ್ಯಕ್ಷ ಎಂ.ಕೆ.ಹೆಗಡೆ, ಶೈಲಜಾ ಭಿಂಗೆ, ಡಾ.ರಾಮಕೃಷ್ಣ ಮರಾಠೆ ಹಾಗೂ ಎಲ್ಲ ಸದಸ್ಯರು ಶಿರೀಷ ಜೋಶಿಯವರನ್ನು ಅಭಿನಂದಿಸಿದ್ದಾರೆ. ಸ್ಥಳೀಯ ಕಲಾವಿದರನ್ನು ಬಳಸಿಕೊಂಡು ನಿರ್ಮಿಸಲಾದ ಈ ಚಿತ್ರದಲ್ಲಿ ಉತ್ತರ ಕರ್ನಾಟಕದ ಅನೇಕ ನಟ-ನಟಿಯರು ಅಭಿನಯಿಸಿದ್ದು, ಬೆಳಗಾವಿ ಜಿಲ್ಲೆಯ ಪಾಚ್ಛಾಪುರ, ಎಲಿಮುನವಳ್ಳಿ, ಹುದಲಿ, ಗೋಕಾಕ ಫಾಲ್ಸ್ ಮುಂತಾದೆಡೆಗಳಲ್ಲಿ ಈ ಚಲನಚಿತ್ರದ ಚಿತ್ರೀಕರಣ ನಡೆದಿರುವುದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳಬಹುದು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ